Homeಮುಖಪುಟ'ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

- Advertisement -
- Advertisement -

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ ಡಾ. ಸುರೇಶ್‌ ಹನಗವಾಡಿ ಹಾಗೂ ಬೆಂಗಳೂರಿನ ಸಮಾಜ ಸೇವಕಿ ಎಸ್‌.ಜಿ ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಬಸ್ ಕಂಡಕ್ಟರ್ ಆಗಿದ್ದ ಅಂಕೇಗೌಡ ಅವರು ವಿಶ್ವದ ಅತಿದೊಡ್ಡ ಉಚಿತ ಪ್ರವೇಶ ಗ್ರಂಥಾಲಯವೆಂದು ಗುರುತಿಸಲ್ಪಟ್ಟಿರುವ ‘ಪುಸ್ತಕ ಮನೆ’ ಯನ್ನು ಸ್ಥಾಪಿಸಿದ್ದಾರೆ. ಅಪರೂಪದ ಹಸ್ತಪ್ರತಿಗಳನ್ನು ಒಳಗೊಂಡಂತೆ 20 ಭಾಷೆಗಳ 20 ಲಕ್ಷಕ್ಕಿಂತ ಹೆಚ್ಚು ಪುಸ್ತಕಗಳನ್ನು ಈ ಗ್ರಂಥಾಲಯ ಹೊಂದಿದೆ.

ಪಾಂಡವಪುರ ತಾಲೂಕಿನ ಹರಳಹಳ್ಳಿ ಗ್ರಾಮದ 75 ವರ್ಷದ ‘ಗ್ರಂಥಪಾಲಕ’ ಅಂಕೇಗೌಡರನ್ನು ಶಿಕ್ಷಣ ಕ್ಷೇತ್ರದಲ್ಲಿ ಸಮಾಜಮುಖಿ ಸೇವೆ ಹಾಗೂ ಜ್ಞಾನ ಸಬಲೀಕರಣಕ್ಕೆ ನೀಡಿದ ವಿಶಿಷ್ಟ ಕೊಡುಗೆಗಾಗಿ ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಏಷ್ಯಾದ ಮೊದಲ ಮಾನವ ಹಾಲಿನ ಬ್ಯಾಂಕ್ ಸ್ಥಾಪಿಸಿದ ಮುಂಬೈ ಮೂಲದ ಮಕ್ಕಳ ತಜ್ಞೆ ಅರ್ಮಿಡಾ ಫೆರ್ನಾಂಡಿಸ್, ಮಧ್ಯಪ್ರದೇಶದ ಬುಂದೇಲಿ ಸಮರಕಲೆ ತರಬೇತುದಾರ ಭಗವಾನ್‌ದಾಸ್ ರಾಯ್ಕ್ವಾರ್, ಮಹಾರಾಷ್ಟ್ರದ 90 ವರ್ಷದ ಬುಡಕಟ್ಟು ತರ್ಪ ವಾದಕ ಭಿಕ್ಲ್ಯಾ ಲಡಕ್ಯಾ ದಿಂಡಾ (ಸೋರೆಕಾಯಿ ಮತ್ತು ಬಿದಿರಿನಿಂದ ತಯಾರಿಸಿದ ಸಂಗೀತ ವಾದ್ಯ), ಜಮ್ಮು ಮತ್ತು ಕಾಶ್ಮೀರದ ಸಮಾಜ ಸೇವಕ ಬ್ರಿಜ್ ಲಾಲ್ ಭಟ್ ಪ್ರಶಸ್ತಿಗಳಿಗೆ ಆಯ್ಕೆಯಾದ ಇತರ ಪ್ರಮುಖರು

ಗಣರಾಜ್ಯೋತ್ಸವದ ಮುನ್ನಾದಿನವಾದ ಭಾನುವಾರ (ಜ.25) ಕೇಂದ್ರ ಗೃಹ ಸಚಿವಾಲಯ ಈ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ವಿವರ ನೀಡಿದೆ. ಇದು ಅಧಿಕೃತವಾಗಿ ಪ್ರಕಟವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...