Homeಕರ್ನಾಟಕಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

- Advertisement -
- Advertisement -

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಗುರುವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದ ಅವರು, ಅಂಕೋಲಾ ತಾಲೂಕಿನ ಬಡಿಗೆರಿ ಗ್ರಾಮದ ತಮ್ಮ ಮನೆಯಲ್ಲಿ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಉತ್ತರ ಕನ್ನಡ ಜಿಲ್ಲೆಯ ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದೇ ಪ್ರಸಿದ್ಧರು. ಹಾಲಕ್ಕಿ ಜಾನಾಂಗ ಜಾನಪದ ಕೋಗಿಲೆ ಎಂದೂ ಜನಪ್ರಿಯರಾಗಿರುವ ಅವರು, ಹಾಲಕ್ಕಿ ಜಾನಪದ ಹಾಡುಗಳ ಜೊತೆ ಮದ್ಯ ನಿಷೇಧ ಹೋರಾಟ ಸೇರಿದಂತೆ ಹಲವು ಹೋರಾಟದಲ್ಲಿ ಭಾಗಿಯಾಗಿದ್ದರು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಹೋರಾಟಗಳ ಮೂಲಕ ಅವರು ಅಂಕೋಲದ ಬಡಿಗೇರಿ ಗ್ರಾಮವನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದರು. ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿಗೆ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿವೆ.

ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಜನರು ಕಂಬನಿ ಮಿಡಿದಿದ್ದಾರೆ.

“ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ ‘ಸುಕ್ರಜ್ಜಿ’ ಅವರಿಗೆ ಸಂಗೀತವೇ ಬದುಕಾಗಿತ್ತು.” ಎಂದು ಸಿಎಂ ಹೇಳಿದ್ದಾರೆ.

“ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು. ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದುಃಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು ಎಂದು ಹೇಳಿದ್ದಾರೆ.

“ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ. ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಹೆಮ್ಮೆ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌ ಎಂದು ಹೇಳಿದ್ದಾರೆ.

“ಸುಕ್ರಿ ಬೊಮ್ಮ ಗೌಡ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ,ಅವರ ಕುಟುಂಬ ವರ್ಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಸಂತಾಪ ತಿಳಿಸಿದ್ದಾರೆ.

“ಜಾನಪದ ಗಾನಕೋಗಿಲೆ ‘ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮು ಗೌಡ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಯಿತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿದ ಇವರು ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ಕಳೆದುಕೊಂಡಿರುವುದು ಜಾನಪದ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಚಿವ ಮಂಕಾಳ ವೈದ್ಯ ಸಂತಾಪ ಸೂಚಿಸಿದ್ದಾರೆ.

“ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನವರಾದ, ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ ( ಸುಕ್ರಜ್ಜಿ) ನಿಧನದ ಸುದ್ದಿ ಬೆಳ್ಳಂಬೆಳಿಗ್ಗೆ ಬರಸಿಡಿಲು ಬಡಿದಂತಾಯಿತು. 5000ಕ್ಕೂ ಹೆಚ್ಚು ಹಾಲಕ್ಕಿ, ಜನಪದ ಹಾಡುಗಳನ್ನ ಕಂಠಪಾಠ ಮಾಡಿಕೊಂಡಿದ್ದ ಅಜ್ಜಿ, ‘ಜಾನಪದ ಕೋಗಿಲೆ’ ಎಂದೇ ಪ್ರಸಿದ್ದಳಾಗಿದ್ದರು. ಲೋಕಸಭಾ ಚುನಾವಣೆಯ ಸಂದರ್ಭ ಮಗಳಂತೆ ನನ್ನನ್ನ ಆತ್ಮೀಯವಾಗಿ ಮಾತನಾಡಿಸಿ, ಗಲ್ಲವನ್ನ ಹಿಡಿದು ಸವರಿದ ಆ ಕ್ಷಣ ಇನ್ನೂ ಹಸಿರಾಗೇ ಇದೆ. ಓಂ ಶಾಂತಿ” ಎಂದು ಕಾಂಗ್ರೆಸ್‌ ನಾಯಕಿ ಡಾ. ಅಂಜಲಿ ನಿಂಬಾಳ್ಕರ್‌ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...