Homeಕರ್ನಾಟಕಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

- Advertisement -
- Advertisement -

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಗುರುವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದ ಅವರು, ಅಂಕೋಲಾ ತಾಲೂಕಿನ ಬಡಿಗೆರಿ ಗ್ರಾಮದ ತಮ್ಮ ಮನೆಯಲ್ಲಿ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಉತ್ತರ ಕನ್ನಡ ಜಿಲ್ಲೆಯ ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದೇ ಪ್ರಸಿದ್ಧರು. ಹಾಲಕ್ಕಿ ಜಾನಾಂಗ ಜಾನಪದ ಕೋಗಿಲೆ ಎಂದೂ ಜನಪ್ರಿಯರಾಗಿರುವ ಅವರು, ಹಾಲಕ್ಕಿ ಜಾನಪದ ಹಾಡುಗಳ ಜೊತೆ ಮದ್ಯ ನಿಷೇಧ ಹೋರಾಟ ಸೇರಿದಂತೆ ಹಲವು ಹೋರಾಟದಲ್ಲಿ ಭಾಗಿಯಾಗಿದ್ದರು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಹೋರಾಟಗಳ ಮೂಲಕ ಅವರು ಅಂಕೋಲದ ಬಡಿಗೇರಿ ಗ್ರಾಮವನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದರು. ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿಗೆ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿವೆ.

ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಜನರು ಕಂಬನಿ ಮಿಡಿದಿದ್ದಾರೆ.

“ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ ‘ಸುಕ್ರಜ್ಜಿ’ ಅವರಿಗೆ ಸಂಗೀತವೇ ಬದುಕಾಗಿತ್ತು.” ಎಂದು ಸಿಎಂ ಹೇಳಿದ್ದಾರೆ.

“ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು. ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದುಃಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು ಎಂದು ಹೇಳಿದ್ದಾರೆ.

“ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ. ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಹೆಮ್ಮೆ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌ ಎಂದು ಹೇಳಿದ್ದಾರೆ.

“ಸುಕ್ರಿ ಬೊಮ್ಮ ಗೌಡ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ,ಅವರ ಕುಟುಂಬ ವರ್ಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಸಂತಾಪ ತಿಳಿಸಿದ್ದಾರೆ.

“ಜಾನಪದ ಗಾನಕೋಗಿಲೆ ‘ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮು ಗೌಡ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಯಿತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿದ ಇವರು ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ಕಳೆದುಕೊಂಡಿರುವುದು ಜಾನಪದ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಚಿವ ಮಂಕಾಳ ವೈದ್ಯ ಸಂತಾಪ ಸೂಚಿಸಿದ್ದಾರೆ.

“ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನವರಾದ, ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ ( ಸುಕ್ರಜ್ಜಿ) ನಿಧನದ ಸುದ್ದಿ ಬೆಳ್ಳಂಬೆಳಿಗ್ಗೆ ಬರಸಿಡಿಲು ಬಡಿದಂತಾಯಿತು. 5000ಕ್ಕೂ ಹೆಚ್ಚು ಹಾಲಕ್ಕಿ, ಜನಪದ ಹಾಡುಗಳನ್ನ ಕಂಠಪಾಠ ಮಾಡಿಕೊಂಡಿದ್ದ ಅಜ್ಜಿ, ‘ಜಾನಪದ ಕೋಗಿಲೆ’ ಎಂದೇ ಪ್ರಸಿದ್ದಳಾಗಿದ್ದರು. ಲೋಕಸಭಾ ಚುನಾವಣೆಯ ಸಂದರ್ಭ ಮಗಳಂತೆ ನನ್ನನ್ನ ಆತ್ಮೀಯವಾಗಿ ಮಾತನಾಡಿಸಿ, ಗಲ್ಲವನ್ನ ಹಿಡಿದು ಸವರಿದ ಆ ಕ್ಷಣ ಇನ್ನೂ ಹಸಿರಾಗೇ ಇದೆ. ಓಂ ಶಾಂತಿ” ಎಂದು ಕಾಂಗ್ರೆಸ್‌ ನಾಯಕಿ ಡಾ. ಅಂಜಲಿ ನಿಂಬಾಳ್ಕರ್‌ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...