Homeಕರ್ನಾಟಕಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

- Advertisement -
- Advertisement -

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಗುರುವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದ ಅವರು, ಅಂಕೋಲಾ ತಾಲೂಕಿನ ಬಡಿಗೆರಿ ಗ್ರಾಮದ ತಮ್ಮ ಮನೆಯಲ್ಲಿ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಉತ್ತರ ಕನ್ನಡ ಜಿಲ್ಲೆಯ ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದೇ ಪ್ರಸಿದ್ಧರು. ಹಾಲಕ್ಕಿ ಜಾನಾಂಗ ಜಾನಪದ ಕೋಗಿಲೆ ಎಂದೂ ಜನಪ್ರಿಯರಾಗಿರುವ ಅವರು, ಹಾಲಕ್ಕಿ ಜಾನಪದ ಹಾಡುಗಳ ಜೊತೆ ಮದ್ಯ ನಿಷೇಧ ಹೋರಾಟ ಸೇರಿದಂತೆ ಹಲವು ಹೋರಾಟದಲ್ಲಿ ಭಾಗಿಯಾಗಿದ್ದರು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಹೋರಾಟಗಳ ಮೂಲಕ ಅವರು ಅಂಕೋಲದ ಬಡಿಗೇರಿ ಗ್ರಾಮವನ್ನು ಮದ್ಯ ಮುಕ್ತ ಗ್ರಾಮವನ್ನಾಗಿ ಮಾಡಿದ್ದರು. ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿಗೆ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿವೆ.

ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಜನರು ಕಂಬನಿ ಮಿಡಿದಿದ್ದಾರೆ.

“ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ ‘ಸುಕ್ರಜ್ಜಿ’ ಅವರಿಗೆ ಸಂಗೀತವೇ ಬದುಕಾಗಿತ್ತು.” ಎಂದು ಸಿಎಂ ಹೇಳಿದ್ದಾರೆ.

“ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು. ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದುಃಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು ಎಂದು ಹೇಳಿದ್ದಾರೆ.

“ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ. ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರು, ಕರ್ನಾಟಕದ ಹೆಮ್ಮೆ, ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌ ಎಂದು ಹೇಳಿದ್ದಾರೆ.

“ಸುಕ್ರಿ ಬೊಮ್ಮ ಗೌಡ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ,ಅವರ ಕುಟುಂಬ ವರ್ಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಸಂತಾಪ ತಿಳಿಸಿದ್ದಾರೆ.

“ಜಾನಪದ ಗಾನಕೋಗಿಲೆ ‘ಪದ್ಮಶ್ರೀ ಪುರಸ್ಕೃತೆ’ ಸುಕ್ರಿ ಬೊಮ್ಮು ಗೌಡ ಅವರು ನಮ್ಮನ್ನೆಲ್ಲ ಅಗಲಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖ ಉಂಟಾಯಿತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಜನಿಸಿದ ಇವರು ತಮ್ಮ ಜಾನಪದ ಗಾಯನದ ಮೂಲಕ ಜಾನಪದ ಕ್ಷೇತ್ರದಲ್ಲಿ ಮೈಲುಗಲ್ಲು ಸೃಷ್ಟಿಸಿದ ಸುಕ್ರಿ ಗೌಡರನ್ನು ಕಳೆದುಕೊಂಡಿರುವುದು ಜಾನಪದ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಚಿವ ಮಂಕಾಳ ವೈದ್ಯ ಸಂತಾಪ ಸೂಚಿಸಿದ್ದಾರೆ.

“ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನವರಾದ, ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ ( ಸುಕ್ರಜ್ಜಿ) ನಿಧನದ ಸುದ್ದಿ ಬೆಳ್ಳಂಬೆಳಿಗ್ಗೆ ಬರಸಿಡಿಲು ಬಡಿದಂತಾಯಿತು. 5000ಕ್ಕೂ ಹೆಚ್ಚು ಹಾಲಕ್ಕಿ, ಜನಪದ ಹಾಡುಗಳನ್ನ ಕಂಠಪಾಠ ಮಾಡಿಕೊಂಡಿದ್ದ ಅಜ್ಜಿ, ‘ಜಾನಪದ ಕೋಗಿಲೆ’ ಎಂದೇ ಪ್ರಸಿದ್ದಳಾಗಿದ್ದರು. ಲೋಕಸಭಾ ಚುನಾವಣೆಯ ಸಂದರ್ಭ ಮಗಳಂತೆ ನನ್ನನ್ನ ಆತ್ಮೀಯವಾಗಿ ಮಾತನಾಡಿಸಿ, ಗಲ್ಲವನ್ನ ಹಿಡಿದು ಸವರಿದ ಆ ಕ್ಷಣ ಇನ್ನೂ ಹಸಿರಾಗೇ ಇದೆ. ಓಂ ಶಾಂತಿ” ಎಂದು ಕಾಂಗ್ರೆಸ್‌ ನಾಯಕಿ ಡಾ. ಅಂಜಲಿ ನಿಂಬಾಳ್ಕರ್‌ ಸಂತಾಪ ಸೂಚಿಸಿದ್ದಾರೆ.

ಇದನ್ನೂಓದಿ:  ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ಮೆಟ್ರೋ ದರ ಅಸಹಜ ಏರಿಕೆ; ಸರಿಪಡಿಸುವಂತೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...