Homeಕರ್ನಾಟಕಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ತುಳಸಜ್ಜಿಗೆ ದೆಹಲಿ ಖರ್ಚಿಗೆಂದು ಜನ ಕೊಟ್ಟ ಹಣವನ್ನು ಸುಕ್ರಜ್ಜಿಯ ಆರೋಗ್ಯಕ್ಕೆ ಮತ್ತು ಹರೇಕಳ ಹಾಜಬ್ಬರ ಶಾಲೆಗೆ ದೇಣಿಗೆ ನೀಡಿದ್ದಾರೆ.

- Advertisement -
- Advertisement -

ಗಿಡ-ಮರಗಳನ್ನು ತನ್ನ ಮಕ್ಕಳಂತೆ ಸಾಕಿ-ಸಲುಹಿದ ಅಂಕೋಲೆಯ ಹಾಲಕ್ಕಿ ಒಕ್ಕಲು ಬುಡಕಟ್ಟಿನ ತುಳಸಿ ಗೌಡರಿಗೆ ಪದ್ಮಶ್ರೀ ಪ್ರದಾನ ಮಾಡಲಾಗಿದೆ. ಇದರಿಂದ ಪ್ರಶಸ್ತಿಯ ತೂಕ ಹೆಚ್ಚಾಗಿದೆ. ಈ ವ್ಯವಸ್ಥೆಯಲ್ಲಿ ಅಪರೂಪಕ್ಕೊಮ್ಮೆ ಇಂತಹ ಪವಾಡವಾಗುತ್ತದೆ.. ನಿಜವಾದ ಅರ್ಹರಿಗೆ, ಪ್ರಾಮಾಣಿಕರಿಗೆ ಪ್ರಶಸ್ತಿ ಸಂದಿದಾಗ ಆ ಪುರಸ್ಕಾರಗಳಿಗೆ ಗೌರವ ಬರುತ್ತದೆ.

ಆರೇಳು ದಶಕದಿಂದ ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಕಾಳಜಿಯಿಂದ ನೀರೆರೆಯುತ್ತ ನೂರಾರು ಗಿಡ-ಮರಗಳ ಹೆಸರು, ಪರಿಚಯ ಪಕ್ಕಾ ಮಾಡಿಕೊಂಡಿರುವ ತುಳಸಜ್ಜಿಗೆ ಪದ್ಮಶ್ರೀ ಪ್ರಶಸ್ತಿ ಬಂದಾಗ ‘ಇದೊಂದು ಯೋಗ್ಯ ಆಯ್ಕೆ’ ಎಂಬ ಉದ್ಗಾರ ಎಲ್ಲೆಡೆ ಹೊರಹೊಮ್ಮಿತ್ತು!

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ತುಳಸಜ್ಜಿ ಹೊಟ್ಟೆ ಪಾಡಿಗಾಗಿ ಅಂಕೋಲಾದ ಮಾಸ್ತಿಕಟ್ಟೆ ಅರಣ್ಯ ವಿಭಾಗದ ನರ್ಸರಿ (ಸಸ್ಯ ಪಾಲನಾ ಕೇಂದ್ರ)ಯಲ್ಲಿ ಚಾಕರಿ ಮಾಡಿಕೊಂಡಿದ್ದರು. ನಿಷ್ಟೆ, ಕಾಳಜಿ ಮತ್ತು ಪರಿಸರ ಪ್ರೀತಿಯಿಂದ ಕೆಲಸ ಮಾಡುತ್ತಿದ್ದ ತುಳಸಜ್ಜಿಯನ್ನು ಮೊದಲು ಗುರುತಿಸಿದ್ದು ಹಿರಿಯ ಅರಣ್ಯಾಧಿಕಾರಿಯಾಗಿದ್ದ ಯಲ್ಲಪ್ಪ ರೆಡ್ಡಿಯವರು. ಹಾಗಾಗಿ ತುಳಸಜ್ಜಿಗೆ ಒಕ್ಕೂಟ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಬಂತು.

ತುಳಸಜ್ಜಿಯ ಮೂಲಕ ಉತ್ತರ ಕನ್ನಡಕ್ಕೆ ಮೂರನೆ ಪದ್ಮಶ್ರೀ ಪ್ರಶಸ್ತಿ ಬಂದಂತಾಗಿದೆ. 2017 ರಲ್ಲಿ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿತ್ತು. 5000 ಹಾಡುಗಳು ನಾಲಿಗೆ ತುದಿಯಲ್ಲೆ ಇರುವ ಸುಕ್ರಜ್ಜಿ ಸಹ ವಿಶಿಷ್ಟ ಸಂಸ್ಕೃತಿ ಸೊಗಡಿನ ಹಾಲಕ್ಕಿ ಒಕ್ಕಲು ಬುಡಕಟ್ಟಿಗೆ ಸೇರಿದವರು. ಸಾರಾಯಿ ವಿರೋಧಿ ಆಂದೋಲನ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರೀಯರಾಗಿದ್ದ ಸುಕ್ರಜ್ಜಿ ಈಗ ವಯೋಸಹಜ ನಿಶಕ್ತಿಯಿಂದ ಆಸ್ಪತ್ರೆೆ-ಮನೆಯೆಂದು ಓಡಾಡುವಂತಾಗಿದೆ.

ನವೆಂಬರ್ 8 ರಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ಹೋಗಬೇಕಿದ್ದ ತುಳಸಜ್ಜಿಗೆ ದಾರಿ ಖರ್ಚಿಗೆಂದು ಅಂಕೋಲೆಯ ಮಂದಿ 1 ಲಕ್ಷ 16 ಸಾವಿರ ರೂ. ಒಟ್ಟುಗೂಡಿಸಿ ಕೊಟ್ಟಿದ್ದರು. ತುಳಸಜ್ಜಿ ಇದರಲ್ಲಿ ಒಂದಷ್ಟು ಹಣವನ್ನು ಸುಕ್ರಜ್ಜಿ ಔಷದೋಪಚಾರಕ್ಕೆಂದು ಅವರ ಮನೆಗೆ ಹೋಗಿ ಕೊಟ್ಟು ಬಂದಿದ್ದು ಎಲ್ಲರ ಹೃದಯ ಆರ್ದ್ರವಾಗಿಸಿತ್ತು!. ಪದ್ಮಶ್ರೀ ಪ್ರಶಸ್ತಿ ಪಡೆಯುವ ಮೊದಲೇ ಮಾನವೀಯ ಬದ್ದತೆಯಿಂದ ಗಮನ ಸೆಳೆದಿದ್ದ ತುಳಸಜ್ಜಿ ಪ್ರಶಸ್ತಿ ಪಡೆದು ಬರುವಾಗ ತನ್ನ ಸಾಮಾಜಿಕ ಬದ್ದತೆಯ ಸ್ವಭಾವದಿಂದ ಮೂಕ ವಿಸ್ಮಿತರನ್ನಾಗಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

ಪದ್ಮಶ್ರೀ ಪುರಸ್ಕೃತರಾಗಿ ದಿಲ್ಲಿಯಿಂದ ಬೆಂಗಳೂರಿಗೆ ಬಂದಿದ್ದ ತುಳಸಜ್ಜಿ ನೇರ ಊರಿಗೆ [ಅಂಕೋಲ] ಬರಲಿಲ್ಲ. ಬದಲಿಗೆ ಮಂಗಳೂರಿಗೆ ತೆರಳಿ ಕಿತ್ತಳೆ ಹಣ್ಣು ಮಾರಿ ಶಾಲೆಗಳನ್ನು ತೆರೆದ ಹರೇಕಳ ಹಾಜಬ್ಬರ ಮನೆಗೆ ಹೋದರು. ಹರೇಕಳ ಹಾಜಬ್ಬ ದಿಲ್ಲಿಯಲ್ಲಿ ತುಳಸಜ್ಜಿ ಜತೆಯೆ ಪದ್ಮಶ್ರೀ ಪಡೆದಿದ್ದರು. ಅಲ್ಲಿ ಈ ಅಕ್ಷರ ಸಂತ ಮತ್ತು ವೃಕ್ಷ ದೇವತೆ ಪರಿಚಿತರಾಗಿದ್ದರು. ಹಾಜಬ್ಬರ ಶಾಲೆಗಳನ್ನೆಲ್ಲ ಕಣ್ತುಂಬಿಕೊಂಡ ತುಳಸಜ್ಜಿ ಧನ್ಯತಾಭಾವದಲ್ಲಿ ಹಾಜಬ್ಬರ ಶಾಲಾ ಅಭಿಯಾನಕ್ಕೆ ತನ್ನ ಕೈಲಾದ ದೇಣಿಗೆ ಕೊಟ್ಟಿದ್ದಾರೆ. ನನ್ನಿಂದಾದಷ್ಟು ಕೊಟ್ಟಿದ್ದೇನೆ; ಇನ್ನು ದಾನಿಗಳು ಮನಸ್ಸು ಮಾಡಬೇಕು ಎಂದಿದ್ದಾರೆ. ಇದೊಂದು ಅನಕರಣೀಯ ಆದರ್ಶವೆಂಬ ಮೆಚ್ಚುಗೆ ಮಾತು ಕರಾವಳಿಯಲ್ಲಿ ಕೇಳಿಬರುತ್ತಿದೆ.

ಇಂಥ ಮೇರು ವ್ಯಕ್ತಿತ್ವದ ತುಳಸಜ್ಜಿಯನ್ನು ಉತ್ತರ ಕನ್ನಡ ಜಿಲ್ಲಾಡಳಿತ ಸಮರ್ಪಕವಾಗಿ ಗೌರವಿಸುತ್ತಿಲ್ಲ. ಪದ್ಮಶ್ರೀ ಪ್ರಶಸ್ತಿಯೊಂದಿಗೆ ದಿಲ್ಲಿಯಿಂದ ಮಂಗಳೂರು ಮೂಲಕ ಊರಿಗೆ ಬರುತ್ತಿದ್ದ ತುಳಸಜ್ಜಿಯನ್ನು ಉಡುಪಿ-ಉತ್ತರ ಕನ್ನಡದ ಗಡಿಯಲ್ಲಿ ಭಟ್ಕಳದ ಎಸಿ ಮತ್ತು ತಹಶೀಲ್ದಾರ್ ಕಾಟಾಚಾರಕ್ಕೆಂಬಂತೆ ಹೂ ಗುಚ್ಚ ಕೊಟ್ಟು ಸ್ವಾಗತಿಸಿದ್ದಾರೆ. ಹಾಗೆ ನೋಡಿದರೆ ಪದ್ಮ ಪುರಸ್ಕೃತರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದ ತುಳಸಜ್ಜಿಯನ್ನು ಸಡಗರದಿಂದ ಜಿಲ್ಲಾಡಳಿತ ಎದುರುಗೊಳ್ಳಬೇಕಿತ್ತು. ತುಳಸಜ್ಜಿಗೆ ಪದ್ಮಶ್ರೀ ಘೋಷಣೆಯಾದಾಗ, ಪ್ರಶಸ್ತಿ ತರಲು ದಿಲ್ಲಿಗೆ ಹೊರಡುವಾಗ ಮತ್ತು ತಿರುಗಿ ಬರುವಾಗ ಜಿಲ್ಲಾಡಳಿತ ಉದಾಸೀನದಿಂದ ಏಕೆ ಎಂಬ ಪ್ರಶ್ನೆ ಎದ್ದಿದೆ.

ಕನಿಷ್ಟ ಅಂಕೋಲೆಯಿಂದ ಅವರ ಮನೆ ತನಕವಾದರೂ ಮೂರ್ನಾಲ್ಕು ಮೈಲಿ ಮೆರವಣಿಗೆಯಲ್ಲಿ ಕರೆದೊಯ್ಯಬೇಕಿತ್ತು. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಒಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತೆಂದು ಸಾಂಸ್ಕೃತಿಕ ಲೋಕದ ಅನುಭವಿಗಳು ಹೇಳುತ್ತಾರೆ.
ಕಾರವಾರದ ರಾಮಾ ರಾಘೋಬಾ ರಾಣೆಯವರು ಪರಮವೀರ ಚಕ್ರ ಪ್ರಶಸ್ತಿ ಪಡೆದು ಬಂದಾಗ ಕಾರವಾರದಿಂದ ಅವರ ಮನೆ ತನಕ ಭವ್ಯ ಮೆರವಣಿಗೆಯಲ್ಲಿ ಕರೆದೊಯ್ದಿದ್ದನ್ನು ನೆನಪಿಸಿ ತುಳಸಜ್ಜಿಗ್ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಕೇಳಲಾಗುತ್ತಿದೆ.

ಇಷ್ಟೆಲ್ಲಾ ಚರ್ಚೆಗಳು ನಡೆದ ನಂತರ ನವೆಂಬರ್ 15ರ ಸಂಜೆ ತುಳಸಜ್ಜಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆದಿದೆ. ಇದು ಸಮಾಧಾನ ಸಂಗತಿಯಾದರೂ ಜಿಲ್ಲಾಡಳಿತ ತನ್ನ ಜವಾಬ್ದಾರಿಯನ್ನು ಮರೆಯಬಾರದು ಎಂಬುದು ಜನರ ಅಭಿಮತ.

ಇದನ್ನೂ ಓದಿ:  ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...