Homeಕರ್ನಾಟಕಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ತುಳಸಜ್ಜಿಗೆ ದೆಹಲಿ ಖರ್ಚಿಗೆಂದು ಜನ ಕೊಟ್ಟ ಹಣವನ್ನು ಸುಕ್ರಜ್ಜಿಯ ಆರೋಗ್ಯಕ್ಕೆ ಮತ್ತು ಹರೇಕಳ ಹಾಜಬ್ಬರ ಶಾಲೆಗೆ ದೇಣಿಗೆ ನೀಡಿದ್ದಾರೆ.

- Advertisement -
- Advertisement -

ಗಿಡ-ಮರಗಳನ್ನು ತನ್ನ ಮಕ್ಕಳಂತೆ ಸಾಕಿ-ಸಲುಹಿದ ಅಂಕೋಲೆಯ ಹಾಲಕ್ಕಿ ಒಕ್ಕಲು ಬುಡಕಟ್ಟಿನ ತುಳಸಿ ಗೌಡರಿಗೆ ಪದ್ಮಶ್ರೀ ಪ್ರದಾನ ಮಾಡಲಾಗಿದೆ. ಇದರಿಂದ ಪ್ರಶಸ್ತಿಯ ತೂಕ ಹೆಚ್ಚಾಗಿದೆ. ಈ ವ್ಯವಸ್ಥೆಯಲ್ಲಿ ಅಪರೂಪಕ್ಕೊಮ್ಮೆ ಇಂತಹ ಪವಾಡವಾಗುತ್ತದೆ.. ನಿಜವಾದ ಅರ್ಹರಿಗೆ, ಪ್ರಾಮಾಣಿಕರಿಗೆ ಪ್ರಶಸ್ತಿ ಸಂದಿದಾಗ ಆ ಪುರಸ್ಕಾರಗಳಿಗೆ ಗೌರವ ಬರುತ್ತದೆ.

ಆರೇಳು ದಶಕದಿಂದ ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಕಾಳಜಿಯಿಂದ ನೀರೆರೆಯುತ್ತ ನೂರಾರು ಗಿಡ-ಮರಗಳ ಹೆಸರು, ಪರಿಚಯ ಪಕ್ಕಾ ಮಾಡಿಕೊಂಡಿರುವ ತುಳಸಜ್ಜಿಗೆ ಪದ್ಮಶ್ರೀ ಪ್ರಶಸ್ತಿ ಬಂದಾಗ ‘ಇದೊಂದು ಯೋಗ್ಯ ಆಯ್ಕೆ’ ಎಂಬ ಉದ್ಗಾರ ಎಲ್ಲೆಡೆ ಹೊರಹೊಮ್ಮಿತ್ತು!

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ತುಳಸಜ್ಜಿ ಹೊಟ್ಟೆ ಪಾಡಿಗಾಗಿ ಅಂಕೋಲಾದ ಮಾಸ್ತಿಕಟ್ಟೆ ಅರಣ್ಯ ವಿಭಾಗದ ನರ್ಸರಿ (ಸಸ್ಯ ಪಾಲನಾ ಕೇಂದ್ರ)ಯಲ್ಲಿ ಚಾಕರಿ ಮಾಡಿಕೊಂಡಿದ್ದರು. ನಿಷ್ಟೆ, ಕಾಳಜಿ ಮತ್ತು ಪರಿಸರ ಪ್ರೀತಿಯಿಂದ ಕೆಲಸ ಮಾಡುತ್ತಿದ್ದ ತುಳಸಜ್ಜಿಯನ್ನು ಮೊದಲು ಗುರುತಿಸಿದ್ದು ಹಿರಿಯ ಅರಣ್ಯಾಧಿಕಾರಿಯಾಗಿದ್ದ ಯಲ್ಲಪ್ಪ ರೆಡ್ಡಿಯವರು. ಹಾಗಾಗಿ ತುಳಸಜ್ಜಿಗೆ ಒಕ್ಕೂಟ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಬಂತು.

ತುಳಸಜ್ಜಿಯ ಮೂಲಕ ಉತ್ತರ ಕನ್ನಡಕ್ಕೆ ಮೂರನೆ ಪದ್ಮಶ್ರೀ ಪ್ರಶಸ್ತಿ ಬಂದಂತಾಗಿದೆ. 2017 ರಲ್ಲಿ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿತ್ತು. 5000 ಹಾಡುಗಳು ನಾಲಿಗೆ ತುದಿಯಲ್ಲೆ ಇರುವ ಸುಕ್ರಜ್ಜಿ ಸಹ ವಿಶಿಷ್ಟ ಸಂಸ್ಕೃತಿ ಸೊಗಡಿನ ಹಾಲಕ್ಕಿ ಒಕ್ಕಲು ಬುಡಕಟ್ಟಿಗೆ ಸೇರಿದವರು. ಸಾರಾಯಿ ವಿರೋಧಿ ಆಂದೋಲನ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರೀಯರಾಗಿದ್ದ ಸುಕ್ರಜ್ಜಿ ಈಗ ವಯೋಸಹಜ ನಿಶಕ್ತಿಯಿಂದ ಆಸ್ಪತ್ರೆೆ-ಮನೆಯೆಂದು ಓಡಾಡುವಂತಾಗಿದೆ.

ನವೆಂಬರ್ 8 ರಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ಹೋಗಬೇಕಿದ್ದ ತುಳಸಜ್ಜಿಗೆ ದಾರಿ ಖರ್ಚಿಗೆಂದು ಅಂಕೋಲೆಯ ಮಂದಿ 1 ಲಕ್ಷ 16 ಸಾವಿರ ರೂ. ಒಟ್ಟುಗೂಡಿಸಿ ಕೊಟ್ಟಿದ್ದರು. ತುಳಸಜ್ಜಿ ಇದರಲ್ಲಿ ಒಂದಷ್ಟು ಹಣವನ್ನು ಸುಕ್ರಜ್ಜಿ ಔಷದೋಪಚಾರಕ್ಕೆಂದು ಅವರ ಮನೆಗೆ ಹೋಗಿ ಕೊಟ್ಟು ಬಂದಿದ್ದು ಎಲ್ಲರ ಹೃದಯ ಆರ್ದ್ರವಾಗಿಸಿತ್ತು!. ಪದ್ಮಶ್ರೀ ಪ್ರಶಸ್ತಿ ಪಡೆಯುವ ಮೊದಲೇ ಮಾನವೀಯ ಬದ್ದತೆಯಿಂದ ಗಮನ ಸೆಳೆದಿದ್ದ ತುಳಸಜ್ಜಿ ಪ್ರಶಸ್ತಿ ಪಡೆದು ಬರುವಾಗ ತನ್ನ ಸಾಮಾಜಿಕ ಬದ್ದತೆಯ ಸ್ವಭಾವದಿಂದ ಮೂಕ ವಿಸ್ಮಿತರನ್ನಾಗಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

ಪದ್ಮಶ್ರೀ ಪುರಸ್ಕೃತರಾಗಿ ದಿಲ್ಲಿಯಿಂದ ಬೆಂಗಳೂರಿಗೆ ಬಂದಿದ್ದ ತುಳಸಜ್ಜಿ ನೇರ ಊರಿಗೆ [ಅಂಕೋಲ] ಬರಲಿಲ್ಲ. ಬದಲಿಗೆ ಮಂಗಳೂರಿಗೆ ತೆರಳಿ ಕಿತ್ತಳೆ ಹಣ್ಣು ಮಾರಿ ಶಾಲೆಗಳನ್ನು ತೆರೆದ ಹರೇಕಳ ಹಾಜಬ್ಬರ ಮನೆಗೆ ಹೋದರು. ಹರೇಕಳ ಹಾಜಬ್ಬ ದಿಲ್ಲಿಯಲ್ಲಿ ತುಳಸಜ್ಜಿ ಜತೆಯೆ ಪದ್ಮಶ್ರೀ ಪಡೆದಿದ್ದರು. ಅಲ್ಲಿ ಈ ಅಕ್ಷರ ಸಂತ ಮತ್ತು ವೃಕ್ಷ ದೇವತೆ ಪರಿಚಿತರಾಗಿದ್ದರು. ಹಾಜಬ್ಬರ ಶಾಲೆಗಳನ್ನೆಲ್ಲ ಕಣ್ತುಂಬಿಕೊಂಡ ತುಳಸಜ್ಜಿ ಧನ್ಯತಾಭಾವದಲ್ಲಿ ಹಾಜಬ್ಬರ ಶಾಲಾ ಅಭಿಯಾನಕ್ಕೆ ತನ್ನ ಕೈಲಾದ ದೇಣಿಗೆ ಕೊಟ್ಟಿದ್ದಾರೆ. ನನ್ನಿಂದಾದಷ್ಟು ಕೊಟ್ಟಿದ್ದೇನೆ; ಇನ್ನು ದಾನಿಗಳು ಮನಸ್ಸು ಮಾಡಬೇಕು ಎಂದಿದ್ದಾರೆ. ಇದೊಂದು ಅನಕರಣೀಯ ಆದರ್ಶವೆಂಬ ಮೆಚ್ಚುಗೆ ಮಾತು ಕರಾವಳಿಯಲ್ಲಿ ಕೇಳಿಬರುತ್ತಿದೆ.

ಇಂಥ ಮೇರು ವ್ಯಕ್ತಿತ್ವದ ತುಳಸಜ್ಜಿಯನ್ನು ಉತ್ತರ ಕನ್ನಡ ಜಿಲ್ಲಾಡಳಿತ ಸಮರ್ಪಕವಾಗಿ ಗೌರವಿಸುತ್ತಿಲ್ಲ. ಪದ್ಮಶ್ರೀ ಪ್ರಶಸ್ತಿಯೊಂದಿಗೆ ದಿಲ್ಲಿಯಿಂದ ಮಂಗಳೂರು ಮೂಲಕ ಊರಿಗೆ ಬರುತ್ತಿದ್ದ ತುಳಸಜ್ಜಿಯನ್ನು ಉಡುಪಿ-ಉತ್ತರ ಕನ್ನಡದ ಗಡಿಯಲ್ಲಿ ಭಟ್ಕಳದ ಎಸಿ ಮತ್ತು ತಹಶೀಲ್ದಾರ್ ಕಾಟಾಚಾರಕ್ಕೆಂಬಂತೆ ಹೂ ಗುಚ್ಚ ಕೊಟ್ಟು ಸ್ವಾಗತಿಸಿದ್ದಾರೆ. ಹಾಗೆ ನೋಡಿದರೆ ಪದ್ಮ ಪುರಸ್ಕೃತರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದ ತುಳಸಜ್ಜಿಯನ್ನು ಸಡಗರದಿಂದ ಜಿಲ್ಲಾಡಳಿತ ಎದುರುಗೊಳ್ಳಬೇಕಿತ್ತು. ತುಳಸಜ್ಜಿಗೆ ಪದ್ಮಶ್ರೀ ಘೋಷಣೆಯಾದಾಗ, ಪ್ರಶಸ್ತಿ ತರಲು ದಿಲ್ಲಿಗೆ ಹೊರಡುವಾಗ ಮತ್ತು ತಿರುಗಿ ಬರುವಾಗ ಜಿಲ್ಲಾಡಳಿತ ಉದಾಸೀನದಿಂದ ಏಕೆ ಎಂಬ ಪ್ರಶ್ನೆ ಎದ್ದಿದೆ.

ಕನಿಷ್ಟ ಅಂಕೋಲೆಯಿಂದ ಅವರ ಮನೆ ತನಕವಾದರೂ ಮೂರ್ನಾಲ್ಕು ಮೈಲಿ ಮೆರವಣಿಗೆಯಲ್ಲಿ ಕರೆದೊಯ್ಯಬೇಕಿತ್ತು. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಒಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತೆಂದು ಸಾಂಸ್ಕೃತಿಕ ಲೋಕದ ಅನುಭವಿಗಳು ಹೇಳುತ್ತಾರೆ.
ಕಾರವಾರದ ರಾಮಾ ರಾಘೋಬಾ ರಾಣೆಯವರು ಪರಮವೀರ ಚಕ್ರ ಪ್ರಶಸ್ತಿ ಪಡೆದು ಬಂದಾಗ ಕಾರವಾರದಿಂದ ಅವರ ಮನೆ ತನಕ ಭವ್ಯ ಮೆರವಣಿಗೆಯಲ್ಲಿ ಕರೆದೊಯ್ದಿದ್ದನ್ನು ನೆನಪಿಸಿ ತುಳಸಜ್ಜಿಗ್ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಕೇಳಲಾಗುತ್ತಿದೆ.

ಇಷ್ಟೆಲ್ಲಾ ಚರ್ಚೆಗಳು ನಡೆದ ನಂತರ ನವೆಂಬರ್ 15ರ ಸಂಜೆ ತುಳಸಜ್ಜಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆದಿದೆ. ಇದು ಸಮಾಧಾನ ಸಂಗತಿಯಾದರೂ ಜಿಲ್ಲಾಡಳಿತ ತನ್ನ ಜವಾಬ್ದಾರಿಯನ್ನು ಮರೆಯಬಾರದು ಎಂಬುದು ಜನರ ಅಭಿಮತ.

ಇದನ್ನೂ ಓದಿ:  ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...