Homeಕರ್ನಾಟಕಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ತುಳಸಜ್ಜಿಗೆ ದೆಹಲಿ ಖರ್ಚಿಗೆಂದು ಜನ ಕೊಟ್ಟ ಹಣವನ್ನು ಸುಕ್ರಜ್ಜಿಯ ಆರೋಗ್ಯಕ್ಕೆ ಮತ್ತು ಹರೇಕಳ ಹಾಜಬ್ಬರ ಶಾಲೆಗೆ ದೇಣಿಗೆ ನೀಡಿದ್ದಾರೆ.

- Advertisement -
- Advertisement -

ಗಿಡ-ಮರಗಳನ್ನು ತನ್ನ ಮಕ್ಕಳಂತೆ ಸಾಕಿ-ಸಲುಹಿದ ಅಂಕೋಲೆಯ ಹಾಲಕ್ಕಿ ಒಕ್ಕಲು ಬುಡಕಟ್ಟಿನ ತುಳಸಿ ಗೌಡರಿಗೆ ಪದ್ಮಶ್ರೀ ಪ್ರದಾನ ಮಾಡಲಾಗಿದೆ. ಇದರಿಂದ ಪ್ರಶಸ್ತಿಯ ತೂಕ ಹೆಚ್ಚಾಗಿದೆ. ಈ ವ್ಯವಸ್ಥೆಯಲ್ಲಿ ಅಪರೂಪಕ್ಕೊಮ್ಮೆ ಇಂತಹ ಪವಾಡವಾಗುತ್ತದೆ.. ನಿಜವಾದ ಅರ್ಹರಿಗೆ, ಪ್ರಾಮಾಣಿಕರಿಗೆ ಪ್ರಶಸ್ತಿ ಸಂದಿದಾಗ ಆ ಪುರಸ್ಕಾರಗಳಿಗೆ ಗೌರವ ಬರುತ್ತದೆ.

ಆರೇಳು ದಶಕದಿಂದ ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಕಾಳಜಿಯಿಂದ ನೀರೆರೆಯುತ್ತ ನೂರಾರು ಗಿಡ-ಮರಗಳ ಹೆಸರು, ಪರಿಚಯ ಪಕ್ಕಾ ಮಾಡಿಕೊಂಡಿರುವ ತುಳಸಜ್ಜಿಗೆ ಪದ್ಮಶ್ರೀ ಪ್ರಶಸ್ತಿ ಬಂದಾಗ ‘ಇದೊಂದು ಯೋಗ್ಯ ಆಯ್ಕೆ’ ಎಂಬ ಉದ್ಗಾರ ಎಲ್ಲೆಡೆ ಹೊರಹೊಮ್ಮಿತ್ತು!

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ತುಳಸಜ್ಜಿ ಹೊಟ್ಟೆ ಪಾಡಿಗಾಗಿ ಅಂಕೋಲಾದ ಮಾಸ್ತಿಕಟ್ಟೆ ಅರಣ್ಯ ವಿಭಾಗದ ನರ್ಸರಿ (ಸಸ್ಯ ಪಾಲನಾ ಕೇಂದ್ರ)ಯಲ್ಲಿ ಚಾಕರಿ ಮಾಡಿಕೊಂಡಿದ್ದರು. ನಿಷ್ಟೆ, ಕಾಳಜಿ ಮತ್ತು ಪರಿಸರ ಪ್ರೀತಿಯಿಂದ ಕೆಲಸ ಮಾಡುತ್ತಿದ್ದ ತುಳಸಜ್ಜಿಯನ್ನು ಮೊದಲು ಗುರುತಿಸಿದ್ದು ಹಿರಿಯ ಅರಣ್ಯಾಧಿಕಾರಿಯಾಗಿದ್ದ ಯಲ್ಲಪ್ಪ ರೆಡ್ಡಿಯವರು. ಹಾಗಾಗಿ ತುಳಸಜ್ಜಿಗೆ ಒಕ್ಕೂಟ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಬಂತು.

ತುಳಸಜ್ಜಿಯ ಮೂಲಕ ಉತ್ತರ ಕನ್ನಡಕ್ಕೆ ಮೂರನೆ ಪದ್ಮಶ್ರೀ ಪ್ರಶಸ್ತಿ ಬಂದಂತಾಗಿದೆ. 2017 ರಲ್ಲಿ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿತ್ತು. 5000 ಹಾಡುಗಳು ನಾಲಿಗೆ ತುದಿಯಲ್ಲೆ ಇರುವ ಸುಕ್ರಜ್ಜಿ ಸಹ ವಿಶಿಷ್ಟ ಸಂಸ್ಕೃತಿ ಸೊಗಡಿನ ಹಾಲಕ್ಕಿ ಒಕ್ಕಲು ಬುಡಕಟ್ಟಿಗೆ ಸೇರಿದವರು. ಸಾರಾಯಿ ವಿರೋಧಿ ಆಂದೋಲನ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರೀಯರಾಗಿದ್ದ ಸುಕ್ರಜ್ಜಿ ಈಗ ವಯೋಸಹಜ ನಿಶಕ್ತಿಯಿಂದ ಆಸ್ಪತ್ರೆೆ-ಮನೆಯೆಂದು ಓಡಾಡುವಂತಾಗಿದೆ.

ನವೆಂಬರ್ 8 ರಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ಹೋಗಬೇಕಿದ್ದ ತುಳಸಜ್ಜಿಗೆ ದಾರಿ ಖರ್ಚಿಗೆಂದು ಅಂಕೋಲೆಯ ಮಂದಿ 1 ಲಕ್ಷ 16 ಸಾವಿರ ರೂ. ಒಟ್ಟುಗೂಡಿಸಿ ಕೊಟ್ಟಿದ್ದರು. ತುಳಸಜ್ಜಿ ಇದರಲ್ಲಿ ಒಂದಷ್ಟು ಹಣವನ್ನು ಸುಕ್ರಜ್ಜಿ ಔಷದೋಪಚಾರಕ್ಕೆಂದು ಅವರ ಮನೆಗೆ ಹೋಗಿ ಕೊಟ್ಟು ಬಂದಿದ್ದು ಎಲ್ಲರ ಹೃದಯ ಆರ್ದ್ರವಾಗಿಸಿತ್ತು!. ಪದ್ಮಶ್ರೀ ಪ್ರಶಸ್ತಿ ಪಡೆಯುವ ಮೊದಲೇ ಮಾನವೀಯ ಬದ್ದತೆಯಿಂದ ಗಮನ ಸೆಳೆದಿದ್ದ ತುಳಸಜ್ಜಿ ಪ್ರಶಸ್ತಿ ಪಡೆದು ಬರುವಾಗ ತನ್ನ ಸಾಮಾಜಿಕ ಬದ್ದತೆಯ ಸ್ವಭಾವದಿಂದ ಮೂಕ ವಿಸ್ಮಿತರನ್ನಾಗಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

ಪದ್ಮಶ್ರೀ ಪುರಸ್ಕೃತರಾಗಿ ದಿಲ್ಲಿಯಿಂದ ಬೆಂಗಳೂರಿಗೆ ಬಂದಿದ್ದ ತುಳಸಜ್ಜಿ ನೇರ ಊರಿಗೆ [ಅಂಕೋಲ] ಬರಲಿಲ್ಲ. ಬದಲಿಗೆ ಮಂಗಳೂರಿಗೆ ತೆರಳಿ ಕಿತ್ತಳೆ ಹಣ್ಣು ಮಾರಿ ಶಾಲೆಗಳನ್ನು ತೆರೆದ ಹರೇಕಳ ಹಾಜಬ್ಬರ ಮನೆಗೆ ಹೋದರು. ಹರೇಕಳ ಹಾಜಬ್ಬ ದಿಲ್ಲಿಯಲ್ಲಿ ತುಳಸಜ್ಜಿ ಜತೆಯೆ ಪದ್ಮಶ್ರೀ ಪಡೆದಿದ್ದರು. ಅಲ್ಲಿ ಈ ಅಕ್ಷರ ಸಂತ ಮತ್ತು ವೃಕ್ಷ ದೇವತೆ ಪರಿಚಿತರಾಗಿದ್ದರು. ಹಾಜಬ್ಬರ ಶಾಲೆಗಳನ್ನೆಲ್ಲ ಕಣ್ತುಂಬಿಕೊಂಡ ತುಳಸಜ್ಜಿ ಧನ್ಯತಾಭಾವದಲ್ಲಿ ಹಾಜಬ್ಬರ ಶಾಲಾ ಅಭಿಯಾನಕ್ಕೆ ತನ್ನ ಕೈಲಾದ ದೇಣಿಗೆ ಕೊಟ್ಟಿದ್ದಾರೆ. ನನ್ನಿಂದಾದಷ್ಟು ಕೊಟ್ಟಿದ್ದೇನೆ; ಇನ್ನು ದಾನಿಗಳು ಮನಸ್ಸು ಮಾಡಬೇಕು ಎಂದಿದ್ದಾರೆ. ಇದೊಂದು ಅನಕರಣೀಯ ಆದರ್ಶವೆಂಬ ಮೆಚ್ಚುಗೆ ಮಾತು ಕರಾವಳಿಯಲ್ಲಿ ಕೇಳಿಬರುತ್ತಿದೆ.

ಇಂಥ ಮೇರು ವ್ಯಕ್ತಿತ್ವದ ತುಳಸಜ್ಜಿಯನ್ನು ಉತ್ತರ ಕನ್ನಡ ಜಿಲ್ಲಾಡಳಿತ ಸಮರ್ಪಕವಾಗಿ ಗೌರವಿಸುತ್ತಿಲ್ಲ. ಪದ್ಮಶ್ರೀ ಪ್ರಶಸ್ತಿಯೊಂದಿಗೆ ದಿಲ್ಲಿಯಿಂದ ಮಂಗಳೂರು ಮೂಲಕ ಊರಿಗೆ ಬರುತ್ತಿದ್ದ ತುಳಸಜ್ಜಿಯನ್ನು ಉಡುಪಿ-ಉತ್ತರ ಕನ್ನಡದ ಗಡಿಯಲ್ಲಿ ಭಟ್ಕಳದ ಎಸಿ ಮತ್ತು ತಹಶೀಲ್ದಾರ್ ಕಾಟಾಚಾರಕ್ಕೆಂಬಂತೆ ಹೂ ಗುಚ್ಚ ಕೊಟ್ಟು ಸ್ವಾಗತಿಸಿದ್ದಾರೆ. ಹಾಗೆ ನೋಡಿದರೆ ಪದ್ಮ ಪುರಸ್ಕೃತರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದ ತುಳಸಜ್ಜಿಯನ್ನು ಸಡಗರದಿಂದ ಜಿಲ್ಲಾಡಳಿತ ಎದುರುಗೊಳ್ಳಬೇಕಿತ್ತು. ತುಳಸಜ್ಜಿಗೆ ಪದ್ಮಶ್ರೀ ಘೋಷಣೆಯಾದಾಗ, ಪ್ರಶಸ್ತಿ ತರಲು ದಿಲ್ಲಿಗೆ ಹೊರಡುವಾಗ ಮತ್ತು ತಿರುಗಿ ಬರುವಾಗ ಜಿಲ್ಲಾಡಳಿತ ಉದಾಸೀನದಿಂದ ಏಕೆ ಎಂಬ ಪ್ರಶ್ನೆ ಎದ್ದಿದೆ.

ಕನಿಷ್ಟ ಅಂಕೋಲೆಯಿಂದ ಅವರ ಮನೆ ತನಕವಾದರೂ ಮೂರ್ನಾಲ್ಕು ಮೈಲಿ ಮೆರವಣಿಗೆಯಲ್ಲಿ ಕರೆದೊಯ್ಯಬೇಕಿತ್ತು. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಒಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತೆಂದು ಸಾಂಸ್ಕೃತಿಕ ಲೋಕದ ಅನುಭವಿಗಳು ಹೇಳುತ್ತಾರೆ.
ಕಾರವಾರದ ರಾಮಾ ರಾಘೋಬಾ ರಾಣೆಯವರು ಪರಮವೀರ ಚಕ್ರ ಪ್ರಶಸ್ತಿ ಪಡೆದು ಬಂದಾಗ ಕಾರವಾರದಿಂದ ಅವರ ಮನೆ ತನಕ ಭವ್ಯ ಮೆರವಣಿಗೆಯಲ್ಲಿ ಕರೆದೊಯ್ದಿದ್ದನ್ನು ನೆನಪಿಸಿ ತುಳಸಜ್ಜಿಗ್ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಕೇಳಲಾಗುತ್ತಿದೆ.

ಇಷ್ಟೆಲ್ಲಾ ಚರ್ಚೆಗಳು ನಡೆದ ನಂತರ ನವೆಂಬರ್ 15ರ ಸಂಜೆ ತುಳಸಜ್ಜಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆದಿದೆ. ಇದು ಸಮಾಧಾನ ಸಂಗತಿಯಾದರೂ ಜಿಲ್ಲಾಡಳಿತ ತನ್ನ ಜವಾಬ್ದಾರಿಯನ್ನು ಮರೆಯಬಾರದು ಎಂಬುದು ಜನರ ಅಭಿಮತ.

ಇದನ್ನೂ ಓದಿ:  ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...