Homeಮುಖಪುಟಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ತಿರುವನಂತಪುರಂನ ಐತಿಹಾಸಿಕ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತದಲ್ಲಿ ತಿರುವಾಂಕೂರು ರಾಜಮನೆತನದ ಹಕ್ಕನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ತಿರುವನಂತಪುರಂ ಜಿಲ್ಲಾ ನ್ಯಾಯಾಧೀಶರು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ಆಡಳಿತ ಸಮಿತಿಯ ಮುಖ್ಯಸ್ಥರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ದೇವಾಲಯದ ಆಡಳಿತವನ್ನು ವಹಿಸಿಕೊಳ್ಳಲು ಟ್ರಸ್ಟ್ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದ್ದ ಕೇರಳ ಹೈಕೋರ್ಟ್‌‌ನ ಜನವರಿ 31, 2011 ರ ತೀರ್ಪನ್ನು ಸುಪ್ರೀಂ ಕೋರ್ಟ್ ಬದಿಗಿಟ್ಟಿದೆ.

ಆರ್ಥಿಕ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಐತಿಹಾಸಿಕ ದೇವಾಲಯದ ಆಡಳಿತ ಮತ್ತು ನಿರ್ವಹಣೆಯ ಕುರಿತ ಮೊಕದ್ದಮೆ ಕಳೆದ ಒಂಬತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇತ್ತು.

ತಿರುವಾಂಕೂರಿನ ಕೊನೆಯ ಮಹಾರಾಜರ ನಿಧನದ ನಂತರ, ದೇವಾಲಯವನ್ನು ಸರ್ಕಾರಕ್ಕೆ ವಹಿಸಲಾಗಿದೆ ಎಂದು ಹೈಕೋರ್ಟ್ 2011 ರ ಜನವರಿ 31 ರಂದು ತೀರ್ಪು ನೀಡಿತ್ತು.

ದೇವಾಲಯವನ್ನು ರಾಜಮನೆತನದ ಮುಂದಿನ ಕುಡಿಗಳಿಗೆ ಹಸ್ತಾಂತರಿಸಲು ಯಾವುದೇ ಅವಕಾಶವಿಲ್ಲದ ಕಾರಣ ಸರ್ಕಾರವು ದೇವಾಲಯವನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಉತ್ರಾದಂ ತಿರುನಾಲ್ ಮಾರ್ತಾಂಡ ವರ್ಮಾ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು. ನಂತರ ಸುಪ್ರೀಂ ಕೋರ್ಟ್ 2011 ರ ಮೇ 2 ರಂದು ಹೈಕೋರ್ಟ್ ಆದೇಶವನ್ನು ತಡೆಹಿಡಿದಿತ್ತು.

ಕೋಣೆ(ಕಲ್ಲಾರ) ಗಳಲ್ಲಿನ ಲೇಖನಗಳು, ಬೆಲೆಬಾಳುವ ವಸ್ತುಗಳು, ಆಭರಣಗಳ ವಿವರವಾದ ಪಟ್ಟಿ ಮಾಡಬೇಕು ಎಂದು ಉನ್ನತ ನ್ಯಾಯಾಲಯವು ನಿರ್ದೇಶಿಸಿತ್ತು.

ಜುಲೈ 8, 2011 ರಂದು ಸುಪ್ರೀಂ ಕೋರ್ಟ್ “ಬಿ. ಕೋಣೆ” ತೆರೆಯುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಬೇಕು ಎಂದು ಹೇಳಿತ್ತು.

ಜುಲೈ 2017 ರಲ್ಲಿ, ಸುಪ್ರೀಂ ಕೋರ್ಟ್ ದೇವಾಲಯದಲ್ಲಿ ಒಂದು ಕೋಣೆಯಲ್ಲಿ ‘ಅತೀಂದ್ರಿಯ’ ಶಕ್ತಿಯೊಂದಿಗೆ ಭಾರಿ ನಿಧಿ ಇದೆ ಎಂಬ ವಾದಗಳನ್ನು ಪರಿಶೀಲಿಸುವುದಾಗಿ ಹೇಳಿತ್ತು.

ಆದರೆ, ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

ಅಮಿಕಸ್ ಕ್ಯೂರಿಯಂತೆ ನೇಮಕಗೊಂಡ ಗೋಪಾಲ್ ಸುಬ್ರಮಣ್ಯಂ ಮತ್ತು ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರೈ ಅವರು ದೇವಾಲಯದ ಆಡಳಿತ ಮತ್ತು ಅದರ ಆಸ್ತಿಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಹಿಂದಿನ ತಿರುವಾಂಕೂರು ರಾಜಮನೆತನದ ರಾಜರ ಸ್ವಂತ ವೆಚ್ಚಕ್ಕೆ ಸರಕಾರದ ಬೊಕ್ಕಸದಿಂದ ಕೊಡುವ ಹಣ ಮತ್ತು ರಾಜಪ್ರಭುತ್ವದ ಆಡಳಿತವು ಕೊನೆಗೊಂಡಿದ್ದರಿಂದ ರಾಜನ ವೈಯಕ್ತಿಕ ಸವಲತ್ತುಗಳು ಅಸ್ತಿತ್ವದಲ್ಲಿಲ್ಲ ಎಂದು ವಾದಿಸಿದರು. ದೇವಾಲಯವು ಸಾರ್ವಜನಿಕರಿಗೆ ಮುಕ್ತವಾಗಿದ್ದರೂ, ದೇವಾಲಯದ ಆಡಳಿತದ ಮೇಲೆ ರಾಜಮನೆತನಕ್ಕೆ ಹಕ್ಕಿದೆ.

ಆದಾಗ್ಯೂ, ಅಮಿಕಸ್ ಕ್ಯೂರಿ ಮತ್ತು ಹಿಂದಿನ ಸಿಎಜಿ ದೇವಾಲಯದ ಆಡಳಿತದಲ್ಲಿ ಅಕ್ರಮಗಳು ನಡೆದಿರೆಉ ಕಂಡುಕೊಂಡಿದೆ ಎಂದು ರಾಜ್ಯ ಸರ್ಕಾರ ವಾದಿಸಿತು. ಗುರುವಾಯೂರ್ ದೇವಾಲಯದಂತೆಯೇ ಆಡಳಿತಾತ್ಮಕ ಮಾದರಿಯನ್ನು ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಪರಿಗಣಿಸಬೇಕು ಎಂದು ಕೇಳಿದೆ.

ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳನ್ನು ಆಳ್ವಿಕೆ ನಡೆಸಿದ್ದ ತಿರುವಾಂಕೂರು ರಾಜ ಮನೆತನವೂ 18 ನೇ ಶತಮಾನದಲ್ಲಿ ಈ ವಿಸ್ತಾರವಾದ ದೇವಾಲಯವನ್ನು ಗ್ರಾನೈಟ್‌ನಲ್ಲಿ ನಿರ್ಮಿಸಿತ್ತು.

ಭಾರತದ ಸ್ವಾತಂತ್ರ್ಯದ ನಂತರವೂ ಈ ದೇವಾಲಯವನ್ನು ಹಿಂದಿನ ರಾಜಮನೆತನದವರು ನಿಯಂತ್ರಿಸುವ ಟ್ರಸ್ಟ್‌ನಿಂದ ನಿಯಂತ್ರಿಸಲಾಗುತ್ತಿತ್ತು.

ಸುಪ್ರೀಂ ಕೋರ್ಟಿನ ಈ ತೀರ್ಪಿಗೆ ಹಲವಾರು ಜನರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕ್‌ನಾಥ್ “ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಹಕ್ಕು ಆಗಬೇಕಾದುದು ರಾಜಮನೆತನದ ಹಕ್ಕು ಹೇಗಾಗುತ್ತೋ ?” ಎಂದು ಹೇಳಿದ್ದಾರೆ.

ರಾಜಮನೆತನದ ಹಕ್ಕುರಕ್ಷಣೆಗೆ ಸುಪ್ರೀಂ ಕೋರ್ಟ್!!- – – – – – – – – "ಅನಂತಪದ್ಮನಾಭ ದೇವಸ್ಥಾನದ (ಬೆಲೆಕಟ್ಟಲಾಗದಷ್ಟು ಅಮೂಲ್ಯ) ಸಂಪತ್ತಿನ…

Posted by Dwarakanath Chokka on Monday, July 13, 2020


ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...