Homeಮುಖಪುಟಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ಪದ್ಮನಾಭ ಸ್ವಾಮಿ ದೇವಾಲಯ ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು: ಸುಪ್ರೀಂ ಕೋರ್ಟ್

ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ತಿರುವನಂತಪುರಂನ ಐತಿಹಾಸಿಕ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತದಲ್ಲಿ ತಿರುವಾಂಕೂರು ರಾಜಮನೆತನದ ಹಕ್ಕನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ತಿರುವನಂತಪುರಂ ಜಿಲ್ಲಾ ನ್ಯಾಯಾಧೀಶರು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ಆಡಳಿತ ಸಮಿತಿಯ ಮುಖ್ಯಸ್ಥರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ದೇವಾಲಯದ ಆಡಳಿತವನ್ನು ವಹಿಸಿಕೊಳ್ಳಲು ಟ್ರಸ್ಟ್ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದ್ದ ಕೇರಳ ಹೈಕೋರ್ಟ್‌‌ನ ಜನವರಿ 31, 2011 ರ ತೀರ್ಪನ್ನು ಸುಪ್ರೀಂ ಕೋರ್ಟ್ ಬದಿಗಿಟ್ಟಿದೆ.

ಆರ್ಥಿಕ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಐತಿಹಾಸಿಕ ದೇವಾಲಯದ ಆಡಳಿತ ಮತ್ತು ನಿರ್ವಹಣೆಯ ಕುರಿತ ಮೊಕದ್ದಮೆ ಕಳೆದ ಒಂಬತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇತ್ತು.

ತಿರುವಾಂಕೂರಿನ ಕೊನೆಯ ಮಹಾರಾಜರ ನಿಧನದ ನಂತರ, ದೇವಾಲಯವನ್ನು ಸರ್ಕಾರಕ್ಕೆ ವಹಿಸಲಾಗಿದೆ ಎಂದು ಹೈಕೋರ್ಟ್ 2011 ರ ಜನವರಿ 31 ರಂದು ತೀರ್ಪು ನೀಡಿತ್ತು.

ದೇವಾಲಯವನ್ನು ರಾಜಮನೆತನದ ಮುಂದಿನ ಕುಡಿಗಳಿಗೆ ಹಸ್ತಾಂತರಿಸಲು ಯಾವುದೇ ಅವಕಾಶವಿಲ್ಲದ ಕಾರಣ ಸರ್ಕಾರವು ದೇವಾಲಯವನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಉತ್ರಾದಂ ತಿರುನಾಲ್ ಮಾರ್ತಾಂಡ ವರ್ಮಾ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು. ನಂತರ ಸುಪ್ರೀಂ ಕೋರ್ಟ್ 2011 ರ ಮೇ 2 ರಂದು ಹೈಕೋರ್ಟ್ ಆದೇಶವನ್ನು ತಡೆಹಿಡಿದಿತ್ತು.

ಕೋಣೆ(ಕಲ್ಲಾರ) ಗಳಲ್ಲಿನ ಲೇಖನಗಳು, ಬೆಲೆಬಾಳುವ ವಸ್ತುಗಳು, ಆಭರಣಗಳ ವಿವರವಾದ ಪಟ್ಟಿ ಮಾಡಬೇಕು ಎಂದು ಉನ್ನತ ನ್ಯಾಯಾಲಯವು ನಿರ್ದೇಶಿಸಿತ್ತು.

ಜುಲೈ 8, 2011 ರಂದು ಸುಪ್ರೀಂ ಕೋರ್ಟ್ “ಬಿ. ಕೋಣೆ” ತೆರೆಯುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಬೇಕು ಎಂದು ಹೇಳಿತ್ತು.

ಜುಲೈ 2017 ರಲ್ಲಿ, ಸುಪ್ರೀಂ ಕೋರ್ಟ್ ದೇವಾಲಯದಲ್ಲಿ ಒಂದು ಕೋಣೆಯಲ್ಲಿ ‘ಅತೀಂದ್ರಿಯ’ ಶಕ್ತಿಯೊಂದಿಗೆ ಭಾರಿ ನಿಧಿ ಇದೆ ಎಂಬ ವಾದಗಳನ್ನು ಪರಿಶೀಲಿಸುವುದಾಗಿ ಹೇಳಿತ್ತು.

ಆದರೆ, ದೇವಾಲಯದ ಕೋಣೆಗಳಲ್ಲಿನ ಆಸ್ತಿಗಳ ವಿವರವಾದ ಪಟ್ಟಿಮಾಡಲು ನ್ಯಾಯಾಲಯ ಆದೇಶಿಸಿದೆ.

ಅಮಿಕಸ್ ಕ್ಯೂರಿಯಂತೆ ನೇಮಕಗೊಂಡ ಗೋಪಾಲ್ ಸುಬ್ರಮಣ್ಯಂ ಮತ್ತು ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರೈ ಅವರು ದೇವಾಲಯದ ಆಡಳಿತ ಮತ್ತು ಅದರ ಆಸ್ತಿಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಹಿಂದಿನ ತಿರುವಾಂಕೂರು ರಾಜಮನೆತನದ ರಾಜರ ಸ್ವಂತ ವೆಚ್ಚಕ್ಕೆ ಸರಕಾರದ ಬೊಕ್ಕಸದಿಂದ ಕೊಡುವ ಹಣ ಮತ್ತು ರಾಜಪ್ರಭುತ್ವದ ಆಡಳಿತವು ಕೊನೆಗೊಂಡಿದ್ದರಿಂದ ರಾಜನ ವೈಯಕ್ತಿಕ ಸವಲತ್ತುಗಳು ಅಸ್ತಿತ್ವದಲ್ಲಿಲ್ಲ ಎಂದು ವಾದಿಸಿದರು. ದೇವಾಲಯವು ಸಾರ್ವಜನಿಕರಿಗೆ ಮುಕ್ತವಾಗಿದ್ದರೂ, ದೇವಾಲಯದ ಆಡಳಿತದ ಮೇಲೆ ರಾಜಮನೆತನಕ್ಕೆ ಹಕ್ಕಿದೆ.

ಆದಾಗ್ಯೂ, ಅಮಿಕಸ್ ಕ್ಯೂರಿ ಮತ್ತು ಹಿಂದಿನ ಸಿಎಜಿ ದೇವಾಲಯದ ಆಡಳಿತದಲ್ಲಿ ಅಕ್ರಮಗಳು ನಡೆದಿರೆಉ ಕಂಡುಕೊಂಡಿದೆ ಎಂದು ರಾಜ್ಯ ಸರ್ಕಾರ ವಾದಿಸಿತು. ಗುರುವಾಯೂರ್ ದೇವಾಲಯದಂತೆಯೇ ಆಡಳಿತಾತ್ಮಕ ಮಾದರಿಯನ್ನು ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಪರಿಗಣಿಸಬೇಕು ಎಂದು ಕೇಳಿದೆ.

ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳನ್ನು ಆಳ್ವಿಕೆ ನಡೆಸಿದ್ದ ತಿರುವಾಂಕೂರು ರಾಜ ಮನೆತನವೂ 18 ನೇ ಶತಮಾನದಲ್ಲಿ ಈ ವಿಸ್ತಾರವಾದ ದೇವಾಲಯವನ್ನು ಗ್ರಾನೈಟ್‌ನಲ್ಲಿ ನಿರ್ಮಿಸಿತ್ತು.

ಭಾರತದ ಸ್ವಾತಂತ್ರ್ಯದ ನಂತರವೂ ಈ ದೇವಾಲಯವನ್ನು ಹಿಂದಿನ ರಾಜಮನೆತನದವರು ನಿಯಂತ್ರಿಸುವ ಟ್ರಸ್ಟ್‌ನಿಂದ ನಿಯಂತ್ರಿಸಲಾಗುತ್ತಿತ್ತು.

ಸುಪ್ರೀಂ ಕೋರ್ಟಿನ ಈ ತೀರ್ಪಿಗೆ ಹಲವಾರು ಜನರು ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕ್‌ನಾಥ್ “ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಹಕ್ಕು ಆಗಬೇಕಾದುದು ರಾಜಮನೆತನದ ಹಕ್ಕು ಹೇಗಾಗುತ್ತೋ ?” ಎಂದು ಹೇಳಿದ್ದಾರೆ.

ರಾಜಮನೆತನದ ಹಕ್ಕುರಕ್ಷಣೆಗೆ ಸುಪ್ರೀಂ ಕೋರ್ಟ್!!- – – – – – – – – "ಅನಂತಪದ್ಮನಾಭ ದೇವಸ್ಥಾನದ (ಬೆಲೆಕಟ್ಟಲಾಗದಷ್ಟು ಅಮೂಲ್ಯ) ಸಂಪತ್ತಿನ…

Posted by Dwarakanath Chokka on Monday, July 13, 2020


ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...