Homeಕರ್ನಾಟಕಪದ್ಮಶ್ರೀ ಪುರಸ್ಕೃತರಾದ ಬನ್ನಂಜೆ ಗೋವಿಂದಾಚಾರ್ಯ ನಿಧನ

ಪದ್ಮಶ್ರೀ ಪುರಸ್ಕೃತರಾದ ಬನ್ನಂಜೆ ಗೋವಿಂದಾಚಾರ್ಯ ನಿಧನ

- Advertisement -
- Advertisement -

ಪದ್ಮಶ್ರೀ ಪುರಸ್ಕೃತರಾದ ಬನ್ನಂಜೆ ಗೋವಿಂದಾಚಾರ್ಯರು (85) ಇಂದು ಉಡುಪಿಯ ಅಂಬಲಪಾಡಿಯ ತನ್ನ ಸ್ವಗೃಹದಲ್ಲಿ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

“ವೇದ, ಪುರಾಣಗಳ ಕುರಿತ ಇವರ ಪ್ರವಚನಗಳು, ಕೃತಿಗಳು ಹಾಗೂ ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ” ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಇವರು ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ, ಪತ್ರಕರ್ತರಾಗಿದ್ದರು. ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರು ಆಗಿದ್ದ ಇವರು, ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದರು.

ಬನ್ನಂಜೆ ಗೋವಿಂದಾಚಾರ್ಯ ಅವರು ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಚಿತ್ರಗಳ ಸಂಭಾಷಣೆ ಬರೆದಿದ್ದರು. ಹಲವು ಚಾರಿತ್ರಿಕ ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದ ಇವರು, ಉಪನಿಷತ್ತಿನ ಅಧ್ಯಾಯಗಳಿಗೆ ಟಿಪ್ಪಣಿ ಬರೆದಿದ್ದರು.


ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ಮತ್ತು ಸಂಸ್ಕೃತ ಭಾಷಾ ವಿಶಾರದರು ವೇದೋಪನಿಷತ್ತುಗಳು ಮಹಾಕಾವ್ಯಗಳು ಭಾಗವತ ಪುರಾಣಗಳು ಅಷ್ಟಾದಶ ಪುರಾಣಗಳು ಹತ್ತು ಹಲವು ಬಗೆಯ ಸಾಹಿತ್ಯ ಪ್ರಕಾರಗಳು ವಿಮರ್ಶೆ-ಪರಾಮರ್ಶೆ ಸಂಶೋಧನೆಯ ಸಂವಾದಗಳು ಸಂಭಾಷಣೆಗಳು ಚರ್ಚೆಗಳು ಉಪನ್ಯಾಸಗಳು ಪ್ರವಚನಗಳು ಪರಸ್ಪರ ಮಾತುಗಳು ಕಥನಕವನ ಅವಳಿಗಳು ಎಲ್ಲದರಲ್ಲೂ ಸಿದ್ಧಹಸ್ತರಾಗಿದ್ದರು ನಮ್ಮ ಅಪ್ರತಿಮ ಪ್ರತಿಭಾ ಸಾಮರ್ಥ್ಯವುಳ್ಳ ಪದ್ಮಶ್ರೀ ಪ್ರಶಸ್ತಿ ವಿಜೇತರು ಅಮ್ಮ ಬನ್ನಂಜೆ ಗೋವಿಂದಾಚಾರ್ಯರು ಆಡುಮುಟ್ಟದ ಸೊಪ್ಪಿಲ್ಲ ಆಚಾರ್ಯರಿಗೆ ತಿಳಿಯದ ವಿಚಾರಗಳೆಲ್ಲ ಸಕಲ ಶಾಸ್ತ್ರ ಪರಿಣತರು ಸಕಲ ವಿದ್ಯಾ ಪಾರಂಗತರು ಆಗಿದ್ದು ನಮ್ಮ ಕನ್ನಡದ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯವಾದ ಆಸ್ತಿ ಯಾಗಿದ್ದರು ಇಂತಹ ಸರ್ವಜ್ಞರು ಸರ್ವತೋಮುಖ ಪ್ರಜ್ಞಾವಂತರು ಇಚ್ಛಾಶಕ್ತಿಯು ಉಳ್ಳವರು ದೃಢವಿಶ್ವಾಸ ಉಳ್ಳವರು ಲೋಕಮಾನ್ಯರು ಆಗಿದ್ದರು ಇವರು ನಮ್ಮೆಲ್ಲರನ್ನು ಆಗಲಿ ಕನ್ನಡ ಸಂಸ್ಕೃತ ಭಾಷಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಅವರ ಆತ್ಮಕ್ಕೆ ಭಗವಾನ್ ಭಗವತಿಯರು ಸದ್ಗತಿಯನ್ನು ಸರ್ವ ಶಾಂತಿಯನ್ನು ನೀಡಲೆಂದು ನಮ್ಮ ನಮ್ಮೆಲ್ಲರ ಪ್ರಾರ್ಥನೆ.

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...