Homeಮುಖಪುಟಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ 'ಸ್ವಗತಗಳು'

ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ...

- Advertisement -
- Advertisement -

ಸೆಪ್ಟೆಂಬರ್‌ 15 ರ ವರೆಗೆ ಪದ್ಮಶ್ರಿ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಕಳೆದ ಭಾನುವಾರ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದ್ದವು. ಆದರೆ ಇದೀಗ ಕನ್ನಡ ಮತ್ತೊಬ್ಬ ಪ್ರತಿಭಾನ್ವಿತ ನಟ, ಕನ್ನಡ ಸಿನಿಮಾಗಳಲ್ಲಿ ಬಡವರ ಪ್ರತಿನಿಧಿ ವೈಜನಾಥ ಬಿರಾದಾರ ಅವರಿಗೆ ಪದ್ಮಶ್ರೀ ಸಿಗಬೇಕು ಎಂದು ಆನ್‌ಲೈನ್‌ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವೈಜನಾಥ ಬಿರಾದರ ಅವರ ಬಗ್ಗೆ ಶಶಿಧರ ಚಿತ್ರದುರ್ಗರವರು ಬರೆದ ಲೇಖನವನ್ನು ಮರು ಪ್ರಕಟಿಸುತ್ತಿದ್ದೇವೆ.

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟನಿಗೆ ಪದ್ಮಶ್ರಿ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗುತ್ತಿದೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಈ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ. (ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ಫೋಟೋ ಕೃಪೆ: ಮನು

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!

  • ಶಶಿಧರ ಚಿತ್ರದುರ್ಗ

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...