Homeಕರ್ನಾಟಕಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ...

ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ

- Advertisement -
- Advertisement -

ಶೇಕಡ 100 ಫಲಿತಾಂಶ ಸಾಧಿಸಬೇಕು ಎಂಬ ಕಾರಣಕ್ಕೆ, ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವ ಮೂಲಕ ಶಿಕ್ಷಕರು ಮಹಾ ಅನ್ಯಾಯವೆಸಗಿದ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿನಿಯರು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಪರೀಕ್ಷೆ ಬರೆದು ಫೇಲ್ ಆದರೆ ಶಾಲೆಗೆ 100 ಶೇಕಡ ಫಲಿತಾಂಶ ಬರುವುದಿಲ್ಲ ಎಂಬ ಕಾರಣಕ್ಕೆ, ಅವರಿಗೆ ಹಾಲ್ ಟಿಕೆಟ್ ಕೊಡದೆ ಪರೀಕ್ಷೆ ಬರೆಯುವ ಅವಕಾಶ ತಪ್ಪಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯ್ದಿನ್ ಕುಟ್ಟಿ, “ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನಲಾದ ಸುಮಾರು 6 ಮಕ್ಕಳ ಪೋಷಕರನ್ನು ಎರಡು ತಿಂಗಳ ಹಿಂದೆ ಶಾಲೆಗೆ ಕರೆಸಿದ್ದ ಶಿಕ್ಷಕರು “ನಿಮ್ಮ ಮಕ್ಕಳು ಕಲಿಕೆಯಲ್ಲಿ ಹಿಂದೆ ಇದ್ದಾರೆ. ಪರೀಕ್ಷೆ ಬರೆದರೆ ಫೇಲ್ ಆಗುವ ಸಾಧ್ಯತೆ ಇದೆ. ಅವರನ್ನು ಮುಂದಿನ ಏಪ್ರಿಲ್‌ನಲ್ಲಿ ಪರೀಕ್ಷೆಗೆ ಕೂರಿಸುತ್ತೇವೆ” ಎಂದು ಹೇಳಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ವಿದ್ಯಾರ್ಥಿಗಳ ಪೋಷಕರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಆದರೆ, ಇಬ್ಬರನ್ನು ಹೊರತುಪಡಿಸಿ ನಾಲ್ವರು ವಿದ್ಯಾರ್ಥಿಗಳು ಕಡೆ ಕ್ಷಣದಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಮಾತ್ರ ಶಿಕ್ಷಕರ ಮಾತು ಕೇಳಿಕೊಂಡು ಪರೀಕ್ಷೆ ಬರೆದಿಲ್ಲ. ಅವರಿಗೆ ಹಾಲ್‌ ಟಿಕೆಟ್ ಕೂಡ ಕೊಟ್ಟಿಲ್ಲ ಎನ್ನಲಾಗ್ತಿದೆ. ಪೋಷಕರು ಹಾಲ್‌ ಟಿಕೆಟ್ ಬಗ್ಗೆ ಕೇಳಿದಾಗ, “ಅದು ಬಂದಿಲ್ಲ” ಎಂಬ ಸಬೂಬು ನೀಡಿದ್ದಾರಂತೆ. ಈ ಮೂಲಕ ವಿದ್ಯಾರ್ಥಿನಿಯರು ಮಹತ್ವದ ಪರೀಕ್ಷೆ ಬರೆಯುವ ಅವಕಾಶವನ್ನು ಶಿಕ್ಷಕರು ತಪ್ಪಿಸಿದ್ದಾರೆ. ಇದು ಘೋರ ಅನ್ಯಾಯ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಖಾಸಗಿ ಶಾಲೆಗಳು ಶೇಕಡ 100 ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿ ಬರುತ್ತಿವೆ. ಸರ್ಕಾರಿ ಶಾಲೆಗಳು ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆಯಬೇಕು. ಆದರೆ, ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ವೃಂದ 100 ಶೇಕಡ ಫಲಿತಾಂಶದ ಗೀಳಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದಿರುವುದು ಅಕ್ಷಮ್ಯ ಅಪರಾಧವಾಗಿದೆ.

ಇದರ ಬಗ್ಗೆ ಖುದ್ದು ಅವಕಾಶ ವಂಚಿತರಾಗಿರುವ ಹೆಣ್ಣು ಮಕ್ಕಳು ಮಕ್ಕಳ ಹಕ್ಕುಗಳ ಆಯೋಗ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕರಿಗೆ ಪತ್ರ ಬರೆದಿದ್ದಾರೆ. ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ತಪ್ಪಿತಸ್ಥ ಶಿಕ್ಷಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ, ಆ ಮಕ್ಕಳಿಗೆ ಇನ್ನುಳಿದ ಪರೀಕ್ಷೆಗಳನ್ನು ಬರೆಯಲು ಕೂಡಲೇ ವ್ಯವಸ್ಥೆ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಪರೀಕ್ಷೆ ವಂಚಿತರಾದ ವಿದ್ಯಾರ್ಥಿನಿಯರು ಅಧಿಕಾರಿಗಳಿಗೆ ಬರೆದಿರುವ ಪತ್ರ ನಮಗೆ ದೊರೆತಿದ್ದು, ಅದರಲ್ಲಿ ಇಬ್ಬರೂ ಕೂಡ “ನಮ್ಮ ಅನುಮತಿ ಪಡೆಯದೆ, ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಿಕ್ಷಕರು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ನಮ್ಮನ್ನು ಶಿಕ್ಷಣದಿಂದ ವಂಚಿತರಾಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ನಮಗೆ ಈ ಶೈಕ್ಷಣಿಕ ವರ್ಷದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಮತ್ತು ಈ ಬಗ್ಗೆ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

ಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...