Homeಮುಖಪುಟಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ...

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ಕರೆದಿದ್ದ ಸರ್ವಪಕ್ಷ ಸಭೆಯಿಂದ ತಮ್ಮ ಪಕ್ಷವನ್ನು ಹೊರಗಿಡಲಾಗುವ ಬಗ್ಗೆ ಗುರುವಾರ AIMIM ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಹೆಚ್ಚಿನ ಸದಸ್ಯರು ಇರುವ ಪಕ್ಷಗಳನ್ನು ಮಾತ್ರ ಸರ್ಕಾರವು ಈ ಸಭೆಯಗೆ ಆಹ್ವಾನಿಸಿದೆ ಎಂದು ಓವೈಸಿ ಆರೋಪಿಸಿದ್ದಾರೆ. ಪಹಲ್ಗಾಮ್ ದಾಳಿ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೊಂದಿಗಿನ ಸಂಭಾಷಣೆಯನ್ನು ನೆನಪಿಸಿಕೊಂಡ ಅವರು, ಸಭೆಯನ್ನು “ಹೆಚ್ಚು ದೀರ್ಘವಾಗಿ ನಡೆಸದಂತೆ” ಕನಿಷ್ಠ ಐದರಿಂದ 10 ಸಂಸದರನ್ನು ಹೊಂದಿರುವ ಪಕ್ಷಗಳನ್ನು ಮಾತ್ರ ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾಗಿ ಓವೈಸಿ ಹೇಳಿದ್ದಾರೆ.

“ಕಡಿಮೆ ಸಂಸದರನ್ನು ಹೊಂದಿರುವ ಪಕ್ಷಗಳನ್ನು ಏಕೆ ಆಹ್ವಾನಿಸಬಾರದು ಎಂದು ನಾನು ಕೇಳಿದಾಗ, ಸಭೆ ತುಂಬಾ ದೀರ್ಘವಾಗುತ್ತದೆ ಎಂದು ಅವರು ಹೇಳಿದರು. ಈ ವೇಳೆ ನಾನು ‘ನಮ್ಮಂತಹ ಸಣ್ಣ ಪಕ್ಷಗಳ ಬಗ್ಗೆ ಏನು ಅಭಿಪ್ರಾಯ?’ ಎಂದು ಕೇಳಿದಾಗ ಅವರು ನನ್ನ ಧ್ವನಿ ತುಂಬಾ ಜೋರಾಗಿದೆ ಎಂದು ತಮಾಷೆ ಮಾಡಿದರು.” ಎಂದು ಓವೈಸಿ ಹೇಳಿದ್ದಾರೆ.

ಇಂತಹ ಗಂಭೀರ ಸಭೆಯು ಎಲ್ಲರನ್ನೂ ಒಳಗೊಳ್ಳುವಂತಿರಬೇಕು ಎಂದು ಓವೈಸಿ ಒತ್ತಿ ಹೇಳಿದ್ದಾರೆ. “ಇದು ಬಿಜೆಪಿ ಅಥವಾ ಇನ್ನೊಂದು ಪಕ್ಷದ ಆಂತರಿಕ ಸಭೆಯಲ್ಲ. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶಗಳ ವಿರುದ್ಧ ಬಲವಾದ ಮತ್ತು ಒಗ್ಗಟ್ಟಿನ ಸಂದೇಶವನ್ನು ಕಳುಹಿಸಲು ಇರುವ ಸರ್ವಪಕ್ಷ ಸಭೆಯಾಗಿದೆ. ಎಲ್ಲಾ ಪಕ್ಷಗಳ ಕಳವಳಗಳನ್ನು ಕೇಳಲು ಪ್ರಧಾನಿ ನರೇಂದ್ರ ಮೋದಿ ಹೆಚ್ಚುವರಿಯಾಗಿ ಒಂದಿಷ್ಟು ಗಂಟೆ ಕಳೆಯಲು ಸಾಧ್ಯವಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಯಾವುದೇ ಪಕ್ಷವು ಪ್ರಸ್ತುತ ಸಂಪೂರ್ಣ ಬಹುಮತವನ್ನು ಹೊಂದಿಲ್ಲ ಮತ್ತು ಪಕ್ಷದ ಗಾತ್ರವನ್ನು ಲೆಕ್ಕಿಸದೆ ಎಲ್ಲಾ ಸಂಸದರನ್ನು ಜನರು ಆಯ್ಕೆ ಮಾಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ನಿಮ್ಮ ಸ್ವಂತ ಪಕ್ಷಕ್ಕೆ ಬಹುಮತವಿಲ್ಲ. ಒಬ್ಬ ಸಂಸದರನ್ನು ಹೊಂದಿರುವ ಪಕ್ಷವಾಗಲಿ ಅಥವಾ 100 ಸಂಸದರನ್ನು ಹೊಂದಿರುವ ಪಕ್ಷವಾಗಲಿ, ಎಲ್ಲರೂ ಭಾರತೀಯರಿಂದ ಆಯ್ಕೆಯಾಗಿದ್ದಾರೆ. ಆದ್ದರಿಂದ ಇಂತಹ ಗಂಭೀರ ವಿಷಯದಲ್ಲಿ ಎಲ್ಲರ ಮಾತು ಕೂಡಾ ಕೇಳಬೇಕಿದೆ. ಇದು ರಾಜಕೀಯ ವಿಚಾರವಲ್ಲ, ರಾಷ್ಟ್ರೀಯ ವಿಷಯವಾಗಿದೆ. ಎಲ್ಲರ ಅಭಿಪ್ರಾಯವನ್ನೂ ಕೇಳಬೇಕು.,” ಅವರು ಒತ್ತಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಪ್ರತಿನಿಧಿಸುವ ಎಲ್ಲಾ ಪಕ್ಷಗಳನ್ನು ಚರ್ಚೆಗಳಲ್ಲಿ ಸೇರಿಸಿಕೊಳ್ಳುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. “ಇದನ್ನು ನಿಜವಾದ ಸರ್ವಪಕ್ಷ ಸಭೆಯನ್ನಾಗಿ ಮಾಡಲು ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಸಂಸತ್ತಿನಲ್ಲಿ ಸಂಸದರನ್ನು ಹೊಂದಿರುವ ಪ್ರತಿಯೊಂದು ಪಕ್ಷವನ್ನು ಆಹ್ವಾನಿಸಬೇಕು.” ಎಂದು ಅವರು ಆಗ್ರಹಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಯಲ್ಲಿ ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಸರ್ಕಾರ ಹಲವಾರು ಕ್ರಮಗಳನ್ನು ಘೋಷಿಸುವುದರೊಂದಿಗೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಸರ್ವಪಕ್ಷ ಸಭೆ ಕರೆಯುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ವಿವಿಧ ಪಕ್ಷಗಳನ್ನು ಸಂಪರ್ಕಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕ್ರಮವಾಗಿ ಗುರುವಾರ ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ತಿಳಿಸಿದೆ.

“ವಿಷಯದ ಗಂಭೀರತೆ ಮತ್ತು ದೇಶದ ಮನಸ್ಥಿತಿಯನ್ನು ಪರಿಗಣಿಸಿ, ಇಂದು ಸಂಜೆ 6 ಗಂಟೆಗೆ ನಡೆಯಲಿರುವ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಲಿದ್ದಾರೆ ಮತ್ತು ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ಸಂಕಲ್ಪವನ್ನು ಕೈಗೊಳ್ಳುತ್ತಾರೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿರೀಕ್ಷಿಸುತ್ತದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್

ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...