Homeಮುಖಪುಟಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ...

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ಕರೆದಿದ್ದ ಸರ್ವಪಕ್ಷ ಸಭೆಯಿಂದ ತಮ್ಮ ಪಕ್ಷವನ್ನು ಹೊರಗಿಡಲಾಗುವ ಬಗ್ಗೆ ಗುರುವಾರ AIMIM ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಹೆಚ್ಚಿನ ಸದಸ್ಯರು ಇರುವ ಪಕ್ಷಗಳನ್ನು ಮಾತ್ರ ಸರ್ಕಾರವು ಈ ಸಭೆಯಗೆ ಆಹ್ವಾನಿಸಿದೆ ಎಂದು ಓವೈಸಿ ಆರೋಪಿಸಿದ್ದಾರೆ. ಪಹಲ್ಗಾಮ್ ದಾಳಿ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೊಂದಿಗಿನ ಸಂಭಾಷಣೆಯನ್ನು ನೆನಪಿಸಿಕೊಂಡ ಅವರು, ಸಭೆಯನ್ನು “ಹೆಚ್ಚು ದೀರ್ಘವಾಗಿ ನಡೆಸದಂತೆ” ಕನಿಷ್ಠ ಐದರಿಂದ 10 ಸಂಸದರನ್ನು ಹೊಂದಿರುವ ಪಕ್ಷಗಳನ್ನು ಮಾತ್ರ ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾಗಿ ಓವೈಸಿ ಹೇಳಿದ್ದಾರೆ.

“ಕಡಿಮೆ ಸಂಸದರನ್ನು ಹೊಂದಿರುವ ಪಕ್ಷಗಳನ್ನು ಏಕೆ ಆಹ್ವಾನಿಸಬಾರದು ಎಂದು ನಾನು ಕೇಳಿದಾಗ, ಸಭೆ ತುಂಬಾ ದೀರ್ಘವಾಗುತ್ತದೆ ಎಂದು ಅವರು ಹೇಳಿದರು. ಈ ವೇಳೆ ನಾನು ‘ನಮ್ಮಂತಹ ಸಣ್ಣ ಪಕ್ಷಗಳ ಬಗ್ಗೆ ಏನು ಅಭಿಪ್ರಾಯ?’ ಎಂದು ಕೇಳಿದಾಗ ಅವರು ನನ್ನ ಧ್ವನಿ ತುಂಬಾ ಜೋರಾಗಿದೆ ಎಂದು ತಮಾಷೆ ಮಾಡಿದರು.” ಎಂದು ಓವೈಸಿ ಹೇಳಿದ್ದಾರೆ.

ಇಂತಹ ಗಂಭೀರ ಸಭೆಯು ಎಲ್ಲರನ್ನೂ ಒಳಗೊಳ್ಳುವಂತಿರಬೇಕು ಎಂದು ಓವೈಸಿ ಒತ್ತಿ ಹೇಳಿದ್ದಾರೆ. “ಇದು ಬಿಜೆಪಿ ಅಥವಾ ಇನ್ನೊಂದು ಪಕ್ಷದ ಆಂತರಿಕ ಸಭೆಯಲ್ಲ. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶಗಳ ವಿರುದ್ಧ ಬಲವಾದ ಮತ್ತು ಒಗ್ಗಟ್ಟಿನ ಸಂದೇಶವನ್ನು ಕಳುಹಿಸಲು ಇರುವ ಸರ್ವಪಕ್ಷ ಸಭೆಯಾಗಿದೆ. ಎಲ್ಲಾ ಪಕ್ಷಗಳ ಕಳವಳಗಳನ್ನು ಕೇಳಲು ಪ್ರಧಾನಿ ನರೇಂದ್ರ ಮೋದಿ ಹೆಚ್ಚುವರಿಯಾಗಿ ಒಂದಿಷ್ಟು ಗಂಟೆ ಕಳೆಯಲು ಸಾಧ್ಯವಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಯಾವುದೇ ಪಕ್ಷವು ಪ್ರಸ್ತುತ ಸಂಪೂರ್ಣ ಬಹುಮತವನ್ನು ಹೊಂದಿಲ್ಲ ಮತ್ತು ಪಕ್ಷದ ಗಾತ್ರವನ್ನು ಲೆಕ್ಕಿಸದೆ ಎಲ್ಲಾ ಸಂಸದರನ್ನು ಜನರು ಆಯ್ಕೆ ಮಾಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ನಿಮ್ಮ ಸ್ವಂತ ಪಕ್ಷಕ್ಕೆ ಬಹುಮತವಿಲ್ಲ. ಒಬ್ಬ ಸಂಸದರನ್ನು ಹೊಂದಿರುವ ಪಕ್ಷವಾಗಲಿ ಅಥವಾ 100 ಸಂಸದರನ್ನು ಹೊಂದಿರುವ ಪಕ್ಷವಾಗಲಿ, ಎಲ್ಲರೂ ಭಾರತೀಯರಿಂದ ಆಯ್ಕೆಯಾಗಿದ್ದಾರೆ. ಆದ್ದರಿಂದ ಇಂತಹ ಗಂಭೀರ ವಿಷಯದಲ್ಲಿ ಎಲ್ಲರ ಮಾತು ಕೂಡಾ ಕೇಳಬೇಕಿದೆ. ಇದು ರಾಜಕೀಯ ವಿಚಾರವಲ್ಲ, ರಾಷ್ಟ್ರೀಯ ವಿಷಯವಾಗಿದೆ. ಎಲ್ಲರ ಅಭಿಪ್ರಾಯವನ್ನೂ ಕೇಳಬೇಕು.,” ಅವರು ಒತ್ತಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಪ್ರತಿನಿಧಿಸುವ ಎಲ್ಲಾ ಪಕ್ಷಗಳನ್ನು ಚರ್ಚೆಗಳಲ್ಲಿ ಸೇರಿಸಿಕೊಳ್ಳುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. “ಇದನ್ನು ನಿಜವಾದ ಸರ್ವಪಕ್ಷ ಸಭೆಯನ್ನಾಗಿ ಮಾಡಲು ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಸಂಸತ್ತಿನಲ್ಲಿ ಸಂಸದರನ್ನು ಹೊಂದಿರುವ ಪ್ರತಿಯೊಂದು ಪಕ್ಷವನ್ನು ಆಹ್ವಾನಿಸಬೇಕು.” ಎಂದು ಅವರು ಆಗ್ರಹಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಯಲ್ಲಿ ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಸರ್ಕಾರ ಹಲವಾರು ಕ್ರಮಗಳನ್ನು ಘೋಷಿಸುವುದರೊಂದಿಗೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಸರ್ವಪಕ್ಷ ಸಭೆ ಕರೆಯುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ವಿವಿಧ ಪಕ್ಷಗಳನ್ನು ಸಂಪರ್ಕಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕ್ರಮವಾಗಿ ಗುರುವಾರ ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ತಿಳಿಸಿದೆ.

“ವಿಷಯದ ಗಂಭೀರತೆ ಮತ್ತು ದೇಶದ ಮನಸ್ಥಿತಿಯನ್ನು ಪರಿಗಣಿಸಿ, ಇಂದು ಸಂಜೆ 6 ಗಂಟೆಗೆ ನಡೆಯಲಿರುವ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಲಿದ್ದಾರೆ ಮತ್ತು ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ಸಂಕಲ್ಪವನ್ನು ಕೈಗೊಳ್ಳುತ್ತಾರೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿರೀಕ್ಷಿಸುತ್ತದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್

ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...