Homeಮುಖಪುಟಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ...

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ಕರೆದಿದ್ದ ಸರ್ವಪಕ್ಷ ಸಭೆಯಿಂದ ತಮ್ಮ ಪಕ್ಷವನ್ನು ಹೊರಗಿಡಲಾಗುವ ಬಗ್ಗೆ ಗುರುವಾರ AIMIM ನಾಯಕ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಹೆಚ್ಚಿನ ಸದಸ್ಯರು ಇರುವ ಪಕ್ಷಗಳನ್ನು ಮಾತ್ರ ಸರ್ಕಾರವು ಈ ಸಭೆಯಗೆ ಆಹ್ವಾನಿಸಿದೆ ಎಂದು ಓವೈಸಿ ಆರೋಪಿಸಿದ್ದಾರೆ. ಪಹಲ್ಗಾಮ್ ದಾಳಿ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೊಂದಿಗಿನ ಸಂಭಾಷಣೆಯನ್ನು ನೆನಪಿಸಿಕೊಂಡ ಅವರು, ಸಭೆಯನ್ನು “ಹೆಚ್ಚು ದೀರ್ಘವಾಗಿ ನಡೆಸದಂತೆ” ಕನಿಷ್ಠ ಐದರಿಂದ 10 ಸಂಸದರನ್ನು ಹೊಂದಿರುವ ಪಕ್ಷಗಳನ್ನು ಮಾತ್ರ ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾಗಿ ಓವೈಸಿ ಹೇಳಿದ್ದಾರೆ.

“ಕಡಿಮೆ ಸಂಸದರನ್ನು ಹೊಂದಿರುವ ಪಕ್ಷಗಳನ್ನು ಏಕೆ ಆಹ್ವಾನಿಸಬಾರದು ಎಂದು ನಾನು ಕೇಳಿದಾಗ, ಸಭೆ ತುಂಬಾ ದೀರ್ಘವಾಗುತ್ತದೆ ಎಂದು ಅವರು ಹೇಳಿದರು. ಈ ವೇಳೆ ನಾನು ‘ನಮ್ಮಂತಹ ಸಣ್ಣ ಪಕ್ಷಗಳ ಬಗ್ಗೆ ಏನು ಅಭಿಪ್ರಾಯ?’ ಎಂದು ಕೇಳಿದಾಗ ಅವರು ನನ್ನ ಧ್ವನಿ ತುಂಬಾ ಜೋರಾಗಿದೆ ಎಂದು ತಮಾಷೆ ಮಾಡಿದರು.” ಎಂದು ಓವೈಸಿ ಹೇಳಿದ್ದಾರೆ.

ಇಂತಹ ಗಂಭೀರ ಸಭೆಯು ಎಲ್ಲರನ್ನೂ ಒಳಗೊಳ್ಳುವಂತಿರಬೇಕು ಎಂದು ಓವೈಸಿ ಒತ್ತಿ ಹೇಳಿದ್ದಾರೆ. “ಇದು ಬಿಜೆಪಿ ಅಥವಾ ಇನ್ನೊಂದು ಪಕ್ಷದ ಆಂತರಿಕ ಸಭೆಯಲ್ಲ. ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶಗಳ ವಿರುದ್ಧ ಬಲವಾದ ಮತ್ತು ಒಗ್ಗಟ್ಟಿನ ಸಂದೇಶವನ್ನು ಕಳುಹಿಸಲು ಇರುವ ಸರ್ವಪಕ್ಷ ಸಭೆಯಾಗಿದೆ. ಎಲ್ಲಾ ಪಕ್ಷಗಳ ಕಳವಳಗಳನ್ನು ಕೇಳಲು ಪ್ರಧಾನಿ ನರೇಂದ್ರ ಮೋದಿ ಹೆಚ್ಚುವರಿಯಾಗಿ ಒಂದಿಷ್ಟು ಗಂಟೆ ಕಳೆಯಲು ಸಾಧ್ಯವಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಯಾವುದೇ ಪಕ್ಷವು ಪ್ರಸ್ತುತ ಸಂಪೂರ್ಣ ಬಹುಮತವನ್ನು ಹೊಂದಿಲ್ಲ ಮತ್ತು ಪಕ್ಷದ ಗಾತ್ರವನ್ನು ಲೆಕ್ಕಿಸದೆ ಎಲ್ಲಾ ಸಂಸದರನ್ನು ಜನರು ಆಯ್ಕೆ ಮಾಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ನಿಮ್ಮ ಸ್ವಂತ ಪಕ್ಷಕ್ಕೆ ಬಹುಮತವಿಲ್ಲ. ಒಬ್ಬ ಸಂಸದರನ್ನು ಹೊಂದಿರುವ ಪಕ್ಷವಾಗಲಿ ಅಥವಾ 100 ಸಂಸದರನ್ನು ಹೊಂದಿರುವ ಪಕ್ಷವಾಗಲಿ, ಎಲ್ಲರೂ ಭಾರತೀಯರಿಂದ ಆಯ್ಕೆಯಾಗಿದ್ದಾರೆ. ಆದ್ದರಿಂದ ಇಂತಹ ಗಂಭೀರ ವಿಷಯದಲ್ಲಿ ಎಲ್ಲರ ಮಾತು ಕೂಡಾ ಕೇಳಬೇಕಿದೆ. ಇದು ರಾಜಕೀಯ ವಿಚಾರವಲ್ಲ, ರಾಷ್ಟ್ರೀಯ ವಿಷಯವಾಗಿದೆ. ಎಲ್ಲರ ಅಭಿಪ್ರಾಯವನ್ನೂ ಕೇಳಬೇಕು.,” ಅವರು ಒತ್ತಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಪ್ರತಿನಿಧಿಸುವ ಎಲ್ಲಾ ಪಕ್ಷಗಳನ್ನು ಚರ್ಚೆಗಳಲ್ಲಿ ಸೇರಿಸಿಕೊಳ್ಳುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. “ಇದನ್ನು ನಿಜವಾದ ಸರ್ವಪಕ್ಷ ಸಭೆಯನ್ನಾಗಿ ಮಾಡಲು ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಸಂಸತ್ತಿನಲ್ಲಿ ಸಂಸದರನ್ನು ಹೊಂದಿರುವ ಪ್ರತಿಯೊಂದು ಪಕ್ಷವನ್ನು ಆಹ್ವಾನಿಸಬೇಕು.” ಎಂದು ಅವರು ಆಗ್ರಹಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಯಲ್ಲಿ ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಸರ್ಕಾರ ಹಲವಾರು ಕ್ರಮಗಳನ್ನು ಘೋಷಿಸುವುದರೊಂದಿಗೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಸರ್ವಪಕ್ಷ ಸಭೆ ಕರೆಯುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ವಿವಿಧ ಪಕ್ಷಗಳನ್ನು ಸಂಪರ್ಕಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕ್ರಮವಾಗಿ ಗುರುವಾರ ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ತಿಳಿಸಿದೆ.

“ವಿಷಯದ ಗಂಭೀರತೆ ಮತ್ತು ದೇಶದ ಮನಸ್ಥಿತಿಯನ್ನು ಪರಿಗಣಿಸಿ, ಇಂದು ಸಂಜೆ 6 ಗಂಟೆಗೆ ನಡೆಯಲಿರುವ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಲಿದ್ದಾರೆ ಮತ್ತು ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ಸಂಕಲ್ಪವನ್ನು ಕೈಗೊಳ್ಳುತ್ತಾರೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿರೀಕ್ಷಿಸುತ್ತದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್

ಪಹಲ್ಗಾಮ್ ಭಯೋತ್ಪಾದಕ ದಾಳಿ: ತುರ್ತು ಕಾರ್ಯಕಾರಿಣಿ ಸಭೆ ನಡೆಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...