Homeಮುಖಪುಟಪಹಲ್ಗಾಮ್ ದಾಳಿ ನಂತರ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರ

ಪಹಲ್ಗಾಮ್ ದಾಳಿ ನಂತರ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರ

- Advertisement -
- Advertisement -

ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರ, ಬೆದರಿಕೆ ಮತ್ತು ದ್ವೇಷ ಕಾರುವ ಘಟನೆಗಳು ವರದಿಯಾಗಿವೆ. ಅನಂತ್‌ನಾಗ್ ಜಿಲ್ಲೆಯ ಬೈಸರನ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಇಪ್ಪತ್ತಾರು ಜನರು ಸಾವನ್ನಪ್ಪಿದ್ದು ಮತ್ತು 17 ಜನರು ಗಾಯಗೊಂಡಿದ್ದರು. ಪಹಲ್ಗಾಮ್ ದಾಳಿ

ದಾಳಿಯ ನಂತರ, ಉತ್ತರಾಖಂಡ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಮುಸ್ಲಿಮರ ಮೇಲೆ ಹಿಂಸಾಚಾರ, ಬೆದರಿಕೆ ಮತ್ತು ದ್ವೇಷ ಕಾರುವ ಘಟನೆಗಳು ವರದಿಯಾಗಿವೆ.

ಉತ್ತರಾಖಂಡ

ಉತ್ತರಾಖಂಡದಲ್ಲಿ, ಏಪ್ರಿಲ್ 23 ರಂದು ಸ್ಥಳೀಯರು ಇಬ್ಬರು ವ್ಯಾಪಾರಿಗಳ ಮೇಲೆ ದಾಳಿ ಮಾಡಿದ್ದಾರೆ ಎಂಬ ಆರೋಪದ ನಂತರ ಕಾಶ್ಮೀರದ ಕನಿಷ್ಠ 16 ಶಾಲು ವ್ಯಾಪಾರಿಗಳು ಮಸ್ಸೂರಿಯನ್ನು ತೊರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ ವರದಿ ಮಾಡಿದೆ. ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ದೀಪಮ್ ಸೇಥ್ ಹೇಳಿದ್ದಾರೆ.

ಹಲ್ಲೆಗೊಳಗಾದ ಮಾರಾಟಗಾರರಲ್ಲಿ ಒಬ್ಬರಾದ ಕುಪ್ವಾರದ ಶಬೀರ್ ಅಹ್ಮದ್ ದಾರ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ್ದು, ತಮ್ಮ ಸರಕುಗಳನ್ನು ಮಾರಾಟ ಮಾಡಲು 18 ವರ್ಷಗಳಿಂದ ಮಸ್ಸೂರಿಗೆ ಭೇಟಿ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ. ದಾಳಿಕೋರರು ಅದೇ ಪ್ರದೇಶದವರಾಗಿದ್ದು, ಅವರನ್ನು ತಾನು ಈ  ಮೊದಲು ನೋಡಿದ್ದಾಗಿ ಹೇಳಿದ್ದಾರೆ. “ದಾಳಿಯ ವೇಳೆ ಯಾರೂ ನಮ್ಮ ಪರವಾಗಿ ನಿಲ್ಲಲಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರಿಗಳ ವಿರುದ್ಧ ಬೆದರಿಕೆ ಇದ್ದು, ಅವರು ಅಲ್ಲಿಂದ ಹೊರಡುವುದು ಉತ್ತಮ ಎಂದು ಪೊಲೀಸರು ಹೇಳಿದ್ದರು ಎಂದು ಅವರು ಹೇಳಿದ್ದಾರೆ. ಸೂರಜ್ ಸಿಂಗ್, ಪ್ರದೀಪ್ ಸಿಂಗ್ ಮತ್ತು ಅಭಿಷೇಕ್ ಉನಿಯಾಲ್ ಎಂದು ಗುರುತಿಸಲಾದ ಬಂಧಿತ ಮೂವರು ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ಬಜರಂಗದಳದ ಸದಸ್ಯರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಪೊಲೀಸ್ ಕಾಯ್ದೆಯ ಸೆಕ್ಷನ್ 81 ರ ಅಡಿಯಲ್ಲಿ ಅವರನ್ನು ಬಂಧಿಸಲಾಯಿತು ಮತ್ತು [ಅವ್ಯವಸ್ಥೆಯ ವರ್ತನೆಗೆ ಸಂಬಂಧಿಸಿದಂತೆ] ದಂಡ ವಿಧಿಸಿ ಬಿಡುಗಡೆ ಮಾಡಲಾಯಿತು. ಅವರು ಮಾಡಿದ ಅಪರಾಧಕ್ಕೆ ಕ್ಷಮೆಯಾಚಿಸಿದರು.” ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ

ರಾಜ್ಯದ ಮಂಗಳೂರು ಜಿಲ್ಲೆಯಲ್ಲಿ, ಕ್ರಿಕೆಟ್ ಪಂದ್ಯದ ಸಮಯದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿ ಕೇರಳ ಮೂಲದ ಅಶ್ರಫ್ ಎಂಬ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಹೊಡೆದು ಸಾಯಿಸಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ಹದಿನೈದು ಜನರನ್ನು ಬಂಧಿಸಲಾಗಿದ್ದು, 25 ಕ್ಕೂ ಹೆಚ್ಚು ಶಂಕಿತರನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಿಳಿಸಿದ್ದಾರೆ. ಮಂಗಳೂರಿನ ಹೊರವಲಯದಲ್ಲಿರುವ ಕುಡುಪು ದೇವಸ್ಥಾನದ ಬಳಿ ಅವರ ಶವ ಪತ್ತೆಯಾಗಿತ್ತು. ಭಾನುವಾರ ಸಂಜೆ 5.30 ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶ

ಉತ್ತರ ಪ್ರದೇಶದ ಅಲಿಗಢದಲ್ಲಿ ಸೋಮವಾರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ರಸ್ತೆಯಲ್ಲಿ ಇರಿಸಲಾಗಿದ್ದ ಧ್ವಜವನ್ನು ಎತ್ತಿಕೊಂಡಿದ್ದಾರೆ ಎಂದು ಆರೋಪಿಸಿ 15 ವರ್ಷದ ಮುಸ್ಲಿಂ ವಿದ್ಯಾರ್ಥಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ ಪಾಕಿಸ್ತಾನ ಧ್ವಜದ ಮೇಲೆ ಮೂತ್ರ ವಿಸರ್ಜನೆ ಮಾಡಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಧ್ವಜದ ಕೆಳಗೆ “ಪಾಕಿಸ್ತಾನ ಮುರ್ದಾಬಾದ್” ಎಂದು ಬರೆಯಲಾಗಿತ್ತು. ಬಾಲಕ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಹುಡುಗನನ್ನು ಸುತ್ತುವರೆದು ದುಷ್ಕರ್ಮಿಗಳು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸುತ್ತಿರುವುದು ದಾಖಲಾಗಿದೆ. ಶಾಲೆಯಿಂದ ವಾಪಾಸು ಬರುತ್ತಿದ್ದ ಬಾಲಕ ರಸ್ತೆಯ ಮಧ್ಯದಿಂದ ಧ್ವಜವನ್ನು ಎತ್ತಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಅಲ್ಲದೆ, ಕಾಶ್ಮೀರಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಪ್ರದೇಶಕ್ಕೆ ಬರದಂತೆ ಬೆದರಿಸಲಾಗಿದ್ದು, ಈ ಬೆದರಿಕೆ ಸಂದೇಶಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲಾಗಿದೆ. ಹಿಂದೂ ರಕ್ಷಾ ದಳ ದುಷ್ಕರ್ಮಿ ಲಲಿತ್ ಶರ್ಮಾ ಎಂಬಾತನು ಕಾಶ್ಮೀರಿ ಮುಸ್ಲಿಮರಿಗೆ ನಗರವನ್ನು ತೊರೆಯುವಂತೆ ಎಚ್ಚರಿಕೆ ನೀಡುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾನೆ ಎಂದು ದಿವೈರ್ ಹೇಳಿದೆ.

ಮಧ್ಯಪ್ರದೇಶ

ರಾಜ್ಯದ ಭೋಪಾಲ್‌ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಬೆಂಬಲಿಸಿದ್ದಾರೆ ಎಂದು ಆರೋಪಿಸಿ ದುಷ್ಕರ್ಮಿಯೊಬ್ಬ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಭೋಪಾಲ್ (ಕೇಂದ್ರ) ವಿಧಾನಸಭಾ ಸ್ಥಾನವನ್ನು ಪ್ರತಿನಿಧಿಸುವ ಮಸೂದ್ ಶಹಜನಾಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ದುಷ್ಕರ್ಮಿಯೊಬ್ಬರನ್ನು ಸಚಿನ್ ರಘುವಂಶಿ ಎಂದು ಗುರುತಿಸಲಾಗಿದ್ದು, ಆತ ಸಾಮಾಜಿಕ ಮಾಧ್ಯಮ ವೇದಿಕೆಯಾದ ಫೇಸ್‌ಬುಕ್‌ನಲ್ಲಿ “ನಾಳೆ ಆರಿಫ್ ಮಸೂದ್‌ನನ್ನು ಕೊಲ್ಲುತ್ತೇನೆ. ನನ್ನನ್ನು ಜೈಲಿನಿಂದ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ? ಪಹಲ್ಗಾಮ್‌ನಲ್ಲಿ ನಡೆದ ಹತ್ಯಾಕಾಂಡದ ನಂತರ, ಘಟನೆಯನ್ನು ಬೆಂಬಲಿಸುತ್ತಿರುವ ಒಬ್ಬ ದೇಶದ್ರೋಹಿ, ಒಬ್ಬ ವ್ಯಕ್ತಿಯನ್ನು ನಾನು ಕೊಲ್ಲುತ್ತೇನೆ.” ಎಂದು ಬರೆದಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಜಮ್ಮು ಕಾಶ್ಮೀರ

ದಿ ವೈರ್‌ನ ವರದಿಯು ದಾಳಿಯ ನಂತರ ಜಮ್ಮು, ಉತ್ತರಾಖಂಡ್, ಪಂಜಾಬ್, ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಮತ್ತು ನಿವಾಸಿಗಳು ಬೆದರಿಕೆ, ಕಿರುಕುಳ, ಮತ್ತು ಹಿಂಸಾಚಾರದ ಆರೋಪಗಳನ್ನು ಎದುರಿಸಿದ್ದಾರೆ ಎಂದು ಉಲ್ಲೇಖಿಸಿದೆ. ಜಮ್ಮುವಿನಲ್ಲಿ, ಕಾಶ್ಮೀರಿ ವಿದ್ಯಾರ್ಥಿಗಳು ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ “ಜೈ ಶ್ರೀ ರಾಮ್” ಘೋಷಣೆಗಳೊಂದಿಗೆ ಯುವಕರು ಬೈಕ್‌ಗಳಲ್ಲಿ ತಿರುಗಾಡುತ್ತಿದ್ದ ವಿಡಿಯೋವನ್ನು ವರದಿಮಾಡಿದ್ದಾರೆ. ಇದು ಭಯದ ವಾತಾವರಣವನ್ನು ಸೃಷ್ಟಿಸಿದ್ದು, ಒಂದು ವಿಡಿಯೋದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಹೊಡೆದು ಓಡಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಪಂಜಾಬ್

ಪಂಜಾಬ್‌ನಲ್ಲಿ, ಕಾಶ್ಮೀರಿ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳಿಂದ ಕಿರುಕುಳವನ್ನು ಎದುರಿಸಿದ್ದಾರೆ ಎಂದು ದಿ ವೈರ್ ಉಲ್ಲೇಖಿಸಿದೆ. ಆದರೆ ಈ ಘಟನೆಗಳು ದೈಹಿಕ ಹಿಂಸಾಚಾರಕ್ಕೆ ತಿರುಗಿರುವ ಬಗ್ಗೆ ನಿರ್ದಿಷ್ಟ ವಿವರಗಳಿಲ್ಲ.

ಪ್ರತಿಭಟನೆಗಳು ಮತ್ತು ಧ್ವೇಷ ಭಾಷಣ:

ಪಹಲ್ಗಾಮ್ ದಾಳಿಯ ನಂತರ, ಬಿಜೆಪಿ ಸದಸ್ಯರು ಮತ್ತು ನಾಯಕರು ಧ್ವೇಷ ಭಾಷಣ ಮತ್ತು ಹಿಂಸಾಚಾರದ ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಘಟನೆಗಳಲ್ಲಿ ಆರ್ಥಿಕ ಬಹಿಷ್ಕಾರಕ್ಕೆ ಕರೆಗಳು, ಮಸೀದಿಗಳ ವಿರುದ್ಧ ಉದ್ವಿಗ್ನ ಪ್ರತಿಭಟನೆಗಳು, ಮುಸ್ಲಿಂ ವ್ಯಾಪಾರಿಗಳ ಮೇಲಿನ ದಾಳಿಗಳು ಸೇರಿವೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಂತಹ ದುಷ್ಕರ್ಮಿ ಸಂಟನೆಗಳು ಸಹ ಇದೇ ರೀತಿಯ ಧೋರಣೆಯನ್ನು ಒಳಗೊಂಡ ಪ್ರತಿಭಟನೆಗಳನ್ನು ಆಯೋಜಿಸಿವೆ.

ಇಂಡಿಯನ್ ಎಕ್ಸ್‌ಪ್ರೆಸ್, ದಿ ಹಿಂದೂ, ಇಂಡಿಯಾ ಟುಡೆ, ಎನ್‌ಡಿಟಿವಿ, ಸ್ಕ್ರಾಲ್, ದಿ ವೈರ್, ಮತ್ತು ಡೆಕ್ಕನ್ ಹೆರಾಲ್ಡ್‌ನ ವರದಿಗಳು ಪಹಲ್ಗಾಮ್ ದಾಳಿಯ ನಂತರ ಜಮ್ಮು, ಉತ್ತರಾಖಂಡ್, ಉತ್ತರ ಪ್ರದೇಶ, ಮತ್ತು ಪಂಜಾಬ್‌ನಂತಹ ರಾಜ್ಯಗಳಲ್ಲಿ ಕಾಶ್ಮೀರಿ ಮತ್ತು ಮುಸ್ಲಿಂ ಸಮುದಾಯಗಳ ವಿರುದ್ಧ ಕಿರುಕುಳ, ಬೆದರಿಕೆ, ಮತ್ತು ಧ್ವೇಷ ಭಾಷಣದ ಏರಿಕೆಯನ್ನು ದಾಖಲಿಸಿವೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ಮೇ 3 ರಂದು ಬಂದ್ ಆಚರಿಸುವಂತೆ ವಿದ್ಯಾರ್ಥಿ ಸಂಘಟನೆಗಳಿಂದ ಆಗ್ರಹ

ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ಮೇ 3 ರಂದು ಬಂದ್ ಆಚರಿಸುವಂತೆ ವಿದ್ಯಾರ್ಥಿ ಸಂಘಟನೆಗಳಿಂದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...