Homeಮುಖಪುಟಪಹಲ್ಗಾಮ್ ದಾಳಿ ನಂತರ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರ

ಪಹಲ್ಗಾಮ್ ದಾಳಿ ನಂತರ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಮುಸ್ಲಿಂ ವಿರೋಧಿ ಹಿಂಸಾಚಾರ

- Advertisement -
- Advertisement -

ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರ, ಬೆದರಿಕೆ ಮತ್ತು ದ್ವೇಷ ಕಾರುವ ಘಟನೆಗಳು ವರದಿಯಾಗಿವೆ. ಅನಂತ್‌ನಾಗ್ ಜಿಲ್ಲೆಯ ಬೈಸರನ್ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಇಪ್ಪತ್ತಾರು ಜನರು ಸಾವನ್ನಪ್ಪಿದ್ದು ಮತ್ತು 17 ಜನರು ಗಾಯಗೊಂಡಿದ್ದರು. ಪಹಲ್ಗಾಮ್ ದಾಳಿ

ದಾಳಿಯ ನಂತರ, ಉತ್ತರಾಖಂಡ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಮುಸ್ಲಿಮರ ಮೇಲೆ ಹಿಂಸಾಚಾರ, ಬೆದರಿಕೆ ಮತ್ತು ದ್ವೇಷ ಕಾರುವ ಘಟನೆಗಳು ವರದಿಯಾಗಿವೆ.

ಉತ್ತರಾಖಂಡ

ಉತ್ತರಾಖಂಡದಲ್ಲಿ, ಏಪ್ರಿಲ್ 23 ರಂದು ಸ್ಥಳೀಯರು ಇಬ್ಬರು ವ್ಯಾಪಾರಿಗಳ ಮೇಲೆ ದಾಳಿ ಮಾಡಿದ್ದಾರೆ ಎಂಬ ಆರೋಪದ ನಂತರ ಕಾಶ್ಮೀರದ ಕನಿಷ್ಠ 16 ಶಾಲು ವ್ಯಾಪಾರಿಗಳು ಮಸ್ಸೂರಿಯನ್ನು ತೊರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ ವರದಿ ಮಾಡಿದೆ. ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ದೀಪಮ್ ಸೇಥ್ ಹೇಳಿದ್ದಾರೆ.

ಹಲ್ಲೆಗೊಳಗಾದ ಮಾರಾಟಗಾರರಲ್ಲಿ ಒಬ್ಬರಾದ ಕುಪ್ವಾರದ ಶಬೀರ್ ಅಹ್ಮದ್ ದಾರ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ್ದು, ತಮ್ಮ ಸರಕುಗಳನ್ನು ಮಾರಾಟ ಮಾಡಲು 18 ವರ್ಷಗಳಿಂದ ಮಸ್ಸೂರಿಗೆ ಭೇಟಿ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ. ದಾಳಿಕೋರರು ಅದೇ ಪ್ರದೇಶದವರಾಗಿದ್ದು, ಅವರನ್ನು ತಾನು ಈ  ಮೊದಲು ನೋಡಿದ್ದಾಗಿ ಹೇಳಿದ್ದಾರೆ. “ದಾಳಿಯ ವೇಳೆ ಯಾರೂ ನಮ್ಮ ಪರವಾಗಿ ನಿಲ್ಲಲಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕಾಶ್ಮೀರಿಗಳ ವಿರುದ್ಧ ಬೆದರಿಕೆ ಇದ್ದು, ಅವರು ಅಲ್ಲಿಂದ ಹೊರಡುವುದು ಉತ್ತಮ ಎಂದು ಪೊಲೀಸರು ಹೇಳಿದ್ದರು ಎಂದು ಅವರು ಹೇಳಿದ್ದಾರೆ. ಸೂರಜ್ ಸಿಂಗ್, ಪ್ರದೀಪ್ ಸಿಂಗ್ ಮತ್ತು ಅಭಿಷೇಕ್ ಉನಿಯಾಲ್ ಎಂದು ಗುರುತಿಸಲಾದ ಬಂಧಿತ ಮೂವರು ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ಬಜರಂಗದಳದ ಸದಸ್ಯರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಪೊಲೀಸ್ ಕಾಯ್ದೆಯ ಸೆಕ್ಷನ್ 81 ರ ಅಡಿಯಲ್ಲಿ ಅವರನ್ನು ಬಂಧಿಸಲಾಯಿತು ಮತ್ತು [ಅವ್ಯವಸ್ಥೆಯ ವರ್ತನೆಗೆ ಸಂಬಂಧಿಸಿದಂತೆ] ದಂಡ ವಿಧಿಸಿ ಬಿಡುಗಡೆ ಮಾಡಲಾಯಿತು. ಅವರು ಮಾಡಿದ ಅಪರಾಧಕ್ಕೆ ಕ್ಷಮೆಯಾಚಿಸಿದರು.” ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ

ರಾಜ್ಯದ ಮಂಗಳೂರು ಜಿಲ್ಲೆಯಲ್ಲಿ, ಕ್ರಿಕೆಟ್ ಪಂದ್ಯದ ಸಮಯದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿ ಕೇರಳ ಮೂಲದ ಅಶ್ರಫ್ ಎಂಬ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಹೊಡೆದು ಸಾಯಿಸಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ಹದಿನೈದು ಜನರನ್ನು ಬಂಧಿಸಲಾಗಿದ್ದು, 25 ಕ್ಕೂ ಹೆಚ್ಚು ಶಂಕಿತರನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಿಳಿಸಿದ್ದಾರೆ. ಮಂಗಳೂರಿನ ಹೊರವಲಯದಲ್ಲಿರುವ ಕುಡುಪು ದೇವಸ್ಥಾನದ ಬಳಿ ಅವರ ಶವ ಪತ್ತೆಯಾಗಿತ್ತು. ಭಾನುವಾರ ಸಂಜೆ 5.30 ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶ

ಉತ್ತರ ಪ್ರದೇಶದ ಅಲಿಗಢದಲ್ಲಿ ಸೋಮವಾರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ರಸ್ತೆಯಲ್ಲಿ ಇರಿಸಲಾಗಿದ್ದ ಧ್ವಜವನ್ನು ಎತ್ತಿಕೊಂಡಿದ್ದಾರೆ ಎಂದು ಆರೋಪಿಸಿ 15 ವರ್ಷದ ಮುಸ್ಲಿಂ ವಿದ್ಯಾರ್ಥಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ ಪಾಕಿಸ್ತಾನ ಧ್ವಜದ ಮೇಲೆ ಮೂತ್ರ ವಿಸರ್ಜನೆ ಮಾಡಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಧ್ವಜದ ಕೆಳಗೆ “ಪಾಕಿಸ್ತಾನ ಮುರ್ದಾಬಾದ್” ಎಂದು ಬರೆಯಲಾಗಿತ್ತು. ಬಾಲಕ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಹುಡುಗನನ್ನು ಸುತ್ತುವರೆದು ದುಷ್ಕರ್ಮಿಗಳು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸುತ್ತಿರುವುದು ದಾಖಲಾಗಿದೆ. ಶಾಲೆಯಿಂದ ವಾಪಾಸು ಬರುತ್ತಿದ್ದ ಬಾಲಕ ರಸ್ತೆಯ ಮಧ್ಯದಿಂದ ಧ್ವಜವನ್ನು ಎತ್ತಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಅಲ್ಲದೆ, ಕಾಶ್ಮೀರಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಪ್ರದೇಶಕ್ಕೆ ಬರದಂತೆ ಬೆದರಿಸಲಾಗಿದ್ದು, ಈ ಬೆದರಿಕೆ ಸಂದೇಶಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲಾಗಿದೆ. ಹಿಂದೂ ರಕ್ಷಾ ದಳ ದುಷ್ಕರ್ಮಿ ಲಲಿತ್ ಶರ್ಮಾ ಎಂಬಾತನು ಕಾಶ್ಮೀರಿ ಮುಸ್ಲಿಮರಿಗೆ ನಗರವನ್ನು ತೊರೆಯುವಂತೆ ಎಚ್ಚರಿಕೆ ನೀಡುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾನೆ ಎಂದು ದಿವೈರ್ ಹೇಳಿದೆ.

ಮಧ್ಯಪ್ರದೇಶ

ರಾಜ್ಯದ ಭೋಪಾಲ್‌ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಬೆಂಬಲಿಸಿದ್ದಾರೆ ಎಂದು ಆರೋಪಿಸಿ ದುಷ್ಕರ್ಮಿಯೊಬ್ಬ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಭೋಪಾಲ್ (ಕೇಂದ್ರ) ವಿಧಾನಸಭಾ ಸ್ಥಾನವನ್ನು ಪ್ರತಿನಿಧಿಸುವ ಮಸೂದ್ ಶಹಜನಾಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ದುಷ್ಕರ್ಮಿಯೊಬ್ಬರನ್ನು ಸಚಿನ್ ರಘುವಂಶಿ ಎಂದು ಗುರುತಿಸಲಾಗಿದ್ದು, ಆತ ಸಾಮಾಜಿಕ ಮಾಧ್ಯಮ ವೇದಿಕೆಯಾದ ಫೇಸ್‌ಬುಕ್‌ನಲ್ಲಿ “ನಾಳೆ ಆರಿಫ್ ಮಸೂದ್‌ನನ್ನು ಕೊಲ್ಲುತ್ತೇನೆ. ನನ್ನನ್ನು ಜೈಲಿನಿಂದ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ? ಪಹಲ್ಗಾಮ್‌ನಲ್ಲಿ ನಡೆದ ಹತ್ಯಾಕಾಂಡದ ನಂತರ, ಘಟನೆಯನ್ನು ಬೆಂಬಲಿಸುತ್ತಿರುವ ಒಬ್ಬ ದೇಶದ್ರೋಹಿ, ಒಬ್ಬ ವ್ಯಕ್ತಿಯನ್ನು ನಾನು ಕೊಲ್ಲುತ್ತೇನೆ.” ಎಂದು ಬರೆದಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಜಮ್ಮು ಕಾಶ್ಮೀರ

ದಿ ವೈರ್‌ನ ವರದಿಯು ದಾಳಿಯ ನಂತರ ಜಮ್ಮು, ಉತ್ತರಾಖಂಡ್, ಪಂಜಾಬ್, ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಮತ್ತು ನಿವಾಸಿಗಳು ಬೆದರಿಕೆ, ಕಿರುಕುಳ, ಮತ್ತು ಹಿಂಸಾಚಾರದ ಆರೋಪಗಳನ್ನು ಎದುರಿಸಿದ್ದಾರೆ ಎಂದು ಉಲ್ಲೇಖಿಸಿದೆ. ಜಮ್ಮುವಿನಲ್ಲಿ, ಕಾಶ್ಮೀರಿ ವಿದ್ಯಾರ್ಥಿಗಳು ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ “ಜೈ ಶ್ರೀ ರಾಮ್” ಘೋಷಣೆಗಳೊಂದಿಗೆ ಯುವಕರು ಬೈಕ್‌ಗಳಲ್ಲಿ ತಿರುಗಾಡುತ್ತಿದ್ದ ವಿಡಿಯೋವನ್ನು ವರದಿಮಾಡಿದ್ದಾರೆ. ಇದು ಭಯದ ವಾತಾವರಣವನ್ನು ಸೃಷ್ಟಿಸಿದ್ದು, ಒಂದು ವಿಡಿಯೋದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಹೊಡೆದು ಓಡಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಪಂಜಾಬ್

ಪಂಜಾಬ್‌ನಲ್ಲಿ, ಕಾಶ್ಮೀರಿ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳಿಂದ ಕಿರುಕುಳವನ್ನು ಎದುರಿಸಿದ್ದಾರೆ ಎಂದು ದಿ ವೈರ್ ಉಲ್ಲೇಖಿಸಿದೆ. ಆದರೆ ಈ ಘಟನೆಗಳು ದೈಹಿಕ ಹಿಂಸಾಚಾರಕ್ಕೆ ತಿರುಗಿರುವ ಬಗ್ಗೆ ನಿರ್ದಿಷ್ಟ ವಿವರಗಳಿಲ್ಲ.

ಪ್ರತಿಭಟನೆಗಳು ಮತ್ತು ಧ್ವೇಷ ಭಾಷಣ:

ಪಹಲ್ಗಾಮ್ ದಾಳಿಯ ನಂತರ, ಬಿಜೆಪಿ ಸದಸ್ಯರು ಮತ್ತು ನಾಯಕರು ಧ್ವೇಷ ಭಾಷಣ ಮತ್ತು ಹಿಂಸಾಚಾರದ ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಘಟನೆಗಳಲ್ಲಿ ಆರ್ಥಿಕ ಬಹಿಷ್ಕಾರಕ್ಕೆ ಕರೆಗಳು, ಮಸೀದಿಗಳ ವಿರುದ್ಧ ಉದ್ವಿಗ್ನ ಪ್ರತಿಭಟನೆಗಳು, ಮುಸ್ಲಿಂ ವ್ಯಾಪಾರಿಗಳ ಮೇಲಿನ ದಾಳಿಗಳು ಸೇರಿವೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಂತಹ ದುಷ್ಕರ್ಮಿ ಸಂಟನೆಗಳು ಸಹ ಇದೇ ರೀತಿಯ ಧೋರಣೆಯನ್ನು ಒಳಗೊಂಡ ಪ್ರತಿಭಟನೆಗಳನ್ನು ಆಯೋಜಿಸಿವೆ.

ಇಂಡಿಯನ್ ಎಕ್ಸ್‌ಪ್ರೆಸ್, ದಿ ಹಿಂದೂ, ಇಂಡಿಯಾ ಟುಡೆ, ಎನ್‌ಡಿಟಿವಿ, ಸ್ಕ್ರಾಲ್, ದಿ ವೈರ್, ಮತ್ತು ಡೆಕ್ಕನ್ ಹೆರಾಲ್ಡ್‌ನ ವರದಿಗಳು ಪಹಲ್ಗಾಮ್ ದಾಳಿಯ ನಂತರ ಜಮ್ಮು, ಉತ್ತರಾಖಂಡ್, ಉತ್ತರ ಪ್ರದೇಶ, ಮತ್ತು ಪಂಜಾಬ್‌ನಂತಹ ರಾಜ್ಯಗಳಲ್ಲಿ ಕಾಶ್ಮೀರಿ ಮತ್ತು ಮುಸ್ಲಿಂ ಸಮುದಾಯಗಳ ವಿರುದ್ಧ ಕಿರುಕುಳ, ಬೆದರಿಕೆ, ಮತ್ತು ಧ್ವೇಷ ಭಾಷಣದ ಏರಿಕೆಯನ್ನು ದಾಖಲಿಸಿವೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ಮೇ 3 ರಂದು ಬಂದ್ ಆಚರಿಸುವಂತೆ ವಿದ್ಯಾರ್ಥಿ ಸಂಘಟನೆಗಳಿಂದ ಆಗ್ರಹ

ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ಮೇ 3 ರಂದು ಬಂದ್ ಆಚರಿಸುವಂತೆ ವಿದ್ಯಾರ್ಥಿ ಸಂಘಟನೆಗಳಿಂದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...