Homeಮುಖಪುಟಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯು ಗಂಭೀರ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಘಟನೆಗೆ ಕೆಲವು ದಿನಗಳ ಮೊದಲೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ನೆಲೆಸಿರುವ ಭಯೋತ್ಪಾದಕನೊಬ್ಬ ದಾಳಿಯ ಬಗ್ಗೆ ಸುಳಿವು ನೀಡಿದ್ದನು ಎಂದು ಮೂಲಗಳು ಹೇಳಿದ್ದು, ಆದರೆ ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಅದರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದ್ದು, ಇದು ಭೀಕರ ದುರಂತಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. ಪಹಲ್ಗಾಮ್ ದಾಳಿ

ಪಿಒಕೆ ಮತ್ತು ಪಾಕಿಸ್ತಾನದಲ್ಲಿ ನೆಲೆಗೊಂಡಿದ್ದ ಅಂತರರಾಷ್ಟ್ರೀಯ ನಿರ್ವಾಹಕರು ಕಾಲ ಕಾಲಕ್ಕೆ ಉಗ್ರರಿಗೆ ನಿರ್ದೇಶನಗಳನ್ನು ನೀಡುತ್ತಿದ್ದರು ಎಂದು ವರದಿಯಾಗಿದೆ. ದಾಳಿಯಲ್ಲಿ ಭಾಗಿಯಾಗಿರುವ ಉಗ್ರರು ಶಸ್ತ್ರಾಸ್ತ್ರಗಳನ್ನು ಬಳಸುವಲ್ಲಿ ಉತ್ತಮ ತರಬೇತಿ ಪಡೆದಿದ್ದರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಜನಪ್ರಿಯ ಪ್ರವಾಸಿ ತಾಣಗಳಾಗಿದ್ದರೂ ಭದ್ರತಾ ಪಡೆಗಳ ನಿಯೋಜನೆ ಕಡಿಮೆ ಇರುವ ಪ್ರದೇಶಗಳ ವಿವರವಾದ ವರದಿಗಳನ್ನು ಒದಗಿಸಿದ್ದರು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ದಾಳಿಕೋರರು ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಹೊಂದಿದ್ದರು ಎಂದು ವರದಿಯು ಉಲ್ಲೇಖಸಿದ್ದು, ಇದು ಪ್ರವಾಸಿಗರ ಹತ್ಯಾಕಾಂಡವನ್ನು ರೆಕಾರ್ಡ್ ಮಾಡಲು ಮತ್ತು ದೃಶ್ಯಗಳನ್ನು ಅವರ ಭಯೋತ್ಪಾದಕ ಅಂಗಸಂಸ್ಥೆಗಳಿಗೆ ರವಾನಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬುಧವಾರ ಭದ್ರತಾ ಸಂಸ್ಥೆಗಳು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ ಮೂವರು ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ. ಆರೋಪಿಗಳನ್ನು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದ್ದು ಅವರು ಮೂಸಾ, ಯೂನಸ್ ಮತ್ತು ಆಸಿಫ್ ಎಂಬ ಸಂಕೇತನಾಮಗಳನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಪೂಂಚ್‌ನಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಘಟನೆಗಳಲ್ಲಿಯೂ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ ಭಯೋತ್ಪಾದಕ ಗುಂಪಿನ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಮಂಗಳವಾರ ಮಧ್ಯಾಹ್ನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಹಿರಿಯ ಕಮಾಂಡರ್ ಅಲಿಯಾಸ್ ಖಾಲಿದ್ ಎಂದೂ ಕರೆಯಲ್ಪಡುವ ಸೈಫುಲ್ಲಾ ಕಸೂರಿಯನ್ನು ಹತ್ಯಾಕಾಂಡದ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿವೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಿಂದ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ನಡೆದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಇದರಲ್ಲಿ ಲೆಫ್ಟಿನೆಂಟ್ ಗವರ್ನರ್ ಕೂಡ ಭಾಗವಹಿಸಿದ್ದರು. ದೇಶವು ಭಯೋತ್ಪಾದನೆಗೆ ಮಣಿಯುವುದಿಲ್ಲ ಮತ್ತು ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಬಿಡಲಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೂಲಗಳ ಪ್ರಕಾರ, ಕೇಂದ್ರವು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಮತ್ತು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಈ ಸಂದರ್ಭದಲ್ಲಿ ಸರ್ಕಾರವು ಅಂತರರಾಷ್ಟ್ರೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುರಿಯನ್ನು ಹೊಂದಿದೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...