Homeಮುಖಪುಟಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯು ಗಂಭೀರ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಘಟನೆಗೆ ಕೆಲವು ದಿನಗಳ ಮೊದಲೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ನೆಲೆಸಿರುವ ಭಯೋತ್ಪಾದಕನೊಬ್ಬ ದಾಳಿಯ ಬಗ್ಗೆ ಸುಳಿವು ನೀಡಿದ್ದನು ಎಂದು ಮೂಲಗಳು ಹೇಳಿದ್ದು, ಆದರೆ ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಅದರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದ್ದು, ಇದು ಭೀಕರ ದುರಂತಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. ಪಹಲ್ಗಾಮ್ ದಾಳಿ

ಪಿಒಕೆ ಮತ್ತು ಪಾಕಿಸ್ತಾನದಲ್ಲಿ ನೆಲೆಗೊಂಡಿದ್ದ ಅಂತರರಾಷ್ಟ್ರೀಯ ನಿರ್ವಾಹಕರು ಕಾಲ ಕಾಲಕ್ಕೆ ಉಗ್ರರಿಗೆ ನಿರ್ದೇಶನಗಳನ್ನು ನೀಡುತ್ತಿದ್ದರು ಎಂದು ವರದಿಯಾಗಿದೆ. ದಾಳಿಯಲ್ಲಿ ಭಾಗಿಯಾಗಿರುವ ಉಗ್ರರು ಶಸ್ತ್ರಾಸ್ತ್ರಗಳನ್ನು ಬಳಸುವಲ್ಲಿ ಉತ್ತಮ ತರಬೇತಿ ಪಡೆದಿದ್ದರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಜನಪ್ರಿಯ ಪ್ರವಾಸಿ ತಾಣಗಳಾಗಿದ್ದರೂ ಭದ್ರತಾ ಪಡೆಗಳ ನಿಯೋಜನೆ ಕಡಿಮೆ ಇರುವ ಪ್ರದೇಶಗಳ ವಿವರವಾದ ವರದಿಗಳನ್ನು ಒದಗಿಸಿದ್ದರು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ದಾಳಿಕೋರರು ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಹೊಂದಿದ್ದರು ಎಂದು ವರದಿಯು ಉಲ್ಲೇಖಸಿದ್ದು, ಇದು ಪ್ರವಾಸಿಗರ ಹತ್ಯಾಕಾಂಡವನ್ನು ರೆಕಾರ್ಡ್ ಮಾಡಲು ಮತ್ತು ದೃಶ್ಯಗಳನ್ನು ಅವರ ಭಯೋತ್ಪಾದಕ ಅಂಗಸಂಸ್ಥೆಗಳಿಗೆ ರವಾನಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬುಧವಾರ ಭದ್ರತಾ ಸಂಸ್ಥೆಗಳು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ ಮೂವರು ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ. ಆರೋಪಿಗಳನ್ನು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದ್ದು ಅವರು ಮೂಸಾ, ಯೂನಸ್ ಮತ್ತು ಆಸಿಫ್ ಎಂಬ ಸಂಕೇತನಾಮಗಳನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಪೂಂಚ್‌ನಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಘಟನೆಗಳಲ್ಲಿಯೂ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ ಭಯೋತ್ಪಾದಕ ಗುಂಪಿನ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಮಂಗಳವಾರ ಮಧ್ಯಾಹ್ನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಹಿರಿಯ ಕಮಾಂಡರ್ ಅಲಿಯಾಸ್ ಖಾಲಿದ್ ಎಂದೂ ಕರೆಯಲ್ಪಡುವ ಸೈಫುಲ್ಲಾ ಕಸೂರಿಯನ್ನು ಹತ್ಯಾಕಾಂಡದ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿವೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಿಂದ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ನಡೆದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಇದರಲ್ಲಿ ಲೆಫ್ಟಿನೆಂಟ್ ಗವರ್ನರ್ ಕೂಡ ಭಾಗವಹಿಸಿದ್ದರು. ದೇಶವು ಭಯೋತ್ಪಾದನೆಗೆ ಮಣಿಯುವುದಿಲ್ಲ ಮತ್ತು ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಬಿಡಲಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೂಲಗಳ ಪ್ರಕಾರ, ಕೇಂದ್ರವು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಮತ್ತು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಈ ಸಂದರ್ಭದಲ್ಲಿ ಸರ್ಕಾರವು ಅಂತರರಾಷ್ಟ್ರೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುರಿಯನ್ನು ಹೊಂದಿದೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...