Homeಮುಖಪುಟಪಹಲ್ಗಾಮ್ ದಾಳಿ:  ಪ್ರಾಣದ ಹಂಗು ತೊರೆದು ಪ್ರವಾಸಿಗರನ್ನು ರಕ್ಷಿಸಿದ ಅಪ್ರಾಪ್ತ ರುಬೀನಾ, ಮುಮ್ತಾಜಾ  ಸಹೋದರಿಯರು

ಪಹಲ್ಗಾಮ್ ದಾಳಿ:  ಪ್ರಾಣದ ಹಂಗು ತೊರೆದು ಪ್ರವಾಸಿಗರನ್ನು ರಕ್ಷಿಸಿದ ಅಪ್ರಾಪ್ತ ರುಬೀನಾ, ಮುಮ್ತಾಜಾ  ಸಹೋದರಿಯರು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಬಳಿಯ ಹುಲ್ಲುಗಾವಲುಗಳ ಎತ್ತರದ ಪ್ರದೇಶದಲ್ಲಿ ಭಯದ ನೆರಳಿನಲ್ಲಿ ಅಚಲ ಧೈರ್ಯದ ಸಂಕೇತವಾಗಿ ಇಬ್ಬರು ಅಪ್ರಾಪ್ತ ಬಾಲಕಿಯರು ಪ್ರವಾಸಿಗರನ್ನು ರಕ್ಷಿಸಿದ ವೀರಗಾಥೆ ವರದಿಯಾಗಿದೆ. ಒಂದು ಸಣ್ಣ ಮಣ್ಣಿನ ಮನೆಯಲ್ಲಿ ವಾಸಿಸುತ್ತಿರುವ ಮತ್ತು ಭಯಾನಕತೆ ಪರಿಸ್ಥಿತಿಯಲ್ಲಿ ಓಡಿಹೋಗಲು ನಿರಾಕರಿಸಿದ ಇಬ್ಬರು ಹದಿಹರೆಯದ ಸಹೋದರಿಯರ ಕಥೆಯಿದು.

ಗುಜ್ಜರ್-ಬಕೇರ್‌ವಾಲ್ ಸಮುದಾಯದ ಹೆಣ್ಣುಮಕ್ಕಳಾದ ರುಬೀನಾ (14) ಮತ್ತು ಮುಮ್ತಾಜಾ (16) ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಮಯದಲ್ಲಿ ಅನಿರೀಕ್ಷಿತ ರಕ್ಷಕರಾದರು, ಈ ಘಟನೆಯಲ್ಲಿ ಭಯೋತ್ಪಾದಕರು 26 ಜನರನ್ನು ಕೊಂದಿದ್ದರು.

ದಾಳಿಯ ನಂತರ ಪ್ರದೇಶವು ಭಯಭೀತವಾಗಿ ಪ್ರವಾಸಿಗರು ಭಯದಿಂದ ಚದುರಿಹೋದಾಗ, ಸಹೋದರಿಯರು ಓಡಿಹೋಗಲು ನಿರ್ಧರಿಸಲಿಲ್ಲ. ಕಾಲು ಮುರಿದಿದ್ದರೂ, ಮುಮ್ತಾಜಾ ಒಬ್ಬ ಪ್ರವಾಸಿಗರ ಮಗುವನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು. ಒಟ್ಟಾಗಿ, ಸಹೋದರಿಯರು ಚೆನ್ನೈಯ ದಂಪತಿಯನ್ನು ರಕ್ಷಿಸಿದರು ಮತ್ತು ಕಲ್ಲಿನ ಭೂಪ್ರದೇಶದ ಮೂಲಕ ಹೋಗಲು ಅನೇಕರಿಗೆ ಮಾರ್ಗದರ್ಶನ ಮಾಡಿದರು, ಅನೇಕ ಪ್ರವಾಸಿಗರಿಗೆ ಅವರ ಸಾಧಾರಣ ಮಣ್ಣಿನಿಂದ ಕಟ್ಟಿದ ಮನೆಯಲ್ಲಿ ಆಶ್ರಯ, ನೀರು ಮತ್ತು ಭರವಸೆಯನ್ನು ನೀಡಿದರು.

“ಆ ಕ್ಷಣದಲ್ಲಿ ನಾವು ನಮ್ಮ ಬಗ್ಗೆ ಯೋಚಿಸಲಿಲ್ಲ,” ಎಂದು ‘ಕಾಶ್ಮೀರದ ಮೊಲದ ಹುಡುಗಿ’ ಎಂದು ಕರೆಯಲ್ಪಡುವ ರುಬೀನಾ,  ತನ್ನ ಮುದ್ದಿನ ಮೊಲದ ಜೊತೆ  ಪ್ರವಾಸಿಗರು ಫೋಟೊ ತೆಗೆದುಕೊಳ್ಳಲು ಸ್ವಲ್ಪ ಹಣ ಪಡೆದು ನೀಡುತ್ತಿದ್ದಳು.

“ನಾವು ಪ್ರವಾಸಿಗರ ಬಗ್ಗೆ ಮಾತ್ರ ಯೋಚಿಸಿದೆವು. ಅವರಿಗೆ ನಡೆಯಲು ಸಾಧ್ಯವಾಗಲಿಲ್ಲ; ಅವರು ಭಯಭೀತರಾಗಿದ್ದರು. ಅವರು ಕೇಳಿದ್ದು ಸಹಾಯ ಮಾತ್ರ” ಎಂದು ಅವರು ಹೇಳಿದರು.

“ನಮ್ಮ ಮಣ್ಣಿನ ಮನೆಯಲ್ಲಿ ನಾವು ಅವರಿಗೆ ನೀರು ಕೊಟ್ಟೆವು” ಎಂದು ರುಬೀನಾ ಹೇಳಿದರು. “ನಾವು ಮೂರು ಬಾರಿ ಹಿಂತಿರುಗಿದೆವು. ಪ್ರತಿ ಬಾರಿಯೂ ಹೆಚ್ಚು ಜನರು ಓಡುತ್ತಿರುವುದನ್ನು, ಹೆಚ್ಚು ಜನರಿಗೆ ಸಹಾಯದ ಅಗತ್ಯವಿರುವುದನ್ನು ನಾವು ನೋಡಿದ್ದೇವೆ.” ಎಂದರು.

ಈಗ ಬೈಸರನ್ ಇಕೋ ಪಾರ್ಕ್‌ನಲ್ಲಿ ಮಾರ್ಗದರ್ಶಿ ಮತ್ತು ಸಹಾಯಕರಾಗಿ ಕೆಲಸ ಮಾಡುತ್ತಿರುವ ರುಬೀನಾ, ದಾಳಿ ಪ್ರಾರಂಭವಾಗುವ ಕೆಲವೇ ಕ್ಷಣಗಳ ಮೊದಲು ಚೆನ್ನೈನ ದಂಪತಿಗಳೊಂದಿಗೆ ಬಂದಿದ್ದರು.

ಏಪ್ರಿಲ್ 22ರಂದು ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಸುಂದರವಾದ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ವಿದೇಶಿ ಪ್ರಜೆಗಳು ಸೇರಿದಂತೆ 26 ಜನರನ್ನು ಗುಂಡಿಕ್ಕಿ ಕೊಂದಾಗ ಭಯಾನಕತೆ ಮತ್ತು ಭೀತಿ ಉಂಟಾಯಿತು.

ದಾಳಿಯ ಬಳಿಕ ಸಹೋದರಿಯರು ತಮ್ಮ ಒಂದು ಬಡ ಮಣ್ಣಿನ ಮನೆಯಲ್ಲಿ ಆಶ್ರಯ ನೀಡಿ ಹಲವರ ಪ್ರಾಣ ಉಳಿಯಲು ಕಾರಣರಾದವರು. ಅವರಿಗೆ ರಕ್ಷಣೆ, ನೀರು, ಕ್ಷೇಮವಾಗಿ ಸ್ಥಳದಿಂದ ಪಾರಾಗಲು ಸಹಾಯ ನೀಡಿದರು. ಅವರಿಗೆ ಗಾಯಗಳಾದರೂ ಪ್ರಾಣದ ಹಂಗು ತೊರೆದು ಮತ್ತೆ ಮತ್ತೆ ದಾಳಿಗೊಳಗಾದ ಸ್ಥಳಕ್ಕೆ ಹೋಗಿ ಪ್ರವಾಸಿಗರನ್ನು ಕರೆತಂದು ಆಶ್ರಯ ನೀಡಿದರು. ಅವರ ಬಡ ಮಣ್ಣಿನ ಮನೆ ಮಾನವೀಯತೆಯ ಹೆಗ್ಗುರುತಾಯಿತು.

ಇಂತಹ ಹತ್ತು ಹಲವು ಪ್ರಸಂಗಗಳು ಮಾನವೀಯತೆಯ ಬಗೆಗೆ ನಂಬಿಕೆ ಬೆಳೆಸಲಿ. ನಮ್ಮಲ್ಲಿ ಕಾಶ್ಮೀರಿಗಳ ಬಗ್ಗೆ ಪ್ರೇಮ ಬೆಳೆಸಲಿ ಎಂದು ಈ ಸಹೋದರಿಯರ ಸಹಾಯದಿಂದ ಪಾರಾಗಿ ಬಂದ ಚೈನ್ನೈ ಪ್ರವಾಸಿ ದಂಪತಿ ಹೇಳಿದ್ದಾರೆ.

ಪಾಕ್ ಮಹಿಳೆಯ ವಿವಾಹವಾಗಿ ಮುಚ್ಚಿಟ್ಟಿದ್ದ CRPF ಕಾನ್‌ಸ್ಟೆಬಲ್ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...