Homeಮುಖಪುಟಪಹಲ್ಗಾಮ್ ದಾಳಿ: ಪುಣೆ ಗ್ರಾಮಗಳಿಂದ 'ಸ್ಥಳೀಯರಲ್ಲದ' ಮುಸ್ಲಿಮರಿಗೆ ನಮಾಜ್  ನಿರ್ಬಂಧ

ಪಹಲ್ಗಾಮ್ ದಾಳಿ: ಪುಣೆ ಗ್ರಾಮಗಳಿಂದ ‘ಸ್ಥಳೀಯರಲ್ಲದ’ ಮುಸ್ಲಿಮರಿಗೆ ನಮಾಜ್  ನಿರ್ಬಂಧ

- Advertisement -
- Advertisement -

ಪುಣೆ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನಿಷ್ಠ 26 ಜೀವಗಳನ್ನು ಬಲಿ ತೆಗೆದುಕೊಂಡು ಹಲವಾರು ಮಂದಿ ಗಾಯಗೊಂಡ ಘಟನೆಯ ನಂತರ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಲವಾರು ಗ್ರಾಮ ಪಂಚಾಯತ್‌ಗಳು ‘ಹೊರಗಿನ’ ಮುಸ್ಲಿಮರು ಗ್ರಾಮದ ಮಸೀದಿಗಳಲ್ಲಿ ನಮಾಜ್ ಮಾಡುವುದನ್ನು ನಿರ್ಬಂಧಿಸುವ ನಿರ್ಣಯಗಳನ್ನು ಅಂಗೀಕರಿಸಿವೆ.

ಮುಲ್ಶಿ ತಹಸಿಲ್‌ನ ಘೋಟವಾಡೆ, ಪಿರಂಗುಟ್, ವಾಡ್ಕಿ ಮತ್ತು ಲಾವಾಲೆ ಮುಂತಾದ ಗ್ರಾಮಗಳು ಸಾರ್ವಜನಿಕ ಸೂಚನೆಗಳನ್ನು ನೀಡಿವೆ ಮತ್ತು ಗ್ರಾಮದ ಮಸೀದಿಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳುವ ಬ್ಯಾನರ್‌ಗಳನ್ನು ಹಾಕಿವೆ. ಆಯಾ ಗ್ರಾಮ ಪಂಚಾಯತ್‌ಗಳು ಅಂಗೀಕರಿಸಿದ ನಿರ್ಣಯಗಳು ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಹೆಚ್ಚಿದ ಜನದಟ್ಟಣೆಯಿಂದಾಗಿ “ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿ”ಯನ್ನು ಉಲ್ಲೇಖಿಸುತ್ತವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪಿರಂಗುಟ್‌ನ ಪೊಲೀಸ್ ಅಧಿಕಾರಿ ಪಾಟೀಲ್ ಪ್ರಕಾಶ್ ಪಾವಲೆ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. “ಶುಕ್ರವಾರದಂದು ಹೊರಗಿನವರ ಸಂಖ್ಯೆ ಹೆಚ್ಚಾಗುತ್ತದೆ, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲುಗಳನ್ನು ಒಡ್ಡಬಹುದು. ಆದ್ದರಿಂದ, ಸ್ಥಳೀಯ ಗ್ರಾಮಸ್ಥರಿಗೆ ಮಾತ್ರ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ನೀಡಲಾಗುವುದು” ಎಂಬ ಗ್ರಾಮ ಪಂಚಾಯತ್ ಗಳ ನಿರ್ಣಯಗಳನ್ನು ಅವರು ದೃಢಪಡಿಸಿದರು.

ಇಲ್ಲಿಯವರೆಗೆ ಯಾವುದೇ ಪೊಲೀಸ್ ದೂರುಗಳು ದಾಖಲಾಗಿಲ್ಲವಾದರೂ, ಈ ನಿರ್ಧಾರವು ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರಲ್ಲಿ ದುಃಖವನ್ನುಂಟುಮಾಡಿದೆ.

“ನಾವು ಭಯಭೀತರಾಗಿದ್ದೇವೆ. ಗ್ರಾಮದ ಮಸೀದಿಯು ದೇವಾಲಯದ ಪಕ್ಕದಲ್ಲಿರುವ ಕಾರಣ ನಾವು ಈಗಾಗಲೇ ಅಲ್ಲಿಗೆ ಹೋಗುವುದನ್ನು ನಿಲ್ಲಿಸಿದ್ದೇವೆ. ನಾವು ಗ್ರಾಮದ ಹೊರಗಿನ ಶೆಡ್‌ನಲ್ಲಿ ಪ್ರಾರ್ಥಿಸುತ್ತೇವೆ. ಪಹಲ್ಗಾಮ್ ದಾಳಿಯ ನಂತರ ಭಯ ಹೆಚ್ಚುತ್ತಿದೆ” ಎಂದು ಲಾವಾಲೆ ನಿವಾಸಿ ಶೈಸ್ತಖಾನ್ ಇನಾಮದಾರ್ ಹೇಳಿದರು.

ಪಿರಂಗುಟ್‌ನ ಸುನ್ನಿ ಮಸೀದಿ ಟ್ರಸ್ಟ್‌ನ ಅಧ್ಯಕ್ಷ ನಬಿಲಾಲ್ ಶೇಖ್, ಈ ನಿರ್ಣಯವು ಧಾರ್ಮಿಕ ಜೀವನ ಮತ್ತು ದೀರ್ಘಕಾಲೀನ ಸಾಮಾಜಿಕ ಸಂಬಂಧಗಳನ್ನು ಅಡ್ಡಿಪಡಿಸುತ್ತದೆ ಎಂದು ಹೇಳಿದರು. “ಇದು ತಾಲ್ಲೂಕಿನಲ್ಲಿ ಅತಿದೊಡ್ಡ ಮಸೀದಿ. ಪ್ರದೇಶದಾದ್ಯಂತದ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಗಾಗಿ ಇಲ್ಲಿಗೆ ಬರುತ್ತಾರೆ. ಹೊಸ ನಿರ್ಬಂಧವು ಸಂಬಂಧಿಕರು ಮತ್ತು ಇತರರನ್ನು ಭೇಟಿ ಮಾಡಲು ಕಷ್ಟಕರವಾಗಿಸುತ್ತದೆ” ಎಂದು ಅವರು ಹೇಳಿದರು.

ಅವರು ಪ್ರದೇಶದ ಕೋಮು ಸಾಮರಸ್ಯದ ಇತಿಹಾಸವನ್ನು ಸಹ ತೋರಿಸಿದರು ಮತ್ತು “ನಾವು ಯಾವಾಗಲೂ ಗಣಪತಿ ಮೆರವಣಿಗೆಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ನಮ್ಮ ಹಿಂದೂ ನೆರೆಹೊರೆಯವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಭಾಗವಹಿಸಿದ್ದೇವೆ” ಎಂದು ಅವರು ಹೇಳಿದರು.

ಆದಾಗ್ಯೂ, ಈ ಎಲ್ಲಾ ಬದಲಾವಣೆಯಿಂದ ತಾನು ನಲುಗಿದ್ದೇನೆ ಎಂದು ಶೇಖ್ ಹೇಳಿದರು. “ನನ್ನ 76 ವರ್ಷಗಳಲ್ಲಿ ನಾನು ಇಲ್ಲಿ ಇಂತಹ ಧ್ರುವೀಕರಣವನ್ನು ಎಂದಿಗೂ ನೋಡಿಲ್ಲ. ನಮ್ಮ ಮಸೀದಿ ನನ್ನ ಅಜ್ಜನ ಕಾಲಕ್ಕೂ ಮೊದಲಿನಿಂದಲೂ ಅಸ್ತಿತ್ವದಲ್ಲಿದೆ” ಎಂದಿದ್ದಾರೆ.

ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅನಿಲ್ ವಿಭೂತೆ ಮಾತನಾಡಿ, ಧಾರ್ಮಿಕ ಸಮುದಾಯಗಳಲ್ಲಿ ಒಮ್ಮತದೊಂದಿಗೆ ಗ್ರಾಮ ಪಂಚಾಯತ್ ಗಳು ಈ ನಿರ್ಣಯವನ್ನು ಅಂಗೀಕರಿಸಿವೆ ಎಂದು ಹೇಳಿದರು. “ಇಲ್ಲಿಯವರೆಗೆ ಮುಸ್ಲಿಂ ನಿವಾಸಿಗಳಿಂದ ಯಾವುದೇ ಔಪಚಾರಿಕ ದೂರುಗಳು ಬಂದಿಲ್ಲ ಮತ್ತು ಯಾವುದೇ ಪೊಲೀಸ್ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಅವರು ಹೇಳಿದರು.

ಉತ್ತರ ಪ್ರದೇಶ| ಲೈಂಗಿಕ ದೌರ್ಜನ್ಯ ವಿರೋಧಿಸಿದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅಮಾನುಷ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...