Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

- Advertisement -
- Advertisement -

ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬೈಸರನ್ ಕಣಿವೆಯ ಸುಂದರ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ (ಏ.22) ನಡೆಸಿದ ಗುಂಡಿನ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ಪಹಲ್ಗಾಮ್ ಎಂಬ ರೆಸಾರ್ಟ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್‌ನಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಟ್ಟವಾದ ಪೈನ್ ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ವಿಶಾಲವಾದ ಹುಲ್ಲುಗಾವಲು ಪ್ರದೇಶ ದೇಶ ವಿದೇಶಗಳ ಪ್ರವಾಸಿಗರ ನೆಚ್ಚಿನ ತಾಣವಾಗಿದೆ.

2019ರ ಪುಲ್ವಾಮಾ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಗುಂಪಿನ ಜೊತೆ ನಂಟು ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ವರದಿಗಳು ಹೇಳಿವೆ.

ಇಬ್ಬರು ಕನ್ನಡಿಗರು ಸಾವು

ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮತ್ತು ಬೆಂಗಳೂರಿನಲ್ಲಿ ವಾಸವಿದ್ದ ಹಾವೇರಿ ಮೂಲದ ಭರತ್ ಭೂಷಣ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಂಡ ಕಳುಹಿಸಿದ ಕರ್ನಾಟಕ ಸರ್ಕಾರ

ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ, ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಐಪಿಎಸ್‌ ಅಧಿಕಾರಿ ಚೇತನ್ ಆರ್ ಮತ್ತು ಇತರ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತಲುಪಿದ್ದಾರೆ.

ದಾಳಿಯಲ್ಲಿ ಸಾವಿಗೀಡಾದ ಕರ್ನಾಟಕ ಇಬ್ಬರ ಸೇರಿದಂತೆ 25 ಜನರ ಶವಗಳನ್ನು ಅವರ ಊರುಗಳಿಗೆ ತಲುಪಿಸಲು ವಿಮಾನದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ವ್ಯವಸ್ಥೆಗಳನ್ನು ಮಾಡಿದೆ.

ಸಾವಿಗೀಡಾದವರ ಶವ ಊರಿಗೆ ತಲುಪಿಸಲು ವಿಮಾನದ ವ್ಯವಸ್ಥೆ

ಅಧಿಕಾರಿಗಳ ಸಭೆ ನಡೆಸಿದ ಅಮಿತ್ ಶಾ

ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಮಂಗಳವಾರ ಸಂಜೆ ದೆಹಲಿಯಿಂದ ಕಾಶ್ಮೀರಕ್ಕೆ ತೆರಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶ್ರೀನಗರದ ರಾಜಭವನದಲ್ಲಿ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಅಧಿಕಾರಿಗಳ ಸಭೆ ನಡೆಸಿದ ಅಮಿತ್ ಶಾ

ಸೌದಿಯಿಂದ ಹಿಂದಿರುಗಿದ ಪ್ರಧಾನಿ ಮೋದಿ

ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ್ದಾರೆ. ಎರಡು ದಿನಗಳ ಭೇಟಿಗೆ ಮಂಗಳವಾರ ಸೌದಿ ತಲುಪಿದ ಅವರು, ಇಂದು ಮುಂಜಾನೆ ತುರ್ತಾಗಿ ದೇಶಕ್ಕೆ ಮರಳಿದ್ದಾರೆ. ಅಧಿಕಾರಿಗಳ ಜೊತೆ ಇಂದು ಪ್ರಧಾನಿ ಸಭೆ ನಡೆಸುವ ಸಾಧ್ಯತೆ ಇದೆ.

ಅಮಿತ್ ಶಾ ಜೊತೆ ರಾಹುಲ್ ಗಾಂಧಿ ಚರ್ಚೆ

ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಕಾಶ್ಮೀರ ಪಿಸಿಸಿ ಅಧ್ಯಕ್ಷ ತಾರಿಕ್ ಕರ್ರಾ ಅವರೊಂದಿಗೆ ಮಾತನಾಡಿದೆ. ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದೆ. ಬಲಿಪಶುಗಳ ಕುಟುಂಬಗಳಿಗೆ ನ್ಯಾಯ ಮತ್ತು ನಮ್ಮ ಸಂಪೂರ್ಣ ಬೆಂಬಲ ಬೇಕು ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಸಹಾಯವಾಣಿ ತೆರೆದ ಪೊಲೀಸರು

ಅಗತ್ಯವಿರುವ ಪ್ರವಾಸಿಗರಿಗೆ ತಕ್ಷಣದ ಬೆಂಬಲ ಮತ್ತು ಮಾಹಿತಿಯನ್ನು ಒದಗಿಸಲು ಅನಂತನಾಗ್ ಪೊಲೀಸರು ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ 24/7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿಗಳು ಅಥವಾ ಪ್ರಶ್ನೆಗಳಿಗೆ ಪ್ರವಾಸಿಗರಿಗೆ ಸಹಾಯ ಮಾಡಲು ಮೀಸಲಾಗಿರುವ ಅನಂತ್‌ನಾಗ್ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಈಗ ದಿನದ 24 ಗಂಟೆಯೂ ವಿಶೇಷ ಸಹಾಯ ಕೇಂದ್ರ ಕಾರ್ಯನಿರ್ವಹಿಸುತ್ತಿದೆ.

ಸಹಾಯವಾಣಿಯ ಸಂಪರ್ಕ ಸಂಖ್ಯೆಗಳು ಕೆಳಗಿವೆ

9596777669
01932225870
ವಾಟ್ಸಾಪ್ : 9419051940

ತಮಿಳುನಾಡು ರಾಜ್ಯಪಾಲರ ವಿರುದ್ಧದ ಸುಪ್ರೀಂಕೋರ್ಟ್‌ನ ತೀರ್ಪು ಕೇರಳಕ್ಕೆ ಅನ್ವಯಿಸುವುದಿಲ್ಲ: ಕೇಂದ್ರ ಸರ್ಕಾರ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...