Homeಅಂತರಾಷ್ಟ್ರೀಯಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

- Advertisement -
- Advertisement -

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದಿರುವುದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಏ.23) ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ಎರಡೂವರೆ ಗಂಟೆಗಳ ಸಭೆಯ ನಂತರ, ಪಾಕಿಸ್ತಾನದೊಂದಿಗಿನ ಸಂಬಂಧ ಕಡಿತಗೊಳಿಸುವ ನಿರ್ಧಾರ ಹೊರಬಿದ್ದಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸಿಸಿಎಸ್ ಸಭೆಯ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ 1960ರಲ್ಲಿ ಭಾರತ-ಪಾಕಿಸ್ತಾನ ಸಹಿ ಹಾಕಿರುವ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಭಾರತ-ಪಾಕಿಸ್ತಾನ ನಡುವಿನ ಅಟ್ಟಾರಿ ಗಡಿಯನ್ನು ಬಂದ್ ಮಾಡಲಾಗುವುದು. ಪಾಕಿಸ್ತಾನದ ಪ್ರಜೆಗಳಿಗೆ ನೀಡಲಾಗುವ ಸಾರ್ಕ್‌ ವೀಸಾ ಸೌಲಭ್ಯ ರದ್ದುಗೊಳಿಸಲಾಗಿದೆ. ಪಾಕಿಸ್ತಾನದ ಭಾರತೀಯ ರಾಯಭಾರ ಕಚೇರಿಯಿಂದ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುವುದು. ಪಾಕಿಸ್ತಾನದ ಮಿಲಿಟರಿ ರಾಜತಾಂತ್ರಿಕರಿಗೆ ಭಾರತದಿಂದ ಹೊರ ನಡೆಯಲು ಸೂಚನೆ ನೀಡಲಾಗುವುದು. ಸಾರ್ಕ್ ವೀಸಾ ವಿನಾಯಿತಿ ಸೌಲಭ್ಯದ ಮೇಲೆ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು ನೀಡಲಾಗಿದೆ” ಎಂದು ವಿಕ್ರಮ್ ಮಿಸ್ರಿ ವಿವರಿಸಿದ್ದಾರೆ.

ಸಿಂಧೂ ಜಲ ಒಪ್ಪಂದ ರದ್ದು

1960ರ ಸೆಪ್ಟೆಂಬರ್ 19ರಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಫೀಲ್ಡ್ ಮಾರ್ಷಲ್ ಅಯೂಬ್ ಖಾನ್ ನಡುವೆ ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದವು, ಪಶ್ಚಿಮದ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್‌ಗಳನ್ನು ಪಾಕಿಸ್ತಾನಕ್ಕೆ ಮತ್ತು ಪೂರ್ವದ ನದಿಗಳಾದ ರಾವಿ, ಬಿಯಾಸ್ ಮತ್ತು ಸಟ್ಲೆಜ್‌ಗಳನ್ನು ಭಾರತಕ್ಕೆ ಹಂಚಿಕೆ ಮಾಡಿತ್ತು. ಈ ಒಪ್ಪಂದವನ್ನು ರದ್ದುಗೊಳಿಸಲು ಭಾರತ ತೀರ್ಮಾನಿಸಿದೆ.

ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯಲು ಗಡುವು

ರಾಜತಾಂತ್ರಿಕ ಮತ್ತು ಭದ್ರತಾ ಕ್ರಮಗಳ ಭಾಗವಾಗಿ, ಭಾರತವು ಪಾಕಿಸ್ತಾನಿ ರಾಜತಾಂತ್ರಿಕರು ದೇಶ ತೊರೆಯಲು ಆದೇಶಿಸಿದೆ. ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಲಾಗಿದೆ. ಅವರು ಭಾರತ ತೊರೆಯಲು ಒಂದು ವಾರದ ಕಾಲವಕಾಶವಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ.

ಭಾರತವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ತನ್ನ ಮಿಲಿಟರಿ ಸಲಹೆಗಾರರನ್ನು ವಾಪಸ್ ಕರೆಸಿಕೊಳ್ಳಲಿದೆ. ಸಾರ್ಕ್ ವೀಸಾ ಹೊಂದಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳ ಭಾರತ ತೊರೆಯಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಇನ್ನು ಮುಂದೆ ಅವಕಾಶವಿರುವುದಿಲ್ಲ. ಈಗಾಗಲೇ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ SVES ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಮಿಸ್ರಿ ಘೋಷಿಸಿದ್ದಾರೆ.

ಏಕೈಕ ಭೂ ಮಾರ್ಗ ಬಂದ್

ಭಾರತ ಮತ್ತು ಪಾಕಿಸ್ತಾನ ನಡುವಿನ ಏಕೈಕ ಭೂ ಮಾರ್ಗ ವಾಘಾ-ಅಟ್ಟಾರಿ ಗಡಿಯನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. “ಅಟ್ಟಾರಿ ಸಮಗ್ರ ಚೆಕ್‌ಪೋಸ್ಟ್’ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವುದು. ಅನುಮತಿ ಪಡೆದು ಗಡಿ ದಾಟಿದವರು ಮೇ 1, 2025ರ ಮೊದಲು ವಾಘಾ-ಅಟ್ಟಾರಿ ಮಾರ್ಗದ ಮೂಲಕ ಹಿಂತಿರುಗಬಹುದು ಎಂದು ಮಿಸ್ರಿ ತಿಳಿಸಿದ್ದಾರೆ.

ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣದ ಬಳಿಯ ಪ್ರವಾಸಿತಾಣ ಬೈಸರನ್‌ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ.

2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (LeT) ಜೊತೆ ನಂಟು ಹೊಂದಿರುವ ರೆಸಿಸ್ಟೆನ್ಸ್ ಫ್ರಂಟ್ (TRF)ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...