Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದೇನು?

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದೇನು?

- Advertisement -
- Advertisement -

ಮಂಗಳವಾರ (ಏ.22) ಕಾಶ್ಮೀರದ ಪಹಲ್ಗಾಮ್ ಬಳಿ ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಯ ಪ್ರಾಥಮಿಕ ತನಿಖೆಯಲ್ಲಿ, ಕನಿಷ್ಠ ನಾಲ್ವರು ಭಯೋತ್ಪಾದಕರು ಮಾರುವೇಷದಲ್ಲಿ ಬೈಸರನ್ ಹುಲ್ಲುಗಾವಲಿಗೆ ಬಂದು ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ಗಳು ಮತ್ತು ಎಕೆ-47ಗಳಿಂದ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿರುವುದಾಗಿ indianexpress.com ವರದಿ ಮಾಡಿದೆ.

ಮಂಗಳವಾರ ಸಂಜೆಯವರೆಗೆ ಘಟನಾ ಸ್ಥಳದಿಂದ ಸುಮಾರು 50-70 ಬಳಸಿದ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾದೆ ಎಂದು ವರದಿ ತಿಳಿಸಿದೆ.

ಕೇಂದ್ರ ಸರ್ಕಾರದ ಘಟನೆಯ ತನಿಖೆಯನ್ನು ಜಮ್ಮು ಕಾಶ್ಮೀರ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಲು ಯೋಜಿಸಿದೆ ಎಂದಿದೆ.

“ದಾಳಿಯ ಬಲಿಪಶುಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ನಾಲ್ವರು ಭಯೋತ್ಪಾದಕರು ಮಾರುವೇಷದಲ್ಲಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಇಬ್ಬರು ವಿದೇಶಿ ಪ್ರಜೆಗಳಿದ್ದ ಶಂಕೆಯಿದೆ.”

“ಹುಲ್ಲುಗಾವಲು ತಲುಪಿದ ಬಳಿಕ, ಭಯೋತ್ಪಾದಕರು ಮೊದಲು ಪ್ರವಾಸಿಗರನ್ನು ಬಂದೂಕು ತೋರಿಸಿ ಒತ್ತೆಯಾಳಾಗಿ ಇಟ್ಟುಕೊಂಡರು. ನಂತರ ಎಲ್ಲಾ ಮಹಿಳೆಯರು ಮತ್ತು ಮಕ್ಕಳನ್ನು ದೂರವಿರಲು ಕೇಳಿಕೊಂಡರು. ನಂತರ ಪುರುಷರ ಗುರುತು ವಿಚಾರಿಸಿದ ಅವರಿಗೆ ಹತ್ತಿರದಿಂದ ಗುಂಡಿಕ್ಕಿದರು. ನಂತರ ಅವರು ಮನಸ್ಸೋ ಇಚ್ಚೆ ಗುಂಡು ಹಾರಿಸಿದರು” ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ತಿಳಿಸಿದೆ.

“ಕೆಲ ಪ್ರವಾಸಿಗರನ್ನು ಕೊಲ್ಲುವ ಮೊದಲು ಅವರಿಗೆ ವಸ್ತ್ರ ಕಳಚುವಂತೆ ಹೇಳಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಪೊಲೀಸರು ಈ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿ ಸುಮಾರು 20-25 ನಿಮಿಷಗಳ ಕಾಲ ನಡೆದಿದೆ” ಎಂದಿದೆ.

“ಇಬ್ಬರು ಭಯೋತ್ಪಾದಕರು ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ಗಳನ್ನು ಹೊಂದಿದ್ದರೆ, ಇನ್ನಿಬ್ಬರು ಎಕೆ-47 ಗಳನ್ನು ಹೊಂದಿದ್ದರು. ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳೀಯ ನಿವಾಸಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ನಡೆಸಲು ಸಹಕರಿಸಿದವರು ಯಾರಾದರು ಇದ್ದಾರಾ? ಎಂದು ಕಂಡುಹಿಡಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ದಾಳಿಯ ನಂತರ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ” ಎಂದು ವರದಿ ಹೇಳಿದೆ.

“ಪ್ರಾಥಮಿಕವಾಗಿ ನೋಡಿದರೆ, ಭಯೋತ್ಪಾದಕರು ಕಿಶ್ತ್ವಾರ್‌ ದಾಟಿ ಕೊಕರ್ನಾಗ್ ಮೂಲಕ ಬೈಸರನ್ ತಲುಪಿದ್ದು ಸ್ಥಳೀಯರ ಸಹಾಯದಿಂದ ಎಂದು ತೋರುತ್ತದೆ. ಕೆಲವು ದಿನಗಳ ಹಿಂದೆ ಗುಪ್ತಚರ ಸಂಸ್ಥೆಗಳು ಭಯೋತ್ಪಾದಕ ಗುಂಪು ‘ಸ್ಥಳೀಯರಲ್ಲದವರ’ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಮತ್ತು ಐಇಡಿ ದಾಳಿಯ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿತ್ತು. ಆದರೆ, ವಿವರಗಳು ಸ್ಪಷ್ಟವಾಗಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ತಿಳಿಸಿದೆ.

ಪಹಲ್ಗಾಮ್ ದಾಳಿಗೆ ಗುಪ್ತಚರ ವೈಫಲ್ಯ ಕಾರಣ: ಘಟನೆ ಖಂಡಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...