Homeಮುಖಪುಟಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಸ್ಥಳೀಯ ನಿವಾಸಿ, ಕುದುರೆ ಸವಾರ ಸೈಯದ್ ಆದಿಲ್ ಹುಸೇನ್ ಶಾ ಅವರು ದಾಳಿಕೋರನಿಂದ ರೈಫಲ್ ಕಸಿದುಕೊಳ್ಳಲು ಪ್ರಯತ್ನಿಸಿ, ಭಯೋತ್ಪಾದನ ವಿರುದ್ಧ ಹೋರಾಡಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪಹಲ್ಗಾಮ್

ಭಯೋತ್ಪಾದಕರು ಹಾರಿಸಿದ ಗುಂಡುಗಳಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಪರದಾಡುತ್ತಿದ್ದಾಗ, ಆದಿಲ್ ಅವರು ಭಯೋತ್ಪಾದಕನಿಂದ ರೈಫಲ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಾ, ಅವರ ವಿರುದ್ಧ ಹೋರಾಟ ಮಾಡುವ ಅಸಾಧಾರಣ ಧೈರ್ಯವನ್ನು ಪ್ರದರ್ಶಿಸಿದರು ಎಂದು ವರದಿ ಉಲ್ಲೇಖಿಸಿದೆ.

ಆದಿಲ್ ಅವರು ಪ್ರವಾಸಿಗರನ್ನು ಕಾರು ಪಾರ್ಕಿಂಗ್ ಸ್ಥಳದಿಂದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿಗೆ ಕಾಲ್ನಡಿಗೆಯಲ್ಲಿ ಮಾತ್ರ ತೆರಳಬಹುದಾದ ಸ್ಥಳಕ್ಕೆ ತನ್ನ ಕುದುರೆಯ ಮೇಲೆ ಕರೆದೊಯ್ಯುವ ಕೆಲಸ ಮಾಡುವವರಾಗಿದ್ದಾರೆ. ಅವರು ಭಯೋತ್ಪಾದಕರಲ್ಲಿ ಒಬ್ಬನ ವಿರುದ್ಧ ಹೋರಾಡಲು ಪ್ರಯತ್ನಿಸುತ್ತಿದ್ದಾಗ ಗುಂಡು ಹಾರಿಸಿ ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅವರು ಸ್ಥಳಕ್ಕೆ ಕರೆತಂದಿದ್ದ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸಿದ್ದರು.

ಭಯೋತ್ಪಾದಕರು 28 ಜನರನ್ನು ಹತ್ಯೆ ಮಾಡಿದ್ದು, ದಾಳಿಯಲ್ಲಿ ಕೊಲ್ಲಲ್ಪಟ್ಟ ಏಕೈಕ ಸ್ಥಳೀಯ ವ್ಯಕ್ತಿ ಆದಿಲ್ ಆಗಿದ್ದಾರೆ. ಮೃತ ಆದಿಲ್ ಅವರು ತನ್ನ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಒಳಗೊಂಡ ಕುಟುಂಬದ ಏಕೈಕ ಜೀವನಾಧಾರವಾಗಿದ್ದಾರೆ. ತನ್ನ ಮಗನನ್ನು ಕಳೆದುಕೊಂಡು ದುಃಖಿತರಾದ ಅವರ ತಾಯಿ ಕಣ್ಣೀರಿಡುತ್ತಾ, ಕುಟುಂಬದ ಭವಿಷ್ಯದ ಬಗ್ಗೆಯೂ ಚಿಂತಿತರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಮನವಿ ಮಾಡಿದೆ.

“ನನ್ನ ಮಗ ನಿನ್ನೆ ಕೆಲಸಕ್ಕೆಂದು ಪಹಲ್ಗಾಮ್‌ಗೆ ಹೋಗಿದ್ದ. ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿಯ ಬಗ್ಗೆ ನಮಗೆ ತಿಳಿಯಿತು. ನಾವು ಅವನಿಗೆ ಕರೆ ಮಾಡಿದೆವು, ಆದರೆ ಅವನ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ, ಸಂಜೆ 4.40 ಕ್ಕೆ, ಅವನ ಫೋನ್ ಆನ್ ಆಯಿತು, ಆದರೆ ಯಾರೂ ಉತ್ತರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಂತರ ನಾವು ಪೊಲೀಸ್ ಠಾಣೆಗೆ ಧಾವಿಸಿದೆವು. ದಾಳಿಯಲ್ಲಿ ಅವನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಆಗ ನಮಗೆ ತಿಳಿದುಬಂತು. ಇದಕ್ಕೆ ಕಾರಣಕರ್ತರು ಯಾರೇ ಆಗಿರಲಿ ಅದರ ಪರಿಣಾಮಗಳನ್ನು ಎದುರಿಸಲೇಬೇಕು” ಎಂದು ಅವರ ತಂದೆ ಸೈಯದ್ ಹೈದರ್ ಶಾ ಹೇಳಿದ್ದಾರೆ.

ಈ ನಡುವೆ, ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗಿದೆ. ರಾಜ್ಯ ರಾಜಧಾನಿ ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ಇಂಧನ ಕೇಂದ್ರಗಳು ಮುಚ್ಚಲ್ಪಟ್ಟವು. ರಸ್ತೆಗಳಲ್ಲಿ ಖಾಸಗಿ ವಾಹನಗಳು ಕಂಡುಬಂದರೂ ಸಾರ್ವಜನಿಕ ಸಾರಿಗೆ ವಿರಳವಾಗಿತ್ತು. ಖಾಸಗಿ ಶಾಲೆಗಳು ಮುಚ್ಚಲ್ಪಟ್ಟಿದ್ದರೂ, ಸರ್ಕಾರಿ ಶಾಲೆಗಳು ತೆರೆದಿದ್ದವು.

ಕಾಶ್ಮೀರ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಕೆಸಿಸಿಐ), ಕಾಶ್ಮೀರ ವ್ಯಾಪಾರಿಗಳು ಮತ್ತು ತಯಾರಕರ ಒಕ್ಕೂಟ (ಕೆಟಿಎಂಎಫ್), ಮುಸ್ಲಿಂ ಧಾರ್ಮಿಕ ಗುಂಪು ಮುತ್ತಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮತ್ತು ಜಮ್ಮು ಕಾಶ್ಮೀರದ ಗ್ರ್ಯಾಂಡ್ ಮುಫ್ತಿ ನಾಸಿರ್-ಉಲ್-ಇಸ್ಲಾಂ ಸೇರಿದಂತೆ ಹಲವಾರು ಗುಂಪುಗಳು ಜಂಟಿಯಾಗಿ ಈ ಬಂದ್‌ಗೆ ಕರೆ ನೀಡಿವೆ.

“ಇಂತಹ ಭಯೋತ್ಪಾದಕ ಮತ್ತು ಹಿಂಸಾಚಾರದ ಕೃತ್ಯಗಳು ಸ್ವೀಕಾರಾರ್ಹವಲ್ಲ. ಇದಕ್ಕೆ ನಮ್ಮ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಭಯೋತ್ಪಾದನೆಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ನಿಂತು ಶಾಂತಿಯುತ ಮತ್ತು ಸಾಮರಸ್ಯದ ಸಮುದಾಯವನ್ನು ಸೃಷ್ಟಿಸಲು ಶ್ರಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಕಾಶ್ಮೀರದ ಗ್ರಾಂಡ್ ಮುಫ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಮ್ಮುವಿನಲ್ಲಿಯೂ ಸಹ, ಬಂದ್‌ಗೆ ಬಲವಾದ ಬೆಂಬಲ ದೊರೆಯಿತು. ಜಮ್ಮು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಅರುಣ್ ಗುಪ್ತಾ, ಜಮ್ಮು ಬಾರ್ ಅಸೋಸಿಯೇಷನ್ ​​ಜೊತೆಗೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ. ಬಂದ್‌ನಲ್ಲಿ ಜಮ್ಮು ನಗರ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದವು.

ಹಲವಾರು ರಾಜಕೀಯ ನಾಯಕರು ಮತ್ತು ಪಕ್ಷಗಳು ಸಹ ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ. ಅವರಲ್ಲಿ ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಅಧ್ಯಕ್ಷ ಮತ್ತು ಶಾಸಕ ಹಂದ್ವಾರ, ಸಜಾದ್ ಗನಿ ಲೋನ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಸೇರಿದ್ದಾರೆ. ಅವರು ಸಂತ್ರಸ್ತರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಈ ಘೋರ ಕೃತ್ಯವನ್ನು ಖಂಡಿಸಿದ್ದಾರೆ.

ಕಣಿವೆಯಾದ್ಯಂತ, ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣಗಳ ಸುತ್ತಲೂ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆದಿಡಲು ಅನುಮತಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅದಾಗ್ಯೂ, ಬಂದ್‌ನ ಪರಿಣಾಮ ಕಣಿವೆಯ ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಾಗಿದೆ.

ಜನರು, ರಾಜಕೀಯ ಪಕ್ಷಗಳು, ಧಾರ್ಮಿಕ ಸಂಸ್ಥೆಗಳು ಮತ್ತು ನಾಗರಿಕ ಸಮಾಜ ಗುಂಪುಗಳ ಸಾಮೂಹಿಕ ಧ್ವನಿಯು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ರವಾನಿಸಿದೆ ಎಂದು ವರದಿಗಳು ಉಲ್ಲೇಖಿಸಿವೆ. ಪಹಲ್ಗಾಮ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....