Homeಮುಖಪುಟಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಸ್ಥಳೀಯ ನಿವಾಸಿ, ಕುದುರೆ ಸವಾರ ಸೈಯದ್ ಆದಿಲ್ ಹುಸೇನ್ ಶಾ ಅವರು ದಾಳಿಕೋರನಿಂದ ರೈಫಲ್ ಕಸಿದುಕೊಳ್ಳಲು ಪ್ರಯತ್ನಿಸಿ, ಭಯೋತ್ಪಾದನ ವಿರುದ್ಧ ಹೋರಾಡಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪಹಲ್ಗಾಮ್

ಭಯೋತ್ಪಾದಕರು ಹಾರಿಸಿದ ಗುಂಡುಗಳಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಪರದಾಡುತ್ತಿದ್ದಾಗ, ಆದಿಲ್ ಅವರು ಭಯೋತ್ಪಾದಕನಿಂದ ರೈಫಲ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಾ, ಅವರ ವಿರುದ್ಧ ಹೋರಾಟ ಮಾಡುವ ಅಸಾಧಾರಣ ಧೈರ್ಯವನ್ನು ಪ್ರದರ್ಶಿಸಿದರು ಎಂದು ವರದಿ ಉಲ್ಲೇಖಿಸಿದೆ.

ಆದಿಲ್ ಅವರು ಪ್ರವಾಸಿಗರನ್ನು ಕಾರು ಪಾರ್ಕಿಂಗ್ ಸ್ಥಳದಿಂದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿಗೆ ಕಾಲ್ನಡಿಗೆಯಲ್ಲಿ ಮಾತ್ರ ತೆರಳಬಹುದಾದ ಸ್ಥಳಕ್ಕೆ ತನ್ನ ಕುದುರೆಯ ಮೇಲೆ ಕರೆದೊಯ್ಯುವ ಕೆಲಸ ಮಾಡುವವರಾಗಿದ್ದಾರೆ. ಅವರು ಭಯೋತ್ಪಾದಕರಲ್ಲಿ ಒಬ್ಬನ ವಿರುದ್ಧ ಹೋರಾಡಲು ಪ್ರಯತ್ನಿಸುತ್ತಿದ್ದಾಗ ಗುಂಡು ಹಾರಿಸಿ ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅವರು ಸ್ಥಳಕ್ಕೆ ಕರೆತಂದಿದ್ದ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸಿದ್ದರು.

ಭಯೋತ್ಪಾದಕರು 28 ಜನರನ್ನು ಹತ್ಯೆ ಮಾಡಿದ್ದು, ದಾಳಿಯಲ್ಲಿ ಕೊಲ್ಲಲ್ಪಟ್ಟ ಏಕೈಕ ಸ್ಥಳೀಯ ವ್ಯಕ್ತಿ ಆದಿಲ್ ಆಗಿದ್ದಾರೆ. ಮೃತ ಆದಿಲ್ ಅವರು ತನ್ನ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಒಳಗೊಂಡ ಕುಟುಂಬದ ಏಕೈಕ ಜೀವನಾಧಾರವಾಗಿದ್ದಾರೆ. ತನ್ನ ಮಗನನ್ನು ಕಳೆದುಕೊಂಡು ದುಃಖಿತರಾದ ಅವರ ತಾಯಿ ಕಣ್ಣೀರಿಡುತ್ತಾ, ಕುಟುಂಬದ ಭವಿಷ್ಯದ ಬಗ್ಗೆಯೂ ಚಿಂತಿತರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಮನವಿ ಮಾಡಿದೆ.

“ನನ್ನ ಮಗ ನಿನ್ನೆ ಕೆಲಸಕ್ಕೆಂದು ಪಹಲ್ಗಾಮ್‌ಗೆ ಹೋಗಿದ್ದ. ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿಯ ಬಗ್ಗೆ ನಮಗೆ ತಿಳಿಯಿತು. ನಾವು ಅವನಿಗೆ ಕರೆ ಮಾಡಿದೆವು, ಆದರೆ ಅವನ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ, ಸಂಜೆ 4.40 ಕ್ಕೆ, ಅವನ ಫೋನ್ ಆನ್ ಆಯಿತು, ಆದರೆ ಯಾರೂ ಉತ್ತರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಂತರ ನಾವು ಪೊಲೀಸ್ ಠಾಣೆಗೆ ಧಾವಿಸಿದೆವು. ದಾಳಿಯಲ್ಲಿ ಅವನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಆಗ ನಮಗೆ ತಿಳಿದುಬಂತು. ಇದಕ್ಕೆ ಕಾರಣಕರ್ತರು ಯಾರೇ ಆಗಿರಲಿ ಅದರ ಪರಿಣಾಮಗಳನ್ನು ಎದುರಿಸಲೇಬೇಕು” ಎಂದು ಅವರ ತಂದೆ ಸೈಯದ್ ಹೈದರ್ ಶಾ ಹೇಳಿದ್ದಾರೆ.

ಈ ನಡುವೆ, ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗಿದೆ. ರಾಜ್ಯ ರಾಜಧಾನಿ ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ಇಂಧನ ಕೇಂದ್ರಗಳು ಮುಚ್ಚಲ್ಪಟ್ಟವು. ರಸ್ತೆಗಳಲ್ಲಿ ಖಾಸಗಿ ವಾಹನಗಳು ಕಂಡುಬಂದರೂ ಸಾರ್ವಜನಿಕ ಸಾರಿಗೆ ವಿರಳವಾಗಿತ್ತು. ಖಾಸಗಿ ಶಾಲೆಗಳು ಮುಚ್ಚಲ್ಪಟ್ಟಿದ್ದರೂ, ಸರ್ಕಾರಿ ಶಾಲೆಗಳು ತೆರೆದಿದ್ದವು.

ಕಾಶ್ಮೀರ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಕೆಸಿಸಿಐ), ಕಾಶ್ಮೀರ ವ್ಯಾಪಾರಿಗಳು ಮತ್ತು ತಯಾರಕರ ಒಕ್ಕೂಟ (ಕೆಟಿಎಂಎಫ್), ಮುಸ್ಲಿಂ ಧಾರ್ಮಿಕ ಗುಂಪು ಮುತ್ತಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮತ್ತು ಜಮ್ಮು ಕಾಶ್ಮೀರದ ಗ್ರ್ಯಾಂಡ್ ಮುಫ್ತಿ ನಾಸಿರ್-ಉಲ್-ಇಸ್ಲಾಂ ಸೇರಿದಂತೆ ಹಲವಾರು ಗುಂಪುಗಳು ಜಂಟಿಯಾಗಿ ಈ ಬಂದ್‌ಗೆ ಕರೆ ನೀಡಿವೆ.

“ಇಂತಹ ಭಯೋತ್ಪಾದಕ ಮತ್ತು ಹಿಂಸಾಚಾರದ ಕೃತ್ಯಗಳು ಸ್ವೀಕಾರಾರ್ಹವಲ್ಲ. ಇದಕ್ಕೆ ನಮ್ಮ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಭಯೋತ್ಪಾದನೆಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ನಿಂತು ಶಾಂತಿಯುತ ಮತ್ತು ಸಾಮರಸ್ಯದ ಸಮುದಾಯವನ್ನು ಸೃಷ್ಟಿಸಲು ಶ್ರಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಕಾಶ್ಮೀರದ ಗ್ರಾಂಡ್ ಮುಫ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಮ್ಮುವಿನಲ್ಲಿಯೂ ಸಹ, ಬಂದ್‌ಗೆ ಬಲವಾದ ಬೆಂಬಲ ದೊರೆಯಿತು. ಜಮ್ಮು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಅರುಣ್ ಗುಪ್ತಾ, ಜಮ್ಮು ಬಾರ್ ಅಸೋಸಿಯೇಷನ್ ​​ಜೊತೆಗೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ. ಬಂದ್‌ನಲ್ಲಿ ಜಮ್ಮು ನಗರ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದವು.

ಹಲವಾರು ರಾಜಕೀಯ ನಾಯಕರು ಮತ್ತು ಪಕ್ಷಗಳು ಸಹ ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ. ಅವರಲ್ಲಿ ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಅಧ್ಯಕ್ಷ ಮತ್ತು ಶಾಸಕ ಹಂದ್ವಾರ, ಸಜಾದ್ ಗನಿ ಲೋನ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಸೇರಿದ್ದಾರೆ. ಅವರು ಸಂತ್ರಸ್ತರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಈ ಘೋರ ಕೃತ್ಯವನ್ನು ಖಂಡಿಸಿದ್ದಾರೆ.

ಕಣಿವೆಯಾದ್ಯಂತ, ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣಗಳ ಸುತ್ತಲೂ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆದಿಡಲು ಅನುಮತಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅದಾಗ್ಯೂ, ಬಂದ್‌ನ ಪರಿಣಾಮ ಕಣಿವೆಯ ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಾಗಿದೆ.

ಜನರು, ರಾಜಕೀಯ ಪಕ್ಷಗಳು, ಧಾರ್ಮಿಕ ಸಂಸ್ಥೆಗಳು ಮತ್ತು ನಾಗರಿಕ ಸಮಾಜ ಗುಂಪುಗಳ ಸಾಮೂಹಿಕ ಧ್ವನಿಯು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ರವಾನಿಸಿದೆ ಎಂದು ವರದಿಗಳು ಉಲ್ಲೇಖಿಸಿವೆ. ಪಹಲ್ಗಾಮ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...