Homeಮುಖಪುಟಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಸ್ಥಳೀಯ ನಿವಾಸಿ, ಕುದುರೆ ಸವಾರ ಸೈಯದ್ ಆದಿಲ್ ಹುಸೇನ್ ಶಾ ಅವರು ದಾಳಿಕೋರನಿಂದ ರೈಫಲ್ ಕಸಿದುಕೊಳ್ಳಲು ಪ್ರಯತ್ನಿಸಿ, ಭಯೋತ್ಪಾದನ ವಿರುದ್ಧ ಹೋರಾಡಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪಹಲ್ಗಾಮ್

ಭಯೋತ್ಪಾದಕರು ಹಾರಿಸಿದ ಗುಂಡುಗಳಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಪರದಾಡುತ್ತಿದ್ದಾಗ, ಆದಿಲ್ ಅವರು ಭಯೋತ್ಪಾದಕನಿಂದ ರೈಫಲ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಾ, ಅವರ ವಿರುದ್ಧ ಹೋರಾಟ ಮಾಡುವ ಅಸಾಧಾರಣ ಧೈರ್ಯವನ್ನು ಪ್ರದರ್ಶಿಸಿದರು ಎಂದು ವರದಿ ಉಲ್ಲೇಖಿಸಿದೆ.

ಆದಿಲ್ ಅವರು ಪ್ರವಾಸಿಗರನ್ನು ಕಾರು ಪಾರ್ಕಿಂಗ್ ಸ್ಥಳದಿಂದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿಗೆ ಕಾಲ್ನಡಿಗೆಯಲ್ಲಿ ಮಾತ್ರ ತೆರಳಬಹುದಾದ ಸ್ಥಳಕ್ಕೆ ತನ್ನ ಕುದುರೆಯ ಮೇಲೆ ಕರೆದೊಯ್ಯುವ ಕೆಲಸ ಮಾಡುವವರಾಗಿದ್ದಾರೆ. ಅವರು ಭಯೋತ್ಪಾದಕರಲ್ಲಿ ಒಬ್ಬನ ವಿರುದ್ಧ ಹೋರಾಡಲು ಪ್ರಯತ್ನಿಸುತ್ತಿದ್ದಾಗ ಗುಂಡು ಹಾರಿಸಿ ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅವರು ಸ್ಥಳಕ್ಕೆ ಕರೆತಂದಿದ್ದ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸಿದ್ದರು.

ಭಯೋತ್ಪಾದಕರು 28 ಜನರನ್ನು ಹತ್ಯೆ ಮಾಡಿದ್ದು, ದಾಳಿಯಲ್ಲಿ ಕೊಲ್ಲಲ್ಪಟ್ಟ ಏಕೈಕ ಸ್ಥಳೀಯ ವ್ಯಕ್ತಿ ಆದಿಲ್ ಆಗಿದ್ದಾರೆ. ಮೃತ ಆದಿಲ್ ಅವರು ತನ್ನ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಒಳಗೊಂಡ ಕುಟುಂಬದ ಏಕೈಕ ಜೀವನಾಧಾರವಾಗಿದ್ದಾರೆ. ತನ್ನ ಮಗನನ್ನು ಕಳೆದುಕೊಂಡು ದುಃಖಿತರಾದ ಅವರ ತಾಯಿ ಕಣ್ಣೀರಿಡುತ್ತಾ, ಕುಟುಂಬದ ಭವಿಷ್ಯದ ಬಗ್ಗೆಯೂ ಚಿಂತಿತರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಮನವಿ ಮಾಡಿದೆ.

“ನನ್ನ ಮಗ ನಿನ್ನೆ ಕೆಲಸಕ್ಕೆಂದು ಪಹಲ್ಗಾಮ್‌ಗೆ ಹೋಗಿದ್ದ. ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿಯ ಬಗ್ಗೆ ನಮಗೆ ತಿಳಿಯಿತು. ನಾವು ಅವನಿಗೆ ಕರೆ ಮಾಡಿದೆವು, ಆದರೆ ಅವನ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ, ಸಂಜೆ 4.40 ಕ್ಕೆ, ಅವನ ಫೋನ್ ಆನ್ ಆಯಿತು, ಆದರೆ ಯಾರೂ ಉತ್ತರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಂತರ ನಾವು ಪೊಲೀಸ್ ಠಾಣೆಗೆ ಧಾವಿಸಿದೆವು. ದಾಳಿಯಲ್ಲಿ ಅವನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಆಗ ನಮಗೆ ತಿಳಿದುಬಂತು. ಇದಕ್ಕೆ ಕಾರಣಕರ್ತರು ಯಾರೇ ಆಗಿರಲಿ ಅದರ ಪರಿಣಾಮಗಳನ್ನು ಎದುರಿಸಲೇಬೇಕು” ಎಂದು ಅವರ ತಂದೆ ಸೈಯದ್ ಹೈದರ್ ಶಾ ಹೇಳಿದ್ದಾರೆ.

ಈ ನಡುವೆ, ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗಿದೆ. ರಾಜ್ಯ ರಾಜಧಾನಿ ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ಇಂಧನ ಕೇಂದ್ರಗಳು ಮುಚ್ಚಲ್ಪಟ್ಟವು. ರಸ್ತೆಗಳಲ್ಲಿ ಖಾಸಗಿ ವಾಹನಗಳು ಕಂಡುಬಂದರೂ ಸಾರ್ವಜನಿಕ ಸಾರಿಗೆ ವಿರಳವಾಗಿತ್ತು. ಖಾಸಗಿ ಶಾಲೆಗಳು ಮುಚ್ಚಲ್ಪಟ್ಟಿದ್ದರೂ, ಸರ್ಕಾರಿ ಶಾಲೆಗಳು ತೆರೆದಿದ್ದವು.

ಕಾಶ್ಮೀರ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಕೆಸಿಸಿಐ), ಕಾಶ್ಮೀರ ವ್ಯಾಪಾರಿಗಳು ಮತ್ತು ತಯಾರಕರ ಒಕ್ಕೂಟ (ಕೆಟಿಎಂಎಫ್), ಮುಸ್ಲಿಂ ಧಾರ್ಮಿಕ ಗುಂಪು ಮುತ್ತಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮತ್ತು ಜಮ್ಮು ಕಾಶ್ಮೀರದ ಗ್ರ್ಯಾಂಡ್ ಮುಫ್ತಿ ನಾಸಿರ್-ಉಲ್-ಇಸ್ಲಾಂ ಸೇರಿದಂತೆ ಹಲವಾರು ಗುಂಪುಗಳು ಜಂಟಿಯಾಗಿ ಈ ಬಂದ್‌ಗೆ ಕರೆ ನೀಡಿವೆ.

“ಇಂತಹ ಭಯೋತ್ಪಾದಕ ಮತ್ತು ಹಿಂಸಾಚಾರದ ಕೃತ್ಯಗಳು ಸ್ವೀಕಾರಾರ್ಹವಲ್ಲ. ಇದಕ್ಕೆ ನಮ್ಮ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಭಯೋತ್ಪಾದನೆಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ನಿಂತು ಶಾಂತಿಯುತ ಮತ್ತು ಸಾಮರಸ್ಯದ ಸಮುದಾಯವನ್ನು ಸೃಷ್ಟಿಸಲು ಶ್ರಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಕಾಶ್ಮೀರದ ಗ್ರಾಂಡ್ ಮುಫ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಮ್ಮುವಿನಲ್ಲಿಯೂ ಸಹ, ಬಂದ್‌ಗೆ ಬಲವಾದ ಬೆಂಬಲ ದೊರೆಯಿತು. ಜಮ್ಮು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಅರುಣ್ ಗುಪ್ತಾ, ಜಮ್ಮು ಬಾರ್ ಅಸೋಸಿಯೇಷನ್ ​​ಜೊತೆಗೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ. ಬಂದ್‌ನಲ್ಲಿ ಜಮ್ಮು ನಗರ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದವು.

ಹಲವಾರು ರಾಜಕೀಯ ನಾಯಕರು ಮತ್ತು ಪಕ್ಷಗಳು ಸಹ ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ. ಅವರಲ್ಲಿ ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಅಧ್ಯಕ್ಷ ಮತ್ತು ಶಾಸಕ ಹಂದ್ವಾರ, ಸಜಾದ್ ಗನಿ ಲೋನ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಸೇರಿದ್ದಾರೆ. ಅವರು ಸಂತ್ರಸ್ತರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಈ ಘೋರ ಕೃತ್ಯವನ್ನು ಖಂಡಿಸಿದ್ದಾರೆ.

ಕಣಿವೆಯಾದ್ಯಂತ, ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣಗಳ ಸುತ್ತಲೂ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆದಿಡಲು ಅನುಮತಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅದಾಗ್ಯೂ, ಬಂದ್‌ನ ಪರಿಣಾಮ ಕಣಿವೆಯ ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಾಗಿದೆ.

ಜನರು, ರಾಜಕೀಯ ಪಕ್ಷಗಳು, ಧಾರ್ಮಿಕ ಸಂಸ್ಥೆಗಳು ಮತ್ತು ನಾಗರಿಕ ಸಮಾಜ ಗುಂಪುಗಳ ಸಾಮೂಹಿಕ ಧ್ವನಿಯು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ರವಾನಿಸಿದೆ ಎಂದು ವರದಿಗಳು ಉಲ್ಲೇಖಿಸಿವೆ. ಪಹಲ್ಗಾಮ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...