Homeಅಂತರಾಷ್ಟ್ರೀಯಪಾಕ್ ಕದನ ವಿರಾಮ ಉಲ್ಲಂಘನೆ: ಉಭಯ ದೇಶಗಳು ಸಂವಾದ ನಡೆಸಲಿ- ಮೆಹಬೂಬ ಮುಫ್ತಿ

ಪಾಕ್ ಕದನ ವಿರಾಮ ಉಲ್ಲಂಘನೆ: ಉಭಯ ದೇಶಗಳು ಸಂವಾದ ನಡೆಸಲಿ- ಮೆಹಬೂಬ ಮುಫ್ತಿ

ನಿಯಂತ್ರಣ ರೇಖೆಯ ಎರಡೂ ಬದಿಗಳಲ್ಲಿ ಹೆಚ್ಚುತ್ತಿರುವ ಸಾವುನೋವುಗಳನ್ನು ನೋಡಿಕೊಂಡಿರುವುದಕ್ಕೆ ಬೇಸರವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ ಕುರಿತು ಪ್ರತಿಕ್ರಿಯಿಸಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬ ಮುಫ್ತಿ, ಭಾರತ ಮತ್ತು ಪಾಕಿಸ್ತಾನವು ಸಂವಾದದಲ್ಲಿ ತೊಡಗಿ ಈ ಸಮಸ್ಯೆಗಳನ್ನು ಬಗೆಹರಿಸಲು ಕೇಳಿಕೊಂಡರು. ಎರಡೂ ದೇಶಗಳ ವಾಸ್ತವಿಕ ಗಡಿಯಲ್ಲಿ ಸಾವು ನೋವುಗಳು ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ ಎಂದು ಹೇಳಿದರು.

ಗುಂಡಿನ ದಾಳಿಯಿಂದ ಎರಡೂ ಕಡೆ ಪ್ರಾಣಹಾನಿ ಸಂಭವಿಸಿವೆ. ಮಾಜಿ ಪ್ರಧಾನಿ ಎ.ಬಿ.ವಾಜಪೇಯಿ ಮತ್ತು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರು ಒಪ್ಪಿ, ಜಾರಿಗೆ ತಂದ ಕದನ ವಿರಾಮ ನಿಯಮವನ್ನು ಪುನಃಸ್ಥಾಪಿಸಿ ಪ್ರಾರಂಭಿಸಬೇಕು ಎಂದು  ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ನಾಲ್ವರು ಯೋಧರೂ ಸೇರಿ 8 ಮಂದಿ ಸಾವು

“ನಿಯಂತ್ರಣ ರೇಖೆಯ ಎರಡೂ ಬದಿಗಳಲ್ಲಿ ಹೆಚ್ಚುತ್ತಿರುವ ಸಾವುನೋವುಗಳನ್ನು ನೋಡಿಕೊಂಡಿರುವುದಕ್ಕೆ ಬೇಸರವಾಗುತ್ತಿದೆ. ಭಾರತೀಯ ಮತ್ತು ಪಾಕಿಸ್ತಾನದ ನಾಯಕತ್ವವು ತಮ್ಮ ರಾಜಕೀಯವನ್ನು ಬಿಟ್ಟು ಮುಂದೆ ಬರಲು ಮತ್ತು ಸಂವಾದವನ್ನು ಪ್ರಾರಂಭಿಸಲು ಸಾಧ್ಯವಾದರೆ, ವಾಜಪೇಯಿ ಜಿ ಮತ್ತು ಮುಷರಫ್ ಸಹಾಬ್ ಅವರ ಆಶಯದ ಕದನ ವಿರಾಮವನ್ನು ನಿಯಮವನ್ನು ಪುನಃ ಪ್ರಾರಂಭಿಸಲು ಇದು ಉತ್ತಮ ಸಮಯವಾಗಿದೆ” ಟ್ವೀಟ್ ಮಾಡಿದ್ದಾರೆ.

ಗುರೇಜ್ ಸೆಕ್ಟರ್‌ನಿಂದ ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ವರೆಗೆ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನ ಪಡೆಗಳು ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಬಿಎಸ್‌ಎಫ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಭದ್ರತಾ ಪಡೆಗಳ ಸಿಬ್ಬಂದಿ ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ: ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ: ಸುಮಲತಾ ಅಂಬರೀಶ್ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ…

ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಉರಿಯ ಕಮಲ್‌ಕೋಟ್‌ನಲ್ಲಿ ಇಬ್ಬರು ಮತ್ತು ಬಾಲ್ಕೋಟ್‌ನಲ್ಲಿ ಇನ್ನೊಬ್ಬ ಮಹಿಳೆ ಸಹ ಸಾವನ್ನಪ್ಪಿದ್ದಾರೆ. ಆಕ್ರಮಣದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಒಂದು ವಾರದೊಳಗೆ ನಡೆದ ಎರಡನೇ ಒಳನುಸುಳುವಿಕೆ ಪ್ರಯತ್ನ ಇದಾಗಿದ್ದು. ನವೆಂಬರ್ 7- 8 ರ ಮಧ್ಯರಾತ್ರಿಯಲ್ಲಿ ಮಚಿಲ್ ವಲಯದಲ್ಲಿ ಈ ಹಿಂದೆ ನಡೆದ ದಾಳಿಯಲ್ಲಿ, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.


ಇದನ್ನೂ ಓದಿ: `ಹುಸಿ ರಾಷ್ಟ್ರೀಯತೆ’ ಎದುರು ಕರ್ನಾಟಕದ ಸುದೀರ್ಘ ಸಂಘರ್ಷ: ಟಿ.ಎ.ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...