Homeಮುಖಪುಟರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ರಕ್ಷಣಾ ಸಚಿವರು ತಕ್ಷಣ ಚೀನಾ ಮತ್ತು ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಸಶಸ್ತ್ರ ಪಡೆಗಳ ಅಧ್ಯಕ್ಷರು, ಪ್ರಧಾನಿ, ಗೃಹಸಚಿವರು ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕು - ಸಂಜಯ್ ರಾವತ್

- Advertisement -
- Advertisement -

ದೆಹಲಿಯಲ್ಲಿ ಹೋರಾಡುತ್ತಿರುವ ರೈತರಿಗೆ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ. ಅಲ್ಲಿಂದ ಹಣ ಸರಬರಾಜು ಆಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾವ್‌ಸಾಹೇಬ್‌ ಧನ್ವೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸಿಖ್‌ ಗುರುದ್ವಾರಗಳು ಮತ್ತು ಶಿವಸೇನೆ ತೀವ್ರ ರೀತಿಯಲ್ಲಿ ಪ್ರತಿಕ್ರಿಯಿಸಿವೆ. ಇದು ನಾಚಿಕೆಗೇಡಿನ ವಿಷಯ ಎಂದು ಕಿಡಿಕಾರಿದ್ದಾರೆ.

“ರೈತರ ಆಂದೋಲನದ ಹಿಂದೆ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ ಎಂದು ಕೇಂದ್ರ ಸಚಿವರಿಗೆ ಮಾಹಿತಿ ಇದ್ದರೆ, ರಕ್ಷಣಾ ಸಚಿವರು ತಕ್ಷಣ ಚೀನಾ ಮತ್ತು ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಸಶಸ್ತ್ರ ಪಡೆಗಳ ಅಧ್ಯಕ್ಷರು, ಪ್ರಧಾನಿ, ಗೃಹಸಚಿವರು ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕು” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ಇನ್ನು ಕೇಂದ್ರ ಸಚಿವರ ಈ ಹೇಳಿಕೆಯನ್ನು ದೆಹಲಿ ಸಿಖ್ ಗುರುದ್ವಾರ ಆಡಳಿತ ಮಂಡಳಿ ಖಂಡಿಸಿದೆ. “ರೈತರು ಹಲವು ದಿನಗಳಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ ಮತ್ತು ಕೇಂದ್ರ ಸರ್ಕಾರ ಅವರಿಗೆ ನ್ಯಾಯ ಕೊಡಲು ವಿಫಲವಾಗಿದೆ. ದೇಶಕ್ಕಾಗಿ ಆಹಾರ ಬೆಳೆಯುವ ಮತ್ತು ತಮಗಾಗಿ ಹೋರಾಡುವ ರೈತರನ್ನು, ದೇಶಕ್ಕಾಗಿ ಪ್ರಾಣ ನೀಡುತ್ತಿರುವ ಅವರ ಮಕ್ಕಳನ್ನು ದೇಶದ್ರೋಹಿಗಳಂತೆ ಚಿತ್ರಿಸಬೇಡಿ” ಎಂದು ಆಡಳಿತ ಮಂಡಳಿ ಅಧ್ಯಕ್ಷ ಮಂಜಿಂಧರ್ ಸಿಂಗ್ ತಿಳಿಸಿದ್ದಾರೆ.

ಕೇಂದ್ರ ಸಚಿವ ರಾವ್‌ಸಾಹೇಬ್‌ ಧನ್ವೆ ಮಹಾರಾಷ್ಟ್ರದಲ್ಲಿ ಆರೋಗ್ಯ ಕೇಂದ್ರವೊಂದನ್ನು ಉದ್ಘಾಟನೆ ಮಾಡುವ ವೇಳೆ “ರೈತರ ಹೋರಾಟದ ಹಿಂದೆ ಕೆಲ ರಾಷ್ಟ್ರಗಳ ಪಿತೂರಿಯಿದೆ. ಈ ಹಿಂದೆ ಮುಸ್ಲಿಮರು ಸಹ ಸಿಎಎ, ಎನ್‌ಆರ್‌ಸಿ ಹೆಸರಿನಲ್ಲಿ ದೇಶವನ್ನು ದಿಕ್ಕುತಪ್ಪಿಸಲು ನೋಡಿದ್ದರು” ಎಂದು ಆರೋಪಿಸಿದ್ದರು.

ಇನ್ನು ನಿನ್ನೆ ನಡೆದ ರೈತರು-ಕೇಂದ್ರ ಸಚಿವರ ನಡುವಿನ ಸಭೆಯಲ್ಲಿ “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದ್ದ ಪ್ರಸ್ತಾಪವನ್ನು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತಿರಸ್ಕರಿಸಿದ್ದು, ರೈತರ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದೆ” ಎಂದು ಮಾಧ್ಯಮ ಬುಲೆಟಿನ್‌ನಲ್ಲಿ ತಿಳಿಸಿದೆ.

ಡಿಸೆಂಬರ್ 08 ರಂದು ನಡೆದ ಭಾರತ್ ಬಂದ್ ಯಶಸ್ವಿಯಾಗಿದ್ದು ರೈತರ ಈಗ ಅಂಬಾನಿ ಅದಾನಿಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ.


ಇದನ್ನೂ ಓದಿ; ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...