Homeಮುಖಪುಟರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡ: ಬಿಜೆಪಿ ಸಚಿವನ ಹೇಳಿಕೆಗೆ ಭಾರೀ ಆಕ್ರೋಶ

ರಕ್ಷಣಾ ಸಚಿವರು ತಕ್ಷಣ ಚೀನಾ ಮತ್ತು ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಸಶಸ್ತ್ರ ಪಡೆಗಳ ಅಧ್ಯಕ್ಷರು, ಪ್ರಧಾನಿ, ಗೃಹಸಚಿವರು ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕು - ಸಂಜಯ್ ರಾವತ್

- Advertisement -
- Advertisement -

ದೆಹಲಿಯಲ್ಲಿ ಹೋರಾಡುತ್ತಿರುವ ರೈತರಿಗೆ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ. ಅಲ್ಲಿಂದ ಹಣ ಸರಬರಾಜು ಆಗುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾವ್‌ಸಾಹೇಬ್‌ ಧನ್ವೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸಿಖ್‌ ಗುರುದ್ವಾರಗಳು ಮತ್ತು ಶಿವಸೇನೆ ತೀವ್ರ ರೀತಿಯಲ್ಲಿ ಪ್ರತಿಕ್ರಿಯಿಸಿವೆ. ಇದು ನಾಚಿಕೆಗೇಡಿನ ವಿಷಯ ಎಂದು ಕಿಡಿಕಾರಿದ್ದಾರೆ.

“ರೈತರ ಆಂದೋಲನದ ಹಿಂದೆ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ ಎಂದು ಕೇಂದ್ರ ಸಚಿವರಿಗೆ ಮಾಹಿತಿ ಇದ್ದರೆ, ರಕ್ಷಣಾ ಸಚಿವರು ತಕ್ಷಣ ಚೀನಾ ಮತ್ತು ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಸಶಸ್ತ್ರ ಪಡೆಗಳ ಅಧ್ಯಕ್ಷರು, ಪ್ರಧಾನಿ, ಗೃಹಸಚಿವರು ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕು” ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ಇನ್ನು ಕೇಂದ್ರ ಸಚಿವರ ಈ ಹೇಳಿಕೆಯನ್ನು ದೆಹಲಿ ಸಿಖ್ ಗುರುದ್ವಾರ ಆಡಳಿತ ಮಂಡಳಿ ಖಂಡಿಸಿದೆ. “ರೈತರು ಹಲವು ದಿನಗಳಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ ಮತ್ತು ಕೇಂದ್ರ ಸರ್ಕಾರ ಅವರಿಗೆ ನ್ಯಾಯ ಕೊಡಲು ವಿಫಲವಾಗಿದೆ. ದೇಶಕ್ಕಾಗಿ ಆಹಾರ ಬೆಳೆಯುವ ಮತ್ತು ತಮಗಾಗಿ ಹೋರಾಡುವ ರೈತರನ್ನು, ದೇಶಕ್ಕಾಗಿ ಪ್ರಾಣ ನೀಡುತ್ತಿರುವ ಅವರ ಮಕ್ಕಳನ್ನು ದೇಶದ್ರೋಹಿಗಳಂತೆ ಚಿತ್ರಿಸಬೇಡಿ” ಎಂದು ಆಡಳಿತ ಮಂಡಳಿ ಅಧ್ಯಕ್ಷ ಮಂಜಿಂಧರ್ ಸಿಂಗ್ ತಿಳಿಸಿದ್ದಾರೆ.

ಕೇಂದ್ರ ಸಚಿವ ರಾವ್‌ಸಾಹೇಬ್‌ ಧನ್ವೆ ಮಹಾರಾಷ್ಟ್ರದಲ್ಲಿ ಆರೋಗ್ಯ ಕೇಂದ್ರವೊಂದನ್ನು ಉದ್ಘಾಟನೆ ಮಾಡುವ ವೇಳೆ “ರೈತರ ಹೋರಾಟದ ಹಿಂದೆ ಕೆಲ ರಾಷ್ಟ್ರಗಳ ಪಿತೂರಿಯಿದೆ. ಈ ಹಿಂದೆ ಮುಸ್ಲಿಮರು ಸಹ ಸಿಎಎ, ಎನ್‌ಆರ್‌ಸಿ ಹೆಸರಿನಲ್ಲಿ ದೇಶವನ್ನು ದಿಕ್ಕುತಪ್ಪಿಸಲು ನೋಡಿದ್ದರು” ಎಂದು ಆರೋಪಿಸಿದ್ದರು.

ಇನ್ನು ನಿನ್ನೆ ನಡೆದ ರೈತರು-ಕೇಂದ್ರ ಸಚಿವರ ನಡುವಿನ ಸಭೆಯಲ್ಲಿ “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದ್ದ ಪ್ರಸ್ತಾಪವನ್ನು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತಿರಸ್ಕರಿಸಿದ್ದು, ರೈತರ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದೆ” ಎಂದು ಮಾಧ್ಯಮ ಬುಲೆಟಿನ್‌ನಲ್ಲಿ ತಿಳಿಸಿದೆ.

ಡಿಸೆಂಬರ್ 08 ರಂದು ನಡೆದ ಭಾರತ್ ಬಂದ್ ಯಶಸ್ವಿಯಾಗಿದ್ದು ರೈತರ ಈಗ ಅಂಬಾನಿ ಅದಾನಿಯ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ.


ಇದನ್ನೂ ಓದಿ; ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...