Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...