Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...