Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...