Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...