Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...