Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...