Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...