Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...