Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...