Homeಅಂತರಾಷ್ಟ್ರೀಯರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ...

ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

- Advertisement -
- Advertisement -

ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ಕೈವ್ ಮತ್ತು ಇತರ ನಗರಗಳಿಂದ ಸ್ಫೋಟಗಳು ಕೇಳಿಬಂದಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಷ್ಯಾ ರಾಜಧಾನಿ ಮಾಸ್ಕೋಗೆ ಭೇಟಿ ನೀಡಿದ್ದಾರೆ.

ಉಕ್ರೇನ್‌ನಲ್ಲಿ ರಷ್ಯಾದ ಕ್ರಮಗಳಿಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸುವುದು ಪ್ರತಿ “ಜವಾಬ್ದಾರಿ” ದೇಶದ ಕರ್ತವ್ಯವಾಗಿದೆ. ಉಕ್ರೇನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ತನ್ನ ನಿಲುವಿನ ಬಗ್ಗೆ ಅಮೆರಿಕವು ಪಾಕಿಸ್ತಾನಕ್ಕೆ ತಿಳಿಸಿದೆ ಎಂದು ಅಮೆರಿಕದ ವಕ್ತಾರ ನೆಡ್ ಪ್ರೈಸ್ ತಿಳಿಸಿದ್ದಾರೆ.

ಉಕ್ರೇನ್ ಮೇಲೆ ದಾಳಿ ಮುನ್ಸೂಚನೆಯಾಗಿ ರಷ್ಯಾದ ಮೇಲೆ ಅಮೆರಿಕ ಸೇರಿದಂತೆ ಹಲವು ಯೂರೋಪ್ ದೇಶಗಳು ನಿರ್ಭಂದ ಹೇರಿದ ಬೆನ್ನಲ್ಲೆ ಅರ್ಥಿಕ ಸಹಕಾರ, ತಾಲಿಬಾನ್ ನಿಯಂತ್ರಿತ ಆಫ್ಘಾನಿಸ್ಥಾನ ಸೇರಿದಂತೆ ವಿಷಯಗಳ ಕುರಿತು ಚರ್ಚಿಸಲು ಇಮ್ರಾನ್ ಖಾನ್ ರಷ್ಯಾಗೆ ಭೇಟಿ ನೀಡಿದ್ದಾರೆ. ಆ ಮೂಲಕ ಬಿಕ್ಕಟ್ಟಿನ ಬಳಿಕ ರಷ್ಯಾಗೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ. ಇದು ರಷ್ಯಾದ ದಾಳಿಗೆ ಬೆಂಬಲ ಎನ್ನುವ ಅರ್ಥದಲ್ಲಿ ಬಿಂಬಿಸಲ್ಪಡುತ್ತಿದೆ.

ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು “ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದಾದ್ಯಂತದ ನಗರಗಳಲ್ಲಿ ಸ್ಫೋಟಗಳು ಕೇಳಿಬಂದವು. ಶಾಂತಿಯುತ ಉಕ್ರೇನಿಯನ್ ನಗರಗಳ ಮೇಲೆ ದಾಳಿಯಾಗುತ್ತಿದೆ” ಎಂದು ಕುಲೆಬಾ ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ 6 ಗಂಟೆಗೆ ದೂರದರ್ಶನದಲ್ಲಿ ಮಾತನಾಡಿದ ಪುಟಿನ್ “ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ” ಎಂದು ತಿಳಿಸಿದ್ದಾರೆ. ಉಕ್ರೇನ್‌ನ ಗಡಿಯಲ್ಲಿ 1,50,000 ದಿಂದ 2,00,000 ಸೈನಿಕರನ್ನು ಜಮಾವಣೆ ಮಾಡಲಾಗಿದೆ ಎನ್ನಲಾಗಿದೆ.


ಇದನ್ನು ಓದಿ: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ: ಭಾರತೀಯರನ್ನು ಕರೆತರಲು ಹೋಗಿದ್ದ ವಿಮಾನ ಖಾಲಿ ಕೈಲಿ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯುದ್ಧದಿಂದ ಯಾರೂ, ಏನನ್ನೂ ಗೆಲ್ಲುವುದು ಸಾದ್ಯವಿಲ್ಲ, ಆದರೂ ಮನಶ್ಯನ ಅವಿವೇಕದಿಂದ, ಅಹಂಕಾರದಿಂದ ಯುದ್ದಗಳು ನಡೆಯುತ್ತಲೇ ಇವೆ.
    ರಷ್ಯಾದಲ್ಲಿ, ಪುಟಿನ್ ಜನಪ್ರಿಯತೆ ಕುಗ್ಗುತ್ತಿದೆ. ಅಧಿಕಾರದಲ್ಲಿ ಮುಂದುವರಿಯಲು ಪುಟಿನ್ ಈ ಯುದ್ಧ ಹೂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...