Homeಅಂತರಾಷ್ಟ್ರೀಯಪಾಕಿಸ್ತಾನ - ಭಾರಿ ಪ್ರವಾಹದಿಂದ 33 ಲಕ್ಷ ಮಕ್ಕಳು ಅಪಾಯದಲ್ಲಿ: ಯುನಿಸೆಫ್‌‌

ಪಾಕಿಸ್ತಾನ – ಭಾರಿ ಪ್ರವಾಹದಿಂದ 33 ಲಕ್ಷ ಮಕ್ಕಳು ಅಪಾಯದಲ್ಲಿ: ಯುನಿಸೆಫ್‌‌

- Advertisement -
- Advertisement -

ಪಾಕಿಸ್ತಾನದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಇದರ ಪರಿಣಾಮವಾಗಿ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪಾಯದಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್) ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. “ಪಾಕಿಸ್ತಾನದ ಇತಿಹಾಸದಲ್ಲೆ ಅತ್ಯಂತ ತೀವ್ರವಾದ ಪ್ರವಾಹ ಉಂಟಾಗಿರುವುದರಿಂದ ಜಲಮೂಲ ರೋಗಗಳು ಮತ್ತು ಅಪೌಷ್ಟಿಕತೆಯ ಅಪಾಯ ಹೆಚ್ಚಾಗಿದೆ. ಮೂವತ್ತು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಾನವೀಯ ನೆರವಿನ ಅವಶ್ಯಕತೆಯಿದೆ” ಎಂದು ಯುನಿವೆಫ್‌ ಪ್ರಕಟಣೆ ತಿಳಿಸಿದೆ.

ಜುಲೈ ತಿಂಗಳ ಮಧ್ಯದಲ್ಲಿ ಪ್ರಾರಂಭವಾದ ಭಾರೀ ಮಳೆಯ ಪರಿಣಾಮ ದೇಶದಲ್ಲಿ ನೆರೆ ಉಂಟಾಗಿದೆ. ಇದರಿಂದಾಗಿ ದೇಶದಾದ್ಯಂತ 116 ಜಿಲ್ಲೆಗಳಲ್ಲಿ 3.3 ಕೋಟಿ ಜನರ ಮೇಲೆ ಪರಿಣಾಮ ಬೀರಿದೆ. ದೇಶದ 66 ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಗೊಳಗಾಗಿವೆ. “ನೆರೆ ಪೀಡಿತ ಪ್ರದೇಶಗಳಲ್ಲಿನ ಮಕ್ಕಳು ಮತ್ತು ಕುಟುಂಬಗಳ ತುರ್ತು ಅಗತ್ಯಗಳಿಗೆ ಸ್ಪಂದಿಸಲು ಸರ್ಕಾರ ಮತ್ತು ಸರ್ಕಾರೇತರ ಸಂಘಟನೆಗಳೊಂದಿಗೆ ಯುನಿಸೆಫ್‌‌‌ ಕೆಲಸ ಮಾಡುತ್ತಿದೆ” ಎಂದು ಹೇಳಿಕೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರಿ ನೆರೆಯ ಹಿನ್ನೆಲೆಯಲ್ಲಿ ಪಾಕಿಸ್ತಾನವು ಕಳೆದ ವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ನೆರವು ನೀಡಲು ಇತರ ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಕರೆ ನೀಡಿದೆ.

ಇದನ್ನೂ ಓದಿ: 1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಯುನಿಸೆಫ್‌ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಸರಿಸುಮಾರು 1.6 ಕೋಟಿ ಮಕ್ಕಳು ಸೇರಿದಂತೆ  3.3 ಕೋಟಿ ಜನರು ಪಾಕಿಸ್ತಾನದಲ್ಲಿ ಈ ವರ್ಷದ ಭಾರೀ ಮಾನ್ಸೂನ್ ಮಳೆಯಿಂದ ಪ್ರಭಾವಿತರಾಗಿದ್ದಾರೆ. ಮಳೆಯು ವಿನಾಶಕಾರಿಯಾಗಿದ್ದು, ಇದರಿಂದಾಗಿ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿದೆ” ಎಂದು ತಿಳಿಸಿದೆ.

“ನೆರೆಯಿಂದಾಗಿ 350 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 1,100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, 1,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2.87 ಲಕ್ಷಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಮತ್ತು 6.62 ಮನೆಗಳು ಭಾಗಶಃ ನಾಶವಾಗಿವೆ” ಎಂದು ಯುನಿಸೆಫ್‌ ಹೇಳಿದೆ.

“ಕೆಲವು ಪ್ರಮುಖ ನದಿಗಳು ತಮ್ಮ ದಡಗಳನ್ನು ಮೀರಿ ಹರಿಯುತ್ತಿದ್ದು, ಅಣೆಕಟ್ಟುಗಳು ಉಕ್ಕಿ ಹರಿದಿವೆ. ಮನೆಗಳು, ತೋಟಗಳು, ರಸ್ತೆಗಳು, ಸೇತುವೆಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಸೇರಿದಂತೆ ನಿರ್ಣಾಯಕ ಮೂಲಸೌಕರ್ಯಗಳು ನಾಶವಾಗಿದೆ” ಎಂದು ಯುನಿಸೆಫ್‌ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ವಿಡಿಯೊ ನೋಡಿ: ಭಾರತದ ರಾಷ್ಟ್ರಗೀತೆ ನುಡಿಸಿ ಶುಭಕೋರಿದ ಪಾಕಿಸ್ತಾನಿ ಸಂಗೀತಗಾರ

ಪ್ರವಾಹದ ಪ್ರಭಾವಕ್ಕೆ ಒಳಪಟ್ಟ ಪ್ರದೇಶಗಳಲ್ಲಿ 30% ದಷ್ಟು ನೀರಿನ ವ್ಯವಸ್ಥೆಗಳು ಹಾನಿಗೊಳಗಾಗಿವೆ ಎಂದು ಅಂದಾಜಿಸಲಾಗಿದೆ. ಅತಿಸಾರ ಮತ್ತು ನೀರಿನಿಂದ ಹರಡುವ ರೋಗಗಳು, ಉಸಿರಾಟದ ಸೋಂಕು ಮತ್ತು ಚರ್ಮ ರೋಗಗಳ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎಂದು ಯುನಿಸೆಫ್ ಹೇಳಿದೆ.

ಈಗಾಗಲೇ ನೆರೆ ಉಂಟಾಗಿರುವ ಪ್ರದೇಶಗಳಲ್ಲಿ ಭಾರೀ ಮಳೆಯು ಮುಂದುವರಿದಿರುವುದರಿಂದ ಅಪಾಯಕಾರಿ ಮಾನವೀಯ ಪರಿಸ್ಥಿತಿಯು ಮುಂದಿನ ದಿನಗಳು ಮತ್ತು ವಾರಗಳಲ್ಲಿ ಇನ್ನಷ್ಟು ಹದಗೆಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...