Homeಅಂತರಾಷ್ಟ್ರೀಯಪಾಕಿಸ್ತಾನ - ಭಾರಿ ಪ್ರವಾಹದಿಂದ 33 ಲಕ್ಷ ಮಕ್ಕಳು ಅಪಾಯದಲ್ಲಿ: ಯುನಿಸೆಫ್‌‌

ಪಾಕಿಸ್ತಾನ – ಭಾರಿ ಪ್ರವಾಹದಿಂದ 33 ಲಕ್ಷ ಮಕ್ಕಳು ಅಪಾಯದಲ್ಲಿ: ಯುನಿಸೆಫ್‌‌

- Advertisement -
- Advertisement -

ಪಾಕಿಸ್ತಾನದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಇದರ ಪರಿಣಾಮವಾಗಿ 30 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪಾಯದಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್) ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. “ಪಾಕಿಸ್ತಾನದ ಇತಿಹಾಸದಲ್ಲೆ ಅತ್ಯಂತ ತೀವ್ರವಾದ ಪ್ರವಾಹ ಉಂಟಾಗಿರುವುದರಿಂದ ಜಲಮೂಲ ರೋಗಗಳು ಮತ್ತು ಅಪೌಷ್ಟಿಕತೆಯ ಅಪಾಯ ಹೆಚ್ಚಾಗಿದೆ. ಮೂವತ್ತು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಾನವೀಯ ನೆರವಿನ ಅವಶ್ಯಕತೆಯಿದೆ” ಎಂದು ಯುನಿವೆಫ್‌ ಪ್ರಕಟಣೆ ತಿಳಿಸಿದೆ.

ಜುಲೈ ತಿಂಗಳ ಮಧ್ಯದಲ್ಲಿ ಪ್ರಾರಂಭವಾದ ಭಾರೀ ಮಳೆಯ ಪರಿಣಾಮ ದೇಶದಲ್ಲಿ ನೆರೆ ಉಂಟಾಗಿದೆ. ಇದರಿಂದಾಗಿ ದೇಶದಾದ್ಯಂತ 116 ಜಿಲ್ಲೆಗಳಲ್ಲಿ 3.3 ಕೋಟಿ ಜನರ ಮೇಲೆ ಪರಿಣಾಮ ಬೀರಿದೆ. ದೇಶದ 66 ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಗೊಳಗಾಗಿವೆ. “ನೆರೆ ಪೀಡಿತ ಪ್ರದೇಶಗಳಲ್ಲಿನ ಮಕ್ಕಳು ಮತ್ತು ಕುಟುಂಬಗಳ ತುರ್ತು ಅಗತ್ಯಗಳಿಗೆ ಸ್ಪಂದಿಸಲು ಸರ್ಕಾರ ಮತ್ತು ಸರ್ಕಾರೇತರ ಸಂಘಟನೆಗಳೊಂದಿಗೆ ಯುನಿಸೆಫ್‌‌‌ ಕೆಲಸ ಮಾಡುತ್ತಿದೆ” ಎಂದು ಹೇಳಿಕೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರಿ ನೆರೆಯ ಹಿನ್ನೆಲೆಯಲ್ಲಿ ಪಾಕಿಸ್ತಾನವು ಕಳೆದ ವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ನೆರವು ನೀಡಲು ಇತರ ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಕರೆ ನೀಡಿದೆ.

ಇದನ್ನೂ ಓದಿ: 1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಯುನಿಸೆಫ್‌ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಸರಿಸುಮಾರು 1.6 ಕೋಟಿ ಮಕ್ಕಳು ಸೇರಿದಂತೆ  3.3 ಕೋಟಿ ಜನರು ಪಾಕಿಸ್ತಾನದಲ್ಲಿ ಈ ವರ್ಷದ ಭಾರೀ ಮಾನ್ಸೂನ್ ಮಳೆಯಿಂದ ಪ್ರಭಾವಿತರಾಗಿದ್ದಾರೆ. ಮಳೆಯು ವಿನಾಶಕಾರಿಯಾಗಿದ್ದು, ಇದರಿಂದಾಗಿ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿದೆ” ಎಂದು ತಿಳಿಸಿದೆ.

“ನೆರೆಯಿಂದಾಗಿ 350 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 1,100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, 1,600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 2.87 ಲಕ್ಷಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಮತ್ತು 6.62 ಮನೆಗಳು ಭಾಗಶಃ ನಾಶವಾಗಿವೆ” ಎಂದು ಯುನಿಸೆಫ್‌ ಹೇಳಿದೆ.

“ಕೆಲವು ಪ್ರಮುಖ ನದಿಗಳು ತಮ್ಮ ದಡಗಳನ್ನು ಮೀರಿ ಹರಿಯುತ್ತಿದ್ದು, ಅಣೆಕಟ್ಟುಗಳು ಉಕ್ಕಿ ಹರಿದಿವೆ. ಮನೆಗಳು, ತೋಟಗಳು, ರಸ್ತೆಗಳು, ಸೇತುವೆಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಸೇರಿದಂತೆ ನಿರ್ಣಾಯಕ ಮೂಲಸೌಕರ್ಯಗಳು ನಾಶವಾಗಿದೆ” ಎಂದು ಯುನಿಸೆಫ್‌ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ವಿಡಿಯೊ ನೋಡಿ: ಭಾರತದ ರಾಷ್ಟ್ರಗೀತೆ ನುಡಿಸಿ ಶುಭಕೋರಿದ ಪಾಕಿಸ್ತಾನಿ ಸಂಗೀತಗಾರ

ಪ್ರವಾಹದ ಪ್ರಭಾವಕ್ಕೆ ಒಳಪಟ್ಟ ಪ್ರದೇಶಗಳಲ್ಲಿ 30% ದಷ್ಟು ನೀರಿನ ವ್ಯವಸ್ಥೆಗಳು ಹಾನಿಗೊಳಗಾಗಿವೆ ಎಂದು ಅಂದಾಜಿಸಲಾಗಿದೆ. ಅತಿಸಾರ ಮತ್ತು ನೀರಿನಿಂದ ಹರಡುವ ರೋಗಗಳು, ಉಸಿರಾಟದ ಸೋಂಕು ಮತ್ತು ಚರ್ಮ ರೋಗಗಳ ಪ್ರಕರಣಗಳು ಈಗಾಗಲೇ ವರದಿಯಾಗಿವೆ ಎಂದು ಯುನಿಸೆಫ್ ಹೇಳಿದೆ.

ಈಗಾಗಲೇ ನೆರೆ ಉಂಟಾಗಿರುವ ಪ್ರದೇಶಗಳಲ್ಲಿ ಭಾರೀ ಮಳೆಯು ಮುಂದುವರಿದಿರುವುದರಿಂದ ಅಪಾಯಕಾರಿ ಮಾನವೀಯ ಪರಿಸ್ಥಿತಿಯು ಮುಂದಿನ ದಿನಗಳು ಮತ್ತು ವಾರಗಳಲ್ಲಿ ಇನ್ನಷ್ಟು ಹದಗೆಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...