Homeಮುಖಪುಟಪಾಕಿಸ್ತಾನದಿಂದ 15 ಮಿಲಿಟರಿ ಕೇಂದ್ರಗಳ ಮೇಲೆ ಡ್ರೋನ್‌, ಕ್ಷಿಪಣಿ ಮೂಲಕ ದಾಳಿಗೆ ಯತ್ನ: ಭಾರತ

ಪಾಕಿಸ್ತಾನದಿಂದ 15 ಮಿಲಿಟರಿ ಕೇಂದ್ರಗಳ ಮೇಲೆ ಡ್ರೋನ್‌, ಕ್ಷಿಪಣಿ ಮೂಲಕ ದಾಳಿಗೆ ಯತ್ನ: ಭಾರತ

- Advertisement -
- Advertisement -

ಆಪರೇಷನ್ ಸಿಂಧೂರ ದಾಳಿಯ ನಂತರ ಪಾಕಿಸ್ತಾನವು ಬುಧವಾರ ರಾತ್ರಿ 15 ಪಟ್ಟಣಗಳು ​​ಮತ್ತು ನಗರಗಳಲ್ಲಿನ ಭಾರತೀಯ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸುವ ಪ್ರಯತ್ನ ಮಾಡಿದ್ದು, ಅವುಗಳನ್ನು ಪಡೆಗಳು ವಿಫಲಗೊಳಿಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. ಪಾಕಿಸ್ತಾನದಿಂದ 

ಜಮ್ಮು ಕಾಶ್ಮೀರದ ಅವಂತಿಪೋರಾ, ಜಮ್ಮು ಮತ್ತು ಶ್ರೀನಗರ, ಪಂಜಾಬ್‌ನ ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಅದಮ್‌ಪುರ ಮತ್ತು ಬಟಿಂಡಾ, ರಾಜಸ್ಥಾನದ ಚಂಡೀಗಢ, ನಲ್, ಫಲೋಡಿ ಮತ್ತು ಉತ್ತರಲೈ ಮತ್ತು ಗುಜರಾತ್‌ನ ಭುಜ್ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಮಾನವರಹಿತ ವಿಮಾನಗಳ ಮೂಲಕ ಮತ್ತು ರಕ್ಷಣಾ ವ್ಯವಸ್ಥೆಗಳಿಂದ ನಾಶಪಡಿಸಲಾಗಿದೆ. ಜೊತೆಗೆ ಅವುಗಳ ಅವಶೇಷಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳೆಂದು ಹೇಳಲಾದ ಸ್ಥಳಗಳ ಮೇಲೆ ಬುಧವಾರ ಭಾರತೀಯ ಸೇನೆ ದಾಳಿ ನಡೆಸಿತ್ತು. ಇದರ ನಂತರ ಪಾಕಿಸ್ತಾನ ಈ ದಾಳಿ ನಡೆಸಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಒಂಬತ್ತು ಸ್ಥಳಗಳನ್ನು ಗುರಿಯಾಗಿಸಲಾಗಿತ್ತು.

ಜಮ್ಮು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಶೆಲ್ ದಾಳಿ ಮಾಡುವ ಮೂಲಕ ಪಾಕಿಸ್ತಾನ ಸೇನೆಯು ಪ್ರತಿದಾಳಿ ನಡೆಸಿದೆ. ಗುಂಡಿನ ದಾಳಿಯಲ್ಲಿ ಹದಿನಾರು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಗುರುವಾರ ಬೆಳಿಗ್ಗೆ ಭಾರತೀಯ ಸೇನೆಯು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಅದು ಹೇಳಿದೆ. “ಲಾಹೋರ್‌ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದು ವಿಶ್ವಾಸಾರ್ಹವಾಗಿ ತಿಳಿದುಬಂದಿದೆ.” ಎಂದು ಅದು ಹೇಳಿದೆ.

ಬುಧವಾರ ರಾತ್ರಿಯಿಂದ ತನ್ನ ವಾಯುಪ್ರದೇಶವನ್ನು ಪ್ರವೇಶಿಸಿದ 25 ಭಾರತೀಯ ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ ಎಂದು ಅಲ್-ಜಜೀರಾ ವರದಿ ಮಾಡಿದೆ. ಕರಾಚಿ ಮತ್ತು ಲಾಹೋರ್ ನಗರಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಭಾರತೀಯ ನಿರ್ಮಿತ ಇಸ್ರೇಲಿ ಹರೋಪ್ ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ಪಾಕಿಸ್ತಾನ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.

ಡ್ರೋನ್ ದಾಳಿಯಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ ಎಂದು ಅಲ್-ಜಜೀರಾ ವರದಿ ಮಾಡಿದೆ. “ಭಾರತದ ಡ್ರೋನ್‌ಗಳನ್ನು ಪಾಕಿಸ್ತಾನ ವಾಯುಪ್ರದೇಶಕ್ಕೆ ಕಳುಹಿಸಲಾಗುತ್ತಿದೆ… [ಭಾರತ] ಈ ಆಕ್ರಮಣಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ.” ಎಂದು ಚೌಧರಿ ಹೇಳಿದ್ದಾರೆ.

ಬುಧವಾರ ಭಾರತದ ದಾಳಿಯಲ್ಲಿ ಪಾಕಿಸ್ತಾನದಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಈ ದಾಳಿಯಿಂದ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅದು ಪಾಕಿಸ್ತಾನ ಹೇಳಿದ್ದು, ಕಾರ್ಯಾಚರಣೆಯನ್ನು ತನ್ನ ಸಾರ್ವಭೌಮತ್ವದ ಉಲ್ಲಂಘನೆ ಎಂದು ಹೇಳಿಕೊಂಡಿದೆ.

ಅದಾಗ್ಯೂ, ಭಾರತವು ಅಪರೇಷನ್ ಸಿಂಧೂರವನ್ನು “ನಮ್ಮ ಮುಗ್ಧ ವ್ಯಕ್ತಿಗಳನ್ನು ಕೊಂದವರನ್ನು ಮಾತ್ರ ಗುರಿಯಾಗಿಸಿಕೊಂಡಿವೆ” ಎಂದು ಹೇಳಿದೆ. ಇದನ್ನು ಪುನರುಚ್ಚರಿಸಿರುವ ರಕ್ಷಣಾ ಸಚಿವಾಲಯ, “ಭಾರತದಲ್ಲಿನ ಮಿಲಿಟರಿ ಗುರಿಗಳ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು” ಎಂದು ಗುರುವಾರ ಹೇಳಿದೆ.

ಕದನ ವಿರಾಮ ಉಲ್ಲಂಘನೆ

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಪೂಂಚ್, ಮೆಂಧರ್ ಮತ್ತು ರಾಜೌರಿ ವಲಯಗಳಲ್ಲಿನ ಪ್ರದೇಶಗಳಲ್ಲಿ ನಿಯಂತ್ರಣ ರೇಖೆಯಾದ್ಯಂತ ಮೋರ್ಟಾರ್‌ಗಳು ಮತ್ತು ಭಾರೀ ಕ್ಯಾಲಿಬರ್ ಫಿರಂಗಿಗಳನ್ನು ಬಳಸಿ ಅಪ್ರಚೋದಿತ ಗುಂಡಿನ ದಾಳಿಯ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಭಾರತ ಆರೋಪಿಸಿದೆ. ಪಾಕಿಸ್ತಾನದಿಂದ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...