Homeಅಂತರಾಷ್ಟ್ರೀಯಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

- Advertisement -
- Advertisement -

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಇಸ್ಲಾಮಾಬಾದ್‌ನಲ್ಲಿ ನಡೆದ ಸರಣಿ ದಾಳಿಗಳ ಹಿಂದೆ ಇರುವ ಸಶಸ್ತ್ರ ಗುಂಪುಗಳ ‘ನೆಲೆಗಳು ಮತ್ತು ಅಡಗುತಾಣಗಳನ್ನು’ ಗುರಿಯಾಗಿಸಿಕೊಂಡು ಪಾಕಿಸ್ತಾನದ ಸೇನೆಯು ಅಫ್ಘಾನಿಸ್ತಾನದಲ್ಲಿ ವೈಮಾನಿಕ ದಾಳಿಗಳನ್ನು ನಡೆಸಿದೆ. ಇಸ್ಲಾಮಾಬಾದ್‌ನ ಶಿಯಾ ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯೂ ಈ ದಾಳಿಗಳಲ್ಲಿ ಸೇರಿದ್ದು, ಆ ಘಟನೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಹಲವು ಜನರು ಸಾವನ್ನಪ್ಪಿದ್ದರು ಎಂದು ಅಲ್‌-ಜಝೀರಾ ವರದಿ ಮಾಡಿದೆ.

ತಾಲಿಬಾನ್ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್ ಪ್ರಕಾರ, ಈ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ನಾಗರಿಕರು ಸಾವನ್ನಪ್ಪಿದ್ದಾರೆ. ನಂಗರ್ಹಾರ್‌ನಲ್ಲಿ ಒಂದೇ ಕುಟುಂಬದ 17 ರಿಂದ 23 ಸದಸ್ಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಆದರೂ, ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯ ಕುರಿತು ಬೇರೆ ಬೇರೆ ವರದಿಗಳಿವೆ. ಈ ಕುರಿತು ಖಚಿತ ಮಾಹಿತಿ ದೊರೆತಿಲ್ಲ.

ಅಫ್ಘಾನಿಸ್ತಾನದ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳ ಪ್ರಕಾರ, ಕನಿಷ್ಠ 20ರಿಂದ 46 ನಾಗರಿಕರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

ಪಕ್ತಿಕಾ ಪ್ರಾಂತ್ಯದ ಬರ್ಮಲ್ ಜಿಲ್ಲೆಯಲ್ಲಿ ಒಂದು ಮನೆಯ ಮೇಲೆ ನಡೆದ ದಾಳಿಯಲ್ಲಿ ಒಂದೇ ಕುಟುಂಬದ 17 ಸದಸ್ಯರು (ಅದರಲ್ಲಿ 12 ಮಕ್ಕಳು ಮತ್ತು ಹದಿಹರೆಯದವರು) ಮೃತಪಟ್ಟಿದ್ದಾರೆ.

ಪಕ್ತಿಕಾ ಪ್ರಾಂತ್ಯದ ಮದರಸಾವೊಂದರ ಮೇಲೆ ನಡೆದ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಈ ದಾಳಿಯಲ್ಲಿ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಗೆ ಸೇರಿದ ಕನಿಷ್ಠ 28 ಉಗ್ರರು ಹತರಾಗಿದ್ದಾರೆ.

ಅಫ್ಘಾನಿಸ್ತಾನದ ಸಾರ್ವಭೌಮತ್ವವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ತಾಲಿಬಾನ್ ಖಂಡಿಸಿದೆ. ಅಲ್ಲದೆ, ಸೂಕ್ತ ಸಮಯದಲ್ಲಿ ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ಪಾಕಿಸ್ತಾನದ ಇಸ್ಲಾಮಾಬಾದ್‌ನ ಬಜೌರ್ ಮತ್ತು ಬನ್ನು ಪ್ರದೇಶಗಳಲ್ಲಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಗಳು ನಡೆದಿತ್ತು. ಈ ದಾಳಿಗಳನ್ನು ಅಫ್ಘಾನಿಸ್ತಾನ ಮೂಲದ ಟಿಟಿಪಿ ಮತ್ತು ಐಸಿಸ್ ಉಗ್ರರು ನಡೆಸಿದ್ದಾರೆ ಎಂದು ಪಾಕಿಸ್ತಾನ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...