Homeಅಂತರಾಷ್ಟ್ರೀಯಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

ಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

- Advertisement -
- Advertisement -

ಲಾಹೋರ್: ನೆರೆಯ ಅಫ್ಘಾನಿಸ್ತಾನದಲ್ಲಿನ  ಶಂಕಿತ ಭಯೋತ್ಪಾದಕರ ಮೇಲೆ ಪಾಕಿಸ್ತಾನವು ಮಂಗಳವಾರ  ತಡರಾತ್ರಿ ನಡೆಸಿದ ವಾಯುದಾಳಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಲಿಬಾನ್  ಸರಕಾರವು ಇದನ್ನು ಏಕಪಕ್ಷೀಯ ವೈಮಾನಿಕ ದಾಳಿಯೆಂದು ಖಂಡಿಸಿದೆ ಮತ್ತು ಪ್ರತೀಕಾರದ ಎಚ್ಚರಿಕೆ ನೀಡಿದೆ.

ದಾಳಿಯು ಪಾಕಿಸ್ತಾನಿ ತಾಲಿಬಾನ್‌ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಗಳನ್ನು ಗುರಿಯಾಗಿಸಿಕೊಂಡಿತ್ತು ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಪಕ್ಟಿಕಾ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

ದಾಳಿಯಲ್ಲಿ 7 ಹಳ್ಳಿಗಳನ್ನು ಗುರಿ ಮಾಡಲಾಗಿತ್ತು.  ಅವುಗಳಲ್ಲಿ ಒಂದು ಸಂಪೂರ್ಣವಾಗಿ ನಾಶವಾಗಿದೆ. ನಮ್ಮ ತರಬೇತಿ ಪರಿಕರಗಳನ್ನು ಸಂಪೂರ್ಣ  ಹಾಳುಗೆಡುವುಲಾಗಿದೆ. ಹಾಗೆಯೇ ಕೆಲವು ಭಯೋತ್ಪಾದಕರು  ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಮಾಧ್ಯಮ ವರದಿ ಮಾಡಿವೆ.

ತಾಲಿಬಾನ್‌ನ ರಕ್ಷಣಾ ಸಚಿವಾಲಯವು ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಖಂಡಿಸಿದೆ. ಪಾಕ್ ನಮ್ಮ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ ಮತ್ತು ಈ ದಾಳಿಯ  ಬಲಿಪಶುಗಳಲ್ಲಿ ಹೆಚ್ಚಿನವರು ವಜೀರಿಸ್ತಾನ್ ಪ್ರದೇಶದ ನಿರಾಶ್ರಿತರು ಎಂದು ಹೇಳಿದೆ.

ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನವು ಇದನ್ನು ಎಲ್ಲಾ ಅಂತರರಾಷ್ಟ್ರೀಯ ನಿಯಮಗಳನ್ನು ಗಾಳಿಗೆ ತೂರಿದ ಕ್ರೂರ ಕೃತ್ಯವೆಂದು ಪರಿಗಣಿಸಿದೆ ಮತ್ತು ಇದನ್ನು ಬಲವಾಗಿ ಖಂಡಿಸಿದೆ ಎಂದು ಆಫ್ಘಾನಿಸ್ತಾನದ ಸಚಿವಾಲಯ ಹೇಳಿದೆ.

ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ತನ್ನ ದೇಶದ ಮೇಲೆ ಅಫ್ಘಾನ್ ನೆಲದಿಂದ ದಾಳಿ ನಡೆಸುತ್ತದೆ ಎಂದು ಪಾಕ್  ಹೇಳುತ್ತಿರುತ್ತದೆ. ಇದನ್ನು ಅಫ್ಘಾನ್  ನಿರಾಕರಿಸಿದೆ.

ವೈಮಾನಿಕ ದಾಳಿಯನ್ನು “ಹೇಡಿಗಳ ಕೃತ್ಯ” ಎಂದು ಕರೆದ ಸಚಿವಾಲಯ, ಪಾಕಿಸ್ತಾನದ ಈ “ಏಕಪಕ್ಷೀಯ ವೈಮಾನಿಕ ದಾಳಿ” ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಮತ್ತು ತನ್ನ ಭೂಪ್ರದೇಶ ಮತ್ತು ಭೂಪ್ರದೇಶದ ರಕ್ಷಣೆಯಿಂದ ಬೇರ್ಪಡಿಸಲಾಗದು  ಎಂದು ಹೇಳಿದೆ.

ಅಫ್ಘಾನಿಸ್ತಾನದ ಪಾಕಿಸ್ತಾನದ ವಿಶೇಷ ಪ್ರತಿನಿಧಿ ಮೊಹಮ್ಮದ್ ಸಾದಿಕ್ ಅವರು ಕಾಬೂಲ್‌ನಲ್ಲಿ ತಾಲಿಬಾನ್ ನಾಯಕತ್ವವನ್ನು ಭೇಟಿಯಾಗಿ ಬಾಂಧವ್ಯವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದ ಕೆಲ ಸಮಯಗಳ ನಂತರ ಈ ದಾಳಿ ಸಂಭವಿಸಿದೆ.

ಭೇಟಿಯ ಸಮಯದಲ್ಲಿ, ಸಾದಿಕ್ ಅಫ್ಘಾನಿಸ್ತಾನದ ಹಂಗಾಮಿ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ ಅವರನ್ನು ಭೇಟಿಯಾದರು. ಅವರ ಚಿಕ್ಕಪ್ಪ ಖಲೀಲ್ ಹಕ್ಕಾನಿ ಇತ್ತೀಚೆಗೆ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು ಎಂದು ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಾದೇಶಿಕ ಅಂಗಸಂಸ್ಥೆಯು ಹೇಳಿಕೊಂಡಿದೆ. ಖಲೀಲ್ ಹಕ್ಕಾನಿ ಅವರು ಅಫ್ಘಾನ್ ನಲ್ಲಿ ನಿರಾಶ್ರಿತರು ಮತ್ತು ವಾಪಸಾತಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.

2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಿತು ಮತ್ತು ದೇಶದಲ್ಲಿ ತಾಲಿಬಾನ್ ಸ್ವಾಧೀನಪಡಿಸಿಕೊಂಡಿರುವುದು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಗೆ ಮತ್ತಷ್ಟು ಸ್ಥೈರ್ಯ ಬಂದಿದೆ.  ಇದರ ನಾಯಕರು ಮತ್ತು ಹೋರಾಟಗಾರರು ಅಫ್ಘಾನಿಸ್ತಾನದಲ್ಲಿ ಅಡಗಿಕೊಂಡಿದ್ದಾರೆ ಎಂದು ಪಾಕ್ ಆರೋಪಿಸುತ್ತಿದೆ.

ಕಾಬೂಲ್‌ನಲ್ಲಿ ಅಫ್ಘಾನಿಸ್ತಾನ ಸರ್ಕಾರವು ಆಯೋಜಿಸಿದ್ದ ತಿಂಗಳುಗಳ ಮಾತುಕತೆ ವಿಫಲವಾದ ನಂತರ ಪಾಕ್ ಸರ್ಕಾರದೊಂದಿಗೆ ಏಕಪಕ್ಷೀಯವಾಗಿ ಕದನ ವಿರಾಮವನ್ನು ಕೊನೆಗೊಳಿಸಿ, ನವೆಂಬರ್ 2022 ರಿಂದ ಟಿಟಿಪಿಯು ಪಾಕಿಸ್ತಾನಿ ಸೈನಿಕರು ಮತ್ತು ಪೊಲೀಸರ ಮೇಲೆ ದಾಳಿಯನ್ನು ಹೆಚ್ಚಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ, ಈ ಗುಂಪು ದೇಶದೊಳಗಿನ ದಾಳಿಗಳಲ್ಲಿ ಡಜನ್ ಗಟ್ಟಲೆ ಸೈನಿಕರನ್ನು ಕೊಂದುಹಾಕಿದೆ.

ಮಾರ್ಚ್‌ನಲ್ಲಿ, ಟಿಟಿಪಿಯ ಪಾಕಿಸ್ತಾನಿ ಪಡೆಗಳ ಮೇಲಿನ ಮಾರಣಾಂತಿಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನಿ ವಾಯುಪಡೆಯ ಜೆಟ್‌ಗಳು ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಪಕ್ಟಿಕಾ ಗಡಿ ಪ್ರದೇಶಗಳಲ್ಲಿ ಇದರ ವಿರುದ್ಧ ವೈಮಾನಿಕ ದಾಳಿ ನಡೆಸಿತು. ಇದರ  ಪರಿಣಾಮವಾಗಿ ಲೆಫ್ಟಿನೆಂಟ್ ಕರ್ನಲ್ ಮತ್ತು ಕ್ಯಾಪ್ಟನ್ ಸೇರಿದಂತೆ ಏಳು ಸೈನಿಕರು ಕೊಲ್ಲಲ್ಪಟ್ಟರು. ಈ ದಾಳಿಯ ಹೊಣೆಯನ್ನು ಟಿಟಿಪಿಯ ಹಫೀಜ್ ಗುಲ್ ಬಹದ್ದೂರ್ ಗುಂಪು ಹೊತ್ತುಕೊಂಡಿತ್ತು.

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...