Homeಅಂತರಾಷ್ಟ್ರೀಯಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

ಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

- Advertisement -
- Advertisement -

ಲಾಹೋರ್: ನೆರೆಯ ಅಫ್ಘಾನಿಸ್ತಾನದಲ್ಲಿನ  ಶಂಕಿತ ಭಯೋತ್ಪಾದಕರ ಮೇಲೆ ಪಾಕಿಸ್ತಾನವು ಮಂಗಳವಾರ  ತಡರಾತ್ರಿ ನಡೆಸಿದ ವಾಯುದಾಳಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಲಿಬಾನ್  ಸರಕಾರವು ಇದನ್ನು ಏಕಪಕ್ಷೀಯ ವೈಮಾನಿಕ ದಾಳಿಯೆಂದು ಖಂಡಿಸಿದೆ ಮತ್ತು ಪ್ರತೀಕಾರದ ಎಚ್ಚರಿಕೆ ನೀಡಿದೆ.

ದಾಳಿಯು ಪಾಕಿಸ್ತಾನಿ ತಾಲಿಬಾನ್‌ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಗಳನ್ನು ಗುರಿಯಾಗಿಸಿಕೊಂಡಿತ್ತು ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಪಕ್ಟಿಕಾ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

ದಾಳಿಯಲ್ಲಿ 7 ಹಳ್ಳಿಗಳನ್ನು ಗುರಿ ಮಾಡಲಾಗಿತ್ತು.  ಅವುಗಳಲ್ಲಿ ಒಂದು ಸಂಪೂರ್ಣವಾಗಿ ನಾಶವಾಗಿದೆ. ನಮ್ಮ ತರಬೇತಿ ಪರಿಕರಗಳನ್ನು ಸಂಪೂರ್ಣ  ಹಾಳುಗೆಡುವುಲಾಗಿದೆ. ಹಾಗೆಯೇ ಕೆಲವು ಭಯೋತ್ಪಾದಕರು  ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಮಾಧ್ಯಮ ವರದಿ ಮಾಡಿವೆ.

ತಾಲಿಬಾನ್‌ನ ರಕ್ಷಣಾ ಸಚಿವಾಲಯವು ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಖಂಡಿಸಿದೆ. ಪಾಕ್ ನಮ್ಮ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ ಮತ್ತು ಈ ದಾಳಿಯ  ಬಲಿಪಶುಗಳಲ್ಲಿ ಹೆಚ್ಚಿನವರು ವಜೀರಿಸ್ತಾನ್ ಪ್ರದೇಶದ ನಿರಾಶ್ರಿತರು ಎಂದು ಹೇಳಿದೆ.

ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನವು ಇದನ್ನು ಎಲ್ಲಾ ಅಂತರರಾಷ್ಟ್ರೀಯ ನಿಯಮಗಳನ್ನು ಗಾಳಿಗೆ ತೂರಿದ ಕ್ರೂರ ಕೃತ್ಯವೆಂದು ಪರಿಗಣಿಸಿದೆ ಮತ್ತು ಇದನ್ನು ಬಲವಾಗಿ ಖಂಡಿಸಿದೆ ಎಂದು ಆಫ್ಘಾನಿಸ್ತಾನದ ಸಚಿವಾಲಯ ಹೇಳಿದೆ.

ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ತನ್ನ ದೇಶದ ಮೇಲೆ ಅಫ್ಘಾನ್ ನೆಲದಿಂದ ದಾಳಿ ನಡೆಸುತ್ತದೆ ಎಂದು ಪಾಕ್  ಹೇಳುತ್ತಿರುತ್ತದೆ. ಇದನ್ನು ಅಫ್ಘಾನ್  ನಿರಾಕರಿಸಿದೆ.

ವೈಮಾನಿಕ ದಾಳಿಯನ್ನು “ಹೇಡಿಗಳ ಕೃತ್ಯ” ಎಂದು ಕರೆದ ಸಚಿವಾಲಯ, ಪಾಕಿಸ್ತಾನದ ಈ “ಏಕಪಕ್ಷೀಯ ವೈಮಾನಿಕ ದಾಳಿ” ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಮತ್ತು ತನ್ನ ಭೂಪ್ರದೇಶ ಮತ್ತು ಭೂಪ್ರದೇಶದ ರಕ್ಷಣೆಯಿಂದ ಬೇರ್ಪಡಿಸಲಾಗದು  ಎಂದು ಹೇಳಿದೆ.

ಅಫ್ಘಾನಿಸ್ತಾನದ ಪಾಕಿಸ್ತಾನದ ವಿಶೇಷ ಪ್ರತಿನಿಧಿ ಮೊಹಮ್ಮದ್ ಸಾದಿಕ್ ಅವರು ಕಾಬೂಲ್‌ನಲ್ಲಿ ತಾಲಿಬಾನ್ ನಾಯಕತ್ವವನ್ನು ಭೇಟಿಯಾಗಿ ಬಾಂಧವ್ಯವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದ ಕೆಲ ಸಮಯಗಳ ನಂತರ ಈ ದಾಳಿ ಸಂಭವಿಸಿದೆ.

ಭೇಟಿಯ ಸಮಯದಲ್ಲಿ, ಸಾದಿಕ್ ಅಫ್ಘಾನಿಸ್ತಾನದ ಹಂಗಾಮಿ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ ಅವರನ್ನು ಭೇಟಿಯಾದರು. ಅವರ ಚಿಕ್ಕಪ್ಪ ಖಲೀಲ್ ಹಕ್ಕಾನಿ ಇತ್ತೀಚೆಗೆ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು ಎಂದು ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಾದೇಶಿಕ ಅಂಗಸಂಸ್ಥೆಯು ಹೇಳಿಕೊಂಡಿದೆ. ಖಲೀಲ್ ಹಕ್ಕಾನಿ ಅವರು ಅಫ್ಘಾನ್ ನಲ್ಲಿ ನಿರಾಶ್ರಿತರು ಮತ್ತು ವಾಪಸಾತಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.

2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಿತು ಮತ್ತು ದೇಶದಲ್ಲಿ ತಾಲಿಬಾನ್ ಸ್ವಾಧೀನಪಡಿಸಿಕೊಂಡಿರುವುದು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಗೆ ಮತ್ತಷ್ಟು ಸ್ಥೈರ್ಯ ಬಂದಿದೆ.  ಇದರ ನಾಯಕರು ಮತ್ತು ಹೋರಾಟಗಾರರು ಅಫ್ಘಾನಿಸ್ತಾನದಲ್ಲಿ ಅಡಗಿಕೊಂಡಿದ್ದಾರೆ ಎಂದು ಪಾಕ್ ಆರೋಪಿಸುತ್ತಿದೆ.

ಕಾಬೂಲ್‌ನಲ್ಲಿ ಅಫ್ಘಾನಿಸ್ತಾನ ಸರ್ಕಾರವು ಆಯೋಜಿಸಿದ್ದ ತಿಂಗಳುಗಳ ಮಾತುಕತೆ ವಿಫಲವಾದ ನಂತರ ಪಾಕ್ ಸರ್ಕಾರದೊಂದಿಗೆ ಏಕಪಕ್ಷೀಯವಾಗಿ ಕದನ ವಿರಾಮವನ್ನು ಕೊನೆಗೊಳಿಸಿ, ನವೆಂಬರ್ 2022 ರಿಂದ ಟಿಟಿಪಿಯು ಪಾಕಿಸ್ತಾನಿ ಸೈನಿಕರು ಮತ್ತು ಪೊಲೀಸರ ಮೇಲೆ ದಾಳಿಯನ್ನು ಹೆಚ್ಚಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ, ಈ ಗುಂಪು ದೇಶದೊಳಗಿನ ದಾಳಿಗಳಲ್ಲಿ ಡಜನ್ ಗಟ್ಟಲೆ ಸೈನಿಕರನ್ನು ಕೊಂದುಹಾಕಿದೆ.

ಮಾರ್ಚ್‌ನಲ್ಲಿ, ಟಿಟಿಪಿಯ ಪಾಕಿಸ್ತಾನಿ ಪಡೆಗಳ ಮೇಲಿನ ಮಾರಣಾಂತಿಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನಿ ವಾಯುಪಡೆಯ ಜೆಟ್‌ಗಳು ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಪಕ್ಟಿಕಾ ಗಡಿ ಪ್ರದೇಶಗಳಲ್ಲಿ ಇದರ ವಿರುದ್ಧ ವೈಮಾನಿಕ ದಾಳಿ ನಡೆಸಿತು. ಇದರ  ಪರಿಣಾಮವಾಗಿ ಲೆಫ್ಟಿನೆಂಟ್ ಕರ್ನಲ್ ಮತ್ತು ಕ್ಯಾಪ್ಟನ್ ಸೇರಿದಂತೆ ಏಳು ಸೈನಿಕರು ಕೊಲ್ಲಲ್ಪಟ್ಟರು. ಈ ದಾಳಿಯ ಹೊಣೆಯನ್ನು ಟಿಟಿಪಿಯ ಹಫೀಜ್ ಗುಲ್ ಬಹದ್ದೂರ್ ಗುಂಪು ಹೊತ್ತುಕೊಂಡಿತ್ತು.

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...