Homeಅಂತರಾಷ್ಟ್ರೀಯಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

ಅಘ್ಘಾನಿಸ್ತಾನದ ಭಯೋತ್ಪಾದಕರ ಮೇಲೆ ಪಾಕ್ ವಾಯುದಾಳಿ: 15 ಜನ ಸಾವು; ತಾಲಿಬಾನ್ ತೀವ್ರ ಖಂಡನೆ

- Advertisement -
- Advertisement -

ಲಾಹೋರ್: ನೆರೆಯ ಅಫ್ಘಾನಿಸ್ತಾನದಲ್ಲಿನ  ಶಂಕಿತ ಭಯೋತ್ಪಾದಕರ ಮೇಲೆ ಪಾಕಿಸ್ತಾನವು ಮಂಗಳವಾರ  ತಡರಾತ್ರಿ ನಡೆಸಿದ ವಾಯುದಾಳಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಲಿಬಾನ್  ಸರಕಾರವು ಇದನ್ನು ಏಕಪಕ್ಷೀಯ ವೈಮಾನಿಕ ದಾಳಿಯೆಂದು ಖಂಡಿಸಿದೆ ಮತ್ತು ಪ್ರತೀಕಾರದ ಎಚ್ಚರಿಕೆ ನೀಡಿದೆ.

ದಾಳಿಯು ಪಾಕಿಸ್ತಾನಿ ತಾಲಿಬಾನ್‌ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಗಳನ್ನು ಗುರಿಯಾಗಿಸಿಕೊಂಡಿತ್ತು ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಪಕ್ಟಿಕಾ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

ದಾಳಿಯಲ್ಲಿ 7 ಹಳ್ಳಿಗಳನ್ನು ಗುರಿ ಮಾಡಲಾಗಿತ್ತು.  ಅವುಗಳಲ್ಲಿ ಒಂದು ಸಂಪೂರ್ಣವಾಗಿ ನಾಶವಾಗಿದೆ. ನಮ್ಮ ತರಬೇತಿ ಪರಿಕರಗಳನ್ನು ಸಂಪೂರ್ಣ  ಹಾಳುಗೆಡುವುಲಾಗಿದೆ. ಹಾಗೆಯೇ ಕೆಲವು ಭಯೋತ್ಪಾದಕರು  ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಮಾಧ್ಯಮ ವರದಿ ಮಾಡಿವೆ.

ತಾಲಿಬಾನ್‌ನ ರಕ್ಷಣಾ ಸಚಿವಾಲಯವು ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಖಂಡಿಸಿದೆ. ಪಾಕ್ ನಮ್ಮ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ ಮತ್ತು ಈ ದಾಳಿಯ  ಬಲಿಪಶುಗಳಲ್ಲಿ ಹೆಚ್ಚಿನವರು ವಜೀರಿಸ್ತಾನ್ ಪ್ರದೇಶದ ನಿರಾಶ್ರಿತರು ಎಂದು ಹೇಳಿದೆ.

ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನವು ಇದನ್ನು ಎಲ್ಲಾ ಅಂತರರಾಷ್ಟ್ರೀಯ ನಿಯಮಗಳನ್ನು ಗಾಳಿಗೆ ತೂರಿದ ಕ್ರೂರ ಕೃತ್ಯವೆಂದು ಪರಿಗಣಿಸಿದೆ ಮತ್ತು ಇದನ್ನು ಬಲವಾಗಿ ಖಂಡಿಸಿದೆ ಎಂದು ಆಫ್ಘಾನಿಸ್ತಾನದ ಸಚಿವಾಲಯ ಹೇಳಿದೆ.

ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ತನ್ನ ದೇಶದ ಮೇಲೆ ಅಫ್ಘಾನ್ ನೆಲದಿಂದ ದಾಳಿ ನಡೆಸುತ್ತದೆ ಎಂದು ಪಾಕ್  ಹೇಳುತ್ತಿರುತ್ತದೆ. ಇದನ್ನು ಅಫ್ಘಾನ್  ನಿರಾಕರಿಸಿದೆ.

ವೈಮಾನಿಕ ದಾಳಿಯನ್ನು “ಹೇಡಿಗಳ ಕೃತ್ಯ” ಎಂದು ಕರೆದ ಸಚಿವಾಲಯ, ಪಾಕಿಸ್ತಾನದ ಈ “ಏಕಪಕ್ಷೀಯ ವೈಮಾನಿಕ ದಾಳಿ” ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಮತ್ತು ತನ್ನ ಭೂಪ್ರದೇಶ ಮತ್ತು ಭೂಪ್ರದೇಶದ ರಕ್ಷಣೆಯಿಂದ ಬೇರ್ಪಡಿಸಲಾಗದು  ಎಂದು ಹೇಳಿದೆ.

ಅಫ್ಘಾನಿಸ್ತಾನದ ಪಾಕಿಸ್ತಾನದ ವಿಶೇಷ ಪ್ರತಿನಿಧಿ ಮೊಹಮ್ಮದ್ ಸಾದಿಕ್ ಅವರು ಕಾಬೂಲ್‌ನಲ್ಲಿ ತಾಲಿಬಾನ್ ನಾಯಕತ್ವವನ್ನು ಭೇಟಿಯಾಗಿ ಬಾಂಧವ್ಯವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದ ಕೆಲ ಸಮಯಗಳ ನಂತರ ಈ ದಾಳಿ ಸಂಭವಿಸಿದೆ.

ಭೇಟಿಯ ಸಮಯದಲ್ಲಿ, ಸಾದಿಕ್ ಅಫ್ಘಾನಿಸ್ತಾನದ ಹಂಗಾಮಿ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿ ಅವರನ್ನು ಭೇಟಿಯಾದರು. ಅವರ ಚಿಕ್ಕಪ್ಪ ಖಲೀಲ್ ಹಕ್ಕಾನಿ ಇತ್ತೀಚೆಗೆ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು ಎಂದು ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಾದೇಶಿಕ ಅಂಗಸಂಸ್ಥೆಯು ಹೇಳಿಕೊಂಡಿದೆ. ಖಲೀಲ್ ಹಕ್ಕಾನಿ ಅವರು ಅಫ್ಘಾನ್ ನಲ್ಲಿ ನಿರಾಶ್ರಿತರು ಮತ್ತು ವಾಪಸಾತಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.

2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಿತು ಮತ್ತು ದೇಶದಲ್ಲಿ ತಾಲಿಬಾನ್ ಸ್ವಾಧೀನಪಡಿಸಿಕೊಂಡಿರುವುದು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಗೆ ಮತ್ತಷ್ಟು ಸ್ಥೈರ್ಯ ಬಂದಿದೆ.  ಇದರ ನಾಯಕರು ಮತ್ತು ಹೋರಾಟಗಾರರು ಅಫ್ಘಾನಿಸ್ತಾನದಲ್ಲಿ ಅಡಗಿಕೊಂಡಿದ್ದಾರೆ ಎಂದು ಪಾಕ್ ಆರೋಪಿಸುತ್ತಿದೆ.

ಕಾಬೂಲ್‌ನಲ್ಲಿ ಅಫ್ಘಾನಿಸ್ತಾನ ಸರ್ಕಾರವು ಆಯೋಜಿಸಿದ್ದ ತಿಂಗಳುಗಳ ಮಾತುಕತೆ ವಿಫಲವಾದ ನಂತರ ಪಾಕ್ ಸರ್ಕಾರದೊಂದಿಗೆ ಏಕಪಕ್ಷೀಯವಾಗಿ ಕದನ ವಿರಾಮವನ್ನು ಕೊನೆಗೊಳಿಸಿ, ನವೆಂಬರ್ 2022 ರಿಂದ ಟಿಟಿಪಿಯು ಪಾಕಿಸ್ತಾನಿ ಸೈನಿಕರು ಮತ್ತು ಪೊಲೀಸರ ಮೇಲೆ ದಾಳಿಯನ್ನು ಹೆಚ್ಚಿಸಿದೆ. ಇತ್ತೀಚಿನ ತಿಂಗಳುಗಳಲ್ಲಿ, ಈ ಗುಂಪು ದೇಶದೊಳಗಿನ ದಾಳಿಗಳಲ್ಲಿ ಡಜನ್ ಗಟ್ಟಲೆ ಸೈನಿಕರನ್ನು ಕೊಂದುಹಾಕಿದೆ.

ಮಾರ್ಚ್‌ನಲ್ಲಿ, ಟಿಟಿಪಿಯ ಪಾಕಿಸ್ತಾನಿ ಪಡೆಗಳ ಮೇಲಿನ ಮಾರಣಾಂತಿಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನಿ ವಾಯುಪಡೆಯ ಜೆಟ್‌ಗಳು ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಪಕ್ಟಿಕಾ ಗಡಿ ಪ್ರದೇಶಗಳಲ್ಲಿ ಇದರ ವಿರುದ್ಧ ವೈಮಾನಿಕ ದಾಳಿ ನಡೆಸಿತು. ಇದರ  ಪರಿಣಾಮವಾಗಿ ಲೆಫ್ಟಿನೆಂಟ್ ಕರ್ನಲ್ ಮತ್ತು ಕ್ಯಾಪ್ಟನ್ ಸೇರಿದಂತೆ ಏಳು ಸೈನಿಕರು ಕೊಲ್ಲಲ್ಪಟ್ಟರು. ಈ ದಾಳಿಯ ಹೊಣೆಯನ್ನು ಟಿಟಿಪಿಯ ಹಫೀಜ್ ಗುಲ್ ಬಹದ್ದೂರ್ ಗುಂಪು ಹೊತ್ತುಕೊಂಡಿತ್ತು.

25 ವರ್ಷಗಳಿಂದ ಹಿಮಾಚಲ ವೃದ್ಧಾಶ್ರಮದಲ್ಲಿ ವಾಸ; ಕನ್ನಡಿಗ ಐಪಿಎಸ್ ಅಧಿಕಾರಿಯಿಂದ ಕುಟುಂಬ ಸೇರಿದ ಸಾಕಮ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...