Homeಅಂತರಾಷ್ಟ್ರೀಯಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು

- Advertisement -
- Advertisement -

ಉದ್ರೇಕಿತ ಜನಸಮೂಹವೊಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹಿಂದೂ ದೇವಾಲಯವೊಂದನ್ನು ಧ್ವಂಸಗೊಳಿಸಿದೆ. ಅದು 300 ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದು, ಆದರೆ ಮುಸ್ಲಿಮರು ತಮ್ಮ ನೆರೆಹೊರೆಗೆ ಪ್ರವೇಶಿಸದಂತೆ ಆ ಗುಂಪನ್ನು ತಡೆದರು ಎಂದು ಮಾಧ್ಯಮ ವರದಿ ತಿಳಿಸಿದೆ.

ಶೀತಲ್ ದಾಸ್ ಕಾಂಪೌಂಡ್‌ನಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ 300 ಹಿಂದೂ ಮತ್ತು 30 ಮುಸ್ಲಿಂ ಕುಟುಂಬಗಳು ವಾಸಿಸುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹಲವಾರು ಪುರುಷರು ಕಾಂಪೌಂಡ್‌ನ ಏಕೈಕ ಗೇಟ್‌ನ ಹೊರಗೆ ಒಟ್ಟುಗೂಡಿದ್ದರು ಮತ್ತು ಅವರಲ್ಲಿ ಅನೇಕರು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಉದ್ದೇಶಿಸಿದ್ದರು” ಎಂದು ನೆರೆಹೊರೆಯ ನಿವಾಸಿಗಳು ಹೇಳಿದರು.

“ಆದಾಗ್ಯೂ, ಕಾಂಪೌಂಡ್ ಮತ್ತು ಅದರ ಸುತ್ತಮುತ್ತ ವಾಸಿಸುವ ಮುಸ್ಲಿಂ ಕುಟುಂಬಗಳು ಉದ್ರೇಕಿತ ಜನಸಮೂಹವನ್ನು ಆ ಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಮುಂದಾಗಿದ್ದರು. ಪೊಲೀಸರು ಸಹ ಅವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದರು” ಎಂದು ಅನಾಮಧೇಯ ಹಿಂದೂ ವ್ಯಕ್ತಿಯೊಬ್ಬರು ಹೇಳಿದರು.

ಇದನ್ನೂ ಓದಿ: ವಿಜಯವಾಡದಲ್ಲಿ ತಲೆಯೆತ್ತಲಿದೆ 125 ಅಡಿಯ ಅಂಬೇಡ್ಕರ್ ಕಂಚಿನ ಪ್ರತಿಮೆ!

ಅವರು ಕಾಂಪೌಂಡ್‌ನ ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಬಯಸಿದ್ದರು. ಆದರೆ ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದರು. ಆದಾಗ್ಯೂ, ಇತರ ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಸಮಯದಲ್ಲಿ ಮೂರು ವಿಗ್ರಹಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.

“ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಈ ಘಟನೆಯ ನಂತರ 60 ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಮಂಗಳವಾರದ ವೇಳೆಗೆ ನಗರದ ಇತರ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಭಯ ಇನ್ನೂ ಇದೆ. ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತವೆಂದು ಭಾವಿಸುವ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ನಿವಾಸಿಯೊಬ್ಬರು ಹೇಳಿದರು.

ಹಿಂದೂ ಸಮುದಾಯದ ಹಿರಿಯರೊಬ್ಬರು, “ನನ್ನ ಜೀವನದುದ್ದಕ್ಕೂ ಆ ಕಾಂಪೌಂಡ್‌ನಲ್ಲಿ ಬದುಕಿದ್ದೇನೆ. ಆದರೆ ಇದುವರೆಗೂ ಈ ರೀತಿಯ ದಾಳಿಯನ್ನು ನೋಡಿಲ್ಲ” ಎಂದು ಹೇಳಿದರು.

ಮುಸ್ಲಿಂ ಬಹುಸಂಖ್ಯಾತ ಪಾಕಿಸ್ತಾನದ 220 ದಶಲಕ್ಷ ಜನಸಂಖ್ಯೆಯಲ್ಲಿ ಹಿಂದೂಗಳು ಶೇಕಡಾ 2 ರಷ್ಟಿದ್ದಾರೆ. ಹೆಚ್ಚಿನ ಹಿಂದೂಗಳು ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿಯೊಂದು ದೇಶದಲ್ಲಿಯೂ ಅಲ್ಪಸಂಖ್ಯಾತರು ನಿರ್ಬೀತಿಯಿಂದ ಬದುಕುವಂತಾಗಬೇಕು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...