Homeಅಂತರಾಷ್ಟ್ರೀಯಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು

- Advertisement -
- Advertisement -

ಉದ್ರೇಕಿತ ಜನಸಮೂಹವೊಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹಿಂದೂ ದೇವಾಲಯವೊಂದನ್ನು ಧ್ವಂಸಗೊಳಿಸಿದೆ. ಅದು 300 ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದು, ಆದರೆ ಮುಸ್ಲಿಮರು ತಮ್ಮ ನೆರೆಹೊರೆಗೆ ಪ್ರವೇಶಿಸದಂತೆ ಆ ಗುಂಪನ್ನು ತಡೆದರು ಎಂದು ಮಾಧ್ಯಮ ವರದಿ ತಿಳಿಸಿದೆ.

ಶೀತಲ್ ದಾಸ್ ಕಾಂಪೌಂಡ್‌ನಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ 300 ಹಿಂದೂ ಮತ್ತು 30 ಮುಸ್ಲಿಂ ಕುಟುಂಬಗಳು ವಾಸಿಸುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹಲವಾರು ಪುರುಷರು ಕಾಂಪೌಂಡ್‌ನ ಏಕೈಕ ಗೇಟ್‌ನ ಹೊರಗೆ ಒಟ್ಟುಗೂಡಿದ್ದರು ಮತ್ತು ಅವರಲ್ಲಿ ಅನೇಕರು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಉದ್ದೇಶಿಸಿದ್ದರು” ಎಂದು ನೆರೆಹೊರೆಯ ನಿವಾಸಿಗಳು ಹೇಳಿದರು.

“ಆದಾಗ್ಯೂ, ಕಾಂಪೌಂಡ್ ಮತ್ತು ಅದರ ಸುತ್ತಮುತ್ತ ವಾಸಿಸುವ ಮುಸ್ಲಿಂ ಕುಟುಂಬಗಳು ಉದ್ರೇಕಿತ ಜನಸಮೂಹವನ್ನು ಆ ಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಮುಂದಾಗಿದ್ದರು. ಪೊಲೀಸರು ಸಹ ಅವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದರು” ಎಂದು ಅನಾಮಧೇಯ ಹಿಂದೂ ವ್ಯಕ್ತಿಯೊಬ್ಬರು ಹೇಳಿದರು.

ಇದನ್ನೂ ಓದಿ: ವಿಜಯವಾಡದಲ್ಲಿ ತಲೆಯೆತ್ತಲಿದೆ 125 ಅಡಿಯ ಅಂಬೇಡ್ಕರ್ ಕಂಚಿನ ಪ್ರತಿಮೆ!

ಅವರು ಕಾಂಪೌಂಡ್‌ನ ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಬಯಸಿದ್ದರು. ಆದರೆ ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದರು. ಆದಾಗ್ಯೂ, ಇತರ ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಸಮಯದಲ್ಲಿ ಮೂರು ವಿಗ್ರಹಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.

“ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಈ ಘಟನೆಯ ನಂತರ 60 ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಮಂಗಳವಾರದ ವೇಳೆಗೆ ನಗರದ ಇತರ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಭಯ ಇನ್ನೂ ಇದೆ. ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತವೆಂದು ಭಾವಿಸುವ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ನಿವಾಸಿಯೊಬ್ಬರು ಹೇಳಿದರು.

ಹಿಂದೂ ಸಮುದಾಯದ ಹಿರಿಯರೊಬ್ಬರು, “ನನ್ನ ಜೀವನದುದ್ದಕ್ಕೂ ಆ ಕಾಂಪೌಂಡ್‌ನಲ್ಲಿ ಬದುಕಿದ್ದೇನೆ. ಆದರೆ ಇದುವರೆಗೂ ಈ ರೀತಿಯ ದಾಳಿಯನ್ನು ನೋಡಿಲ್ಲ” ಎಂದು ಹೇಳಿದರು.

ಮುಸ್ಲಿಂ ಬಹುಸಂಖ್ಯಾತ ಪಾಕಿಸ್ತಾನದ 220 ದಶಲಕ್ಷ ಜನಸಂಖ್ಯೆಯಲ್ಲಿ ಹಿಂದೂಗಳು ಶೇಕಡಾ 2 ರಷ್ಟಿದ್ದಾರೆ. ಹೆಚ್ಚಿನ ಹಿಂದೂಗಳು ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಪ್ರತಿಯೊಂದು ದೇಶದಲ್ಲಿಯೂ ಅಲ್ಪಸಂಖ್ಯಾತರು ನಿರ್ಬೀತಿಯಿಂದ ಬದುಕುವಂತಾಗಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...