Homeಅಂತರಾಷ್ಟ್ರೀಯಪಾಕಿಸ್ತಾನ: ಪ್ರಯಾಣಿಕರ ಬಸ್ ಮೇಲೆ ಬಾಂಬ್ ದಾಳಿ; 4 ಮಂದಿ ಸಾವು, 32 ಮಂದಿಗೆ ಗಾಯ

ಪಾಕಿಸ್ತಾನ: ಪ್ರಯಾಣಿಕರ ಬಸ್ ಮೇಲೆ ಬಾಂಬ್ ದಾಳಿ; 4 ಮಂದಿ ಸಾವು, 32 ಮಂದಿಗೆ ಗಾಯ

- Advertisement -
- Advertisement -

ಲಹೋರ್: ನಿಷೇಧಿತ ಪ್ರತ್ಯೇಕತಾವಾದಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಸಂಘಟನೆಯು ಶನಿವಾರ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಮೇಲೆ ಬಾಂಬ್ ದಾಳಿ ನಡೆಸಿದ್ದರಿಂದ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 32 ಮಂದಿ ಗಾಯಗೊಂಡಿದ್ದಾರೆ.

ಕರಾಚಿಯಿಂದ ಟರ್ಬತ್‌ಗೆ ಹೋಗುವ ಬಸ್‌ನ ಬಳಿ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡಾಗ ಟರ್ಬತ್ ನಗರದ ನ್ಯೂ ಬಹ್ಮನ್ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ.

4 ಮೃತದೇಹಗಳು ಮತ್ತು 32 ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟದ ನಿಖರವಾದ ವಿವರಗಳನ್ನು ತನಿಖೆ ಮಾಡಲಾಗುತ್ತಿದೆ. ಆದರರೆ ಉನ್ನತ ಶ್ರೇಣಿಯ ಪೊಲೀಸ್ ಅಧಿಕಾರಿ ಎಸ್‌ಎಸ್‌ಪಿ ಜೊಹೈಬ್ ಮೊಹ್ಸಿನ್ ಅವರು ಕುಟುಂಬದೊಂದಿಗೆ ಬಸ್‌ನಲ್ಲಿದ್ದರು. ಇವರನ್ನು ಗುರಿ ಮಾಡಿ ಈ ದಾಳಿ ನಡೆದಿರಬಹುದೆಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಮತ್ತು ಅವರ ಕುಟುಂಬವು ಮದುವೆ ಪಾರ್ಟಿಗಾಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಲೂಚಿಸ್ತಾನ್ ಪ್ರಾಂತ್ಯದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಅವರು ದಾಳಿಯನ್ನು ಖಂಡಿಸಿದ್ದು, ಅಮಾಯಕರನ್ನು ಗುರಿ ಮಾಡುವವರನ್ನು ಮನುಷ್ಯರು ಎಂದು ಕರೆಯಲು ಅರ್ಹರಲ್ಲ ಎಂದಿದದಾರೆ.

ಬಲೂಚ್ ಲಿಬರೇಶನ್ ಆರ್ಮಿ ಎಂಬ ಪ್ರತ್ಯೇಕತಾವಾದಿ ಗುಂಪು ಸ್ಫೋಟದ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಲೂಚಿಸ್ತಾನ್ ಪಾಕಿಸ್ತಾನದ ಅತಿದೊಡ್ಡ ಪ್ರಾಂತ್ಯವಾಗಿದೆ. ಆದರೆ ಕಡಿಮೆ ಜನಸಂಖ್ಯೆ ಹೊಂದಿದೆ. ಇದು ದೇಶದಲ್ಲಿ ಬಲೂಚ್ ಅಲ್ಪಸಂಖ್ಯಾತ ಜನಾಂಗದ ಕೇಂದ್ರವಾಗಿದೆ. ಇವರ ಪಾಕ್ ಸರ್ಕಾರದಿಂದ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಬಲೂಚ್ ಲಿಬರೇಶನ್ ಆರ್ಮಿಯ ಆರೋಪವಾಗಿದೆ.

ಬಲೂಚಿಸ್ತಾನ್ ದೀರ್ಘಾವಧಿಯಿಂದ ದಂಗೆಯನ್ನು ಕಾಣುತ್ತಿದೆ. ಹಲವಾರು ಪ್ರತ್ಯೇಕತಾವಾದಿ ಗುಂಪುಗಳು ದಾಳಿಗಳನ್ನು ನಡೆಸುತ್ತಿವೆ. ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡಿವೆ. ಅಲ್ಲಿಂದಲೇ ಕಾರ್ಯನಿರ್ವಹಿಸುತ್ತಿರುವ ಇತರ ಉಗ್ರಗಾಮಿ ಗುಂಪುಗಳನ್ನೂ ಈ ಪ್ರಾಂತ್ಯ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...